ಹಲವು ವರ್ಷಗಳ ನಂತರ ಜಲಾಶಯಕ್ಕೆ 103 ಅಡಿ ನೀರು ಬಂದಿದೆ. ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ನೀರು ಹರಿಸುತ್ತಿರುವ ಕಾರಣ ಸಹಜವಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಹಂಪಿ–ಹೊಸಪೇಟೆ ನೋಡಲು ಬರುವ ವಿದೇಶಿ ಪ್ರವಾಸಿಗರು ಕೆಲವೊಮ್ಮೆ ಇಲ್ಲಿಗೂ ಬರುವುದುಂಟು. ಅವರಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ಉಷ್ಣತಾ ಮಾಪಕ ಬಳಸಿ ತಪಾಸಣೆ ಮಾಡಬೇಕು. ಅವರ ಗಂಟಲು ದ್ರವವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳಿಸಲಾಗುವುದು. ಅಂತಹವರ ದೂರವಾಣಿ ಸಂಖ್ಯೆಯನ್ನು ತಪ್ಪದೆ ಪಡೆಯಬೇಕು. ಪ್ರವಾಸಿಗರು ಹೆಚ್ಚು ಓಡಾಡುವ ಸ್ಥಳಗಳಲ್ಲಿ ಕೊರೊನಾ ಕುರಿತ ಜಾಗೃತಿ ಫಲಕ ಹಾಕಬೇಕು. ನೂರಕ್ಕೂ ಹೆಚ್ಚು ಜನ ಒಂದೆಡೆ ಸೇರದಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.