<p><strong>ಚಿತ್ರದುರ್ಗ</strong>: ತಾಲ್ಲೂಕಿನಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಮಳೆಯಿಂದಾಗಿ ಮನೆಗಳ ಗೋಡೆ ಕುಸಿದು ಹಾನಿಗೆ ಒಳಗಾಗಿದ್ದ ಇಂಗಳದಾಳ್, ಜೆ.ಎನ್.ಕೋಟೆ, ನರೇನಹಾಳ್ ಗ್ರಾಮಕ್ಕೆ ಶನಿವಾರ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ತೊಂದರೆಗೆ ಒಳಗಾದವರಿಗೆ ಸಾಂತ್ವನ ಹೇಳಿದರು.</p>.<p>ಮಳೆಯಿಂದಾಗಿ ಜೆ.ಎನ್.ಕೋಟೆ ಗ್ರಾಮದಲ್ಲಿ 26 ಮನೆ, ನರೇನಹಾಳ್ನಲ್ಲಿ 7, ಕಳ್ಳಿರಪ್ಪದಲ್ಲಿ 3 ಮನೆ, ಇಂಗಳದಾಳ್ ಗ್ರಾಮದಲ್ಲಿ 15, ದೊಡ್ಡಸಿದ್ದವ್ವನಹಳ್ಳಿ 10, ಕ್ಯಾದಿಗೆರೆ 7 ಸೇರಿ ಕೆಲವೆಡೆ ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.<br />ಕೆಲವು ಸಂಪೂರ್ಣ ಕುಸಿದಿವೆ. ಈ ಕುರಿತು ಅಧಿಕಾರಿಗಳ ಜತೆ ಪರಿಶೀಲನೆ ನಡೆಸಿದರು.</p>.<p>‘ಜಿಲ್ಲೆಯಲ್ಲಿ ಮನೆಗಳ ಗೋಡೆ ಕುಸಿತದಿಂದಾಗಿ ಆರು ಜನ ಮೃತಪಟ್ಟಿದ್ದಾರೆ. ಆದ್ದರಿಂದ ಮಳೆಯಾದ ವೇಳೆ ಯಾರು ಕೂಡ ಶಿಥಿಲಾವಸ್ಥೆಯಲ್ಲಿ ಇರುವ ಮನೆಗಳಲ್ಲಿ ಇರಬೇಡಿ’ ಎಂದು ತಿಪ್ಪಾರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.</p>.<p>‘ತೊಂದರೆಗೆ ಒಳಗಾಗಿ ವಾಸಕ್ಕೆ ಪರದಾಡುತ್ತಿರುವ ಕುಟುಂಬಗಳಿಗೆ ಶಾಲೆ, ಸಮುದಾಯ ಭವನ, ದೇಗುಲಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ತಾತ್ಕಾಲಿಕವಾಗಿ ಪರಿಹಾರ ಕೂಡ ನೀಡಲಾಗುವುದು. ಯಾವುದೇ ಸಮಸ್ಯೆ ಉಂಟಾದರೂ ಗಮನಕ್ಕೆ ತನ್ನಿ’ ಎಂದು ತಿಳಿಸಿದರು.</p>.<p>ದೇವರ ಆಶೀರ್ವಾದದಿಂದ ಸದ್ಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಿಯೂ ಜೀವ ಹಾನಿ ಘಟನೆ ನಡೆದಿಲ್ಲ. ಹಾಗಂತ ಮೈಮರೆಯುವಂತಿಲ್ಲ. ಜನರು ಸಾಧ್ಯವಾದಷ್ಟು ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದ ನಂತರ ಸೂಕ್ತ ಪರಿಹಾರ ಸಿಗಲಿದೆ ಎಂದರು.</p>.<p>ಇದೇ ವೇಳೆ ತೊಂದರೆ ಒಳಗಾದ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಲಾಯಿತು. ಕಂದಾಯ ನಿರೀಕ್ಷಕ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ತಾಲ್ಲೂಕಿನಲ್ಲಿ ಗುರುವಾರ ಮತ್ತು ಶುಕ್ರವಾರ ಸುರಿದ ಮಳೆಯಿಂದಾಗಿ ಮನೆಗಳ ಗೋಡೆ ಕುಸಿದು ಹಾನಿಗೆ ಒಳಗಾಗಿದ್ದ ಇಂಗಳದಾಳ್, ಜೆ.ಎನ್.ಕೋಟೆ, ನರೇನಹಾಳ್ ಗ್ರಾಮಕ್ಕೆ ಶನಿವಾರ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು. ತೊಂದರೆಗೆ ಒಳಗಾದವರಿಗೆ ಸಾಂತ್ವನ ಹೇಳಿದರು.</p>.<p>ಮಳೆಯಿಂದಾಗಿ ಜೆ.ಎನ್.ಕೋಟೆ ಗ್ರಾಮದಲ್ಲಿ 26 ಮನೆ, ನರೇನಹಾಳ್ನಲ್ಲಿ 7, ಕಳ್ಳಿರಪ್ಪದಲ್ಲಿ 3 ಮನೆ, ಇಂಗಳದಾಳ್ ಗ್ರಾಮದಲ್ಲಿ 15, ದೊಡ್ಡಸಿದ್ದವ್ವನಹಳ್ಳಿ 10, ಕ್ಯಾದಿಗೆರೆ 7 ಸೇರಿ ಕೆಲವೆಡೆ ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ.<br />ಕೆಲವು ಸಂಪೂರ್ಣ ಕುಸಿದಿವೆ. ಈ ಕುರಿತು ಅಧಿಕಾರಿಗಳ ಜತೆ ಪರಿಶೀಲನೆ ನಡೆಸಿದರು.</p>.<p>‘ಜಿಲ್ಲೆಯಲ್ಲಿ ಮನೆಗಳ ಗೋಡೆ ಕುಸಿತದಿಂದಾಗಿ ಆರು ಜನ ಮೃತಪಟ್ಟಿದ್ದಾರೆ. ಆದ್ದರಿಂದ ಮಳೆಯಾದ ವೇಳೆ ಯಾರು ಕೂಡ ಶಿಥಿಲಾವಸ್ಥೆಯಲ್ಲಿ ಇರುವ ಮನೆಗಳಲ್ಲಿ ಇರಬೇಡಿ’ ಎಂದು ತಿಪ್ಪಾರೆಡ್ಡಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.</p>.<p>‘ತೊಂದರೆಗೆ ಒಳಗಾಗಿ ವಾಸಕ್ಕೆ ಪರದಾಡುತ್ತಿರುವ ಕುಟುಂಬಗಳಿಗೆ ಶಾಲೆ, ಸಮುದಾಯ ಭವನ, ದೇಗುಲಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದೆ. ತಾತ್ಕಾಲಿಕವಾಗಿ ಪರಿಹಾರ ಕೂಡ ನೀಡಲಾಗುವುದು. ಯಾವುದೇ ಸಮಸ್ಯೆ ಉಂಟಾದರೂ ಗಮನಕ್ಕೆ ತನ್ನಿ’ ಎಂದು ತಿಳಿಸಿದರು.</p>.<p>ದೇವರ ಆಶೀರ್ವಾದದಿಂದ ಸದ್ಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಿಯೂ ಜೀವ ಹಾನಿ ಘಟನೆ ನಡೆದಿಲ್ಲ. ಹಾಗಂತ ಮೈಮರೆಯುವಂತಿಲ್ಲ. ಜನರು ಸಾಧ್ಯವಾದಷ್ಟು ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ ಸರ್ಕಾರಕ್ಕೆ ವರದಿ ನೀಡಿದ ನಂತರ ಸೂಕ್ತ ಪರಿಹಾರ ಸಿಗಲಿದೆ ಎಂದರು.</p>.<p>ಇದೇ ವೇಳೆ ತೊಂದರೆ ಒಳಗಾದ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಲಾಯಿತು. ಕಂದಾಯ ನಿರೀಕ್ಷಕ ಶರಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>