<p><strong>ಚಳ್ಳಕೆರೆ</strong>: ಹವಾಮಾನ ವೈಪರೀತ್ಯದಿಂದ ಉಷ್ಣಾಂಶ ಹೆಚ್ಚುತ್ತಿದ್ದು, ಚಿಕೂನ್ಗುನ್ಯ, ಮಲೇರಿಯಾ, ಡೆಂಗ್ಯೂ ಮುಂತಾದ ಸಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮೀಣ ಮತ್ತು ನಗರಪ್ರದೇಶದ ಜನರಲ್ಲಿ ಆರೋಗ್ಯದ ಅರಿವು ಮೂಡಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕಾಶಿ ಸೂಚಿಸಿದರು.</p>.<p>ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹವಾಮಾನ ವೈಪರೀತ್ಯ ಮತ್ತು ಮಾನವನ ಆರೋಗ್ಯ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸುಡು ಬಿಸಿಲಲ್ಲಿ ಹೆಚ್ಚು ತಿರುಗಾಟ ನಡೆಸದಂತೆ ಮಕ್ಕಳು ಹಾಗೂ ವೃದ್ಧರಿಗೆ ತಿಳಿವಳಿಕೆ ನೀಡಬೇಕು. ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯುವುದನ್ನು ಅಭ್ಯಾಸ ಮಾಡಿಸಬೇಕು ಎಂದು ಹೇಳಿದರು.</p>.<p>‘ಹವಾಮಾನ ವೈಪರೀತ್ಯ ತಡೆಯಲು ಸಾಧ್ಯವಿಲ್ಲ. ಹೀಗಾಗಿ ನೀರಿನ ಸೌಲಭ್ಯ ಇರುವ ಕಡೆಗೆ ಗಿಡ-ಮರಗಳನ್ನು ಹೆಚ್ಚು ಬೆಳೆಸಬೇಕು’ ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಸುರೇಶ್ಬಾಬು ಹೇಳಿದರು.</p>.<p>ಜಿಲ್ಲಾ ಮೇಲ್ವಿಚಾರಕ ಮಲ್ಲಿಕಾರ್ಜುನ, ಲೋಕೇಶ್ ನಾಯ್ಕ, ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್.ರಾಜು ಮಾತನಾಡಿದರು. ಆಸ್ಪತ್ರೆಯ ಸಿಬ್ಬಂದಿ ಅಮೃತರಾಜು, ಆಶಾ ಕಾರ್ಯಕರ್ತೆಯರಾದ ಗೀತಾ, ಮಂಜುಳಾ, ಕವಿತಾ, ಶ್ವೇತಾ, ಸುರ್ವಣಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಹವಾಮಾನ ವೈಪರೀತ್ಯದಿಂದ ಉಷ್ಣಾಂಶ ಹೆಚ್ಚುತ್ತಿದ್ದು, ಚಿಕೂನ್ಗುನ್ಯ, ಮಲೇರಿಯಾ, ಡೆಂಗ್ಯೂ ಮುಂತಾದ ಸಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮೀಣ ಮತ್ತು ನಗರಪ್ರದೇಶದ ಜನರಲ್ಲಿ ಆರೋಗ್ಯದ ಅರಿವು ಮೂಡಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕಾಶಿ ಸೂಚಿಸಿದರು.</p>.<p>ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹವಾಮಾನ ವೈಪರೀತ್ಯ ಮತ್ತು ಮಾನವನ ಆರೋಗ್ಯ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಸುಡು ಬಿಸಿಲಲ್ಲಿ ಹೆಚ್ಚು ತಿರುಗಾಟ ನಡೆಸದಂತೆ ಮಕ್ಕಳು ಹಾಗೂ ವೃದ್ಧರಿಗೆ ತಿಳಿವಳಿಕೆ ನೀಡಬೇಕು. ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯುವುದನ್ನು ಅಭ್ಯಾಸ ಮಾಡಿಸಬೇಕು ಎಂದು ಹೇಳಿದರು.</p>.<p>‘ಹವಾಮಾನ ವೈಪರೀತ್ಯ ತಡೆಯಲು ಸಾಧ್ಯವಿಲ್ಲ. ಹೀಗಾಗಿ ನೀರಿನ ಸೌಲಭ್ಯ ಇರುವ ಕಡೆಗೆ ಗಿಡ-ಮರಗಳನ್ನು ಹೆಚ್ಚು ಬೆಳೆಸಬೇಕು’ ಎಂದು ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಸುರೇಶ್ಬಾಬು ಹೇಳಿದರು.</p>.<p>ಜಿಲ್ಲಾ ಮೇಲ್ವಿಚಾರಕ ಮಲ್ಲಿಕಾರ್ಜುನ, ಲೋಕೇಶ್ ನಾಯ್ಕ, ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಎಚ್.ರಾಜು ಮಾತನಾಡಿದರು. ಆಸ್ಪತ್ರೆಯ ಸಿಬ್ಬಂದಿ ಅಮೃತರಾಜು, ಆಶಾ ಕಾರ್ಯಕರ್ತೆಯರಾದ ಗೀತಾ, ಮಂಜುಳಾ, ಕವಿತಾ, ಶ್ವೇತಾ, ಸುರ್ವಣಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>