<p><strong>ಚಳ್ಳಕೆರೆ: ‘</strong>ಮಕ್ಕಳಿಗೆ ಪಠ್ಯವಿಷಯ ಮನನ ಮಾಡಿಸಲು ಸರಳ ಬೋಧನಾ ವಿಧಾನ ಕಂಡುಕೊಳ್ಳುವುದಲ್ಲದೆ ಪ್ರತಿ ವಾರಕ್ಕೊಮ್ಮೆ ಅವರ ಕಲಿಕಾ ಪ್ರಗತಿ ತಪ್ಪದೆ ಪರಿಶೀಲಿಸಬೇಕು’ ಎಂದು ಮುಖ್ಯಶಿಕ್ಷಕ ಎ.ವೀರಣ್ಣ ಶಿಕ್ಷಕರಿಗೆ ಸೂಚನೆ ನೀಡಿದರು.</p>.<p>ನಗರದ ಹೆಗ್ಗೆರೆ ತಾಯಮ್ಮ ಮತ್ತು ತಿಪ್ಪೇಸ್ವಾಮಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಮಾಹಿತಿ ಪೋಷಕರಿಗೆ ಕಳುಹಿಸಬೇಕು. ಕಲಿಕೆಯ ಬಗ್ಗೆ ಹೆಚ್ಚು ಕಾಳಜಿವಹಿಸಿ ಶಾಲಾ ನಂತರ ಪ್ರತಿದಿನ ಒಂದು ಗಂಟೆ ಶಿಕ್ಷಕರು ವಿಶೇಷ ತರಗತಿ ತೆಗೆದುಕೊಳ್ಳುವ ಮೂಲಕ ಆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು’ ಎಂದು ಹೇಳಿದರು.</p>.<p>‘ಕಥೆ, ಕಾವ್ಯ ಹಾಗೂ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ ಮುಂತಾದ ಚಿಕ್ಕ ಚಿಕ್ಕ ಪುಸ್ತಕಗಳನ್ನು ಮಕ್ಕಳ ಕೈಗೆ ಕೊಟ್ಟು ಈಗಿನಿಂದಲೇ ಅವರಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಬೇಕು’ ಎಂದು ದೈಹಿಕ ಶಿಕ್ಷಣ ಶಿಕ್ಷಕ ಪ್ರಾಣೇಶ್ ತಿಳಿಸಿದರು.</p>.<p>ಶಿಕ್ಷಕಿಯರಾದ ಉಮಾ, ವೇಣಿ, ರೂಪಾ ಮಾತನಾಡಿದರು. ಶಿಕ್ಷಕ ಪ್ರದೀಪ್, ಶಂಕರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ: ‘</strong>ಮಕ್ಕಳಿಗೆ ಪಠ್ಯವಿಷಯ ಮನನ ಮಾಡಿಸಲು ಸರಳ ಬೋಧನಾ ವಿಧಾನ ಕಂಡುಕೊಳ್ಳುವುದಲ್ಲದೆ ಪ್ರತಿ ವಾರಕ್ಕೊಮ್ಮೆ ಅವರ ಕಲಿಕಾ ಪ್ರಗತಿ ತಪ್ಪದೆ ಪರಿಶೀಲಿಸಬೇಕು’ ಎಂದು ಮುಖ್ಯಶಿಕ್ಷಕ ಎ.ವೀರಣ್ಣ ಶಿಕ್ಷಕರಿಗೆ ಸೂಚನೆ ನೀಡಿದರು.</p>.<p>ನಗರದ ಹೆಗ್ಗೆರೆ ತಾಯಮ್ಮ ಮತ್ತು ತಿಪ್ಪೇಸ್ವಾಮಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಮಾಹಿತಿ ಪೋಷಕರಿಗೆ ಕಳುಹಿಸಬೇಕು. ಕಲಿಕೆಯ ಬಗ್ಗೆ ಹೆಚ್ಚು ಕಾಳಜಿವಹಿಸಿ ಶಾಲಾ ನಂತರ ಪ್ರತಿದಿನ ಒಂದು ಗಂಟೆ ಶಿಕ್ಷಕರು ವಿಶೇಷ ತರಗತಿ ತೆಗೆದುಕೊಳ್ಳುವ ಮೂಲಕ ಆ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು’ ಎಂದು ಹೇಳಿದರು.</p>.<p>‘ಕಥೆ, ಕಾವ್ಯ ಹಾಗೂ ಆದರ್ಶ ವ್ಯಕ್ತಿಗಳ ಜೀವನ ಚರಿತ್ರೆ ಮುಂತಾದ ಚಿಕ್ಕ ಚಿಕ್ಕ ಪುಸ್ತಕಗಳನ್ನು ಮಕ್ಕಳ ಕೈಗೆ ಕೊಟ್ಟು ಈಗಿನಿಂದಲೇ ಅವರಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಬೇಕು’ ಎಂದು ದೈಹಿಕ ಶಿಕ್ಷಣ ಶಿಕ್ಷಕ ಪ್ರಾಣೇಶ್ ತಿಳಿಸಿದರು.</p>.<p>ಶಿಕ್ಷಕಿಯರಾದ ಉಮಾ, ವೇಣಿ, ರೂಪಾ ಮಾತನಾಡಿದರು. ಶಿಕ್ಷಕ ಪ್ರದೀಪ್, ಶಂಕರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>