<p><strong>ಚಿತ್ರದುರ್ಗ: </strong>‘ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯಪ್ರವೃತ್ತರಾಗಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಲಹೆ ನೀಡಿದರು.</p>.<p>ಪೋಷಣ್ ಅಭಿಯಾನ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅಡಿ ಶುಕ್ರವಾರ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯ ಕ್ರಮ ಉದ್ಘಾಟನೆ ಹಾಗೂ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳನ್ನು ಪೌಷ್ಟಿಕತೆ ಕಡೆಗೆ ತರುವಲ್ಲಿ ಹೆಚ್ಚಿನ ಶ್ರಮವಹಿಸಿ ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ’ ಎಂದು ಅಧಿಕಾರಿಗಳಿಗೆ<br />ಸೂಚಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜ ನಾಯ್ಕ್, ‘ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಅಡಿ ಗರ್ಭಿಣಿ, ಬಾಣಂತಿಯರಿಗೆ ₹ 5 ಸಾವಿರ ಸಹಾಯಧನವನ್ನು ಮೂರು ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್. ವಿಶ್ವನಾಥ್, ಸಿಡಿಪಿಒ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಂ. ವೀಣಾ ಇದ್ದರು.</p>.<p><strong>ಮಾತೃವಂದನಾ: ₹ 17.57 ಕೋಟಿ ವರ್ಗಾವಣೆ</strong></p>.<p>‘ಜಿಲ್ಲೆಯಲ್ಲಿ ಈವರೆಗೆ ಈ ಯೋಜನೆಯ ಅಡಿ 47,478 ಫಲಾನುಭವಿಗಳು ನೋಂದಣಿ ಆಗಿದ್ದಾರೆ. 39,769 ಫಲಾನುಭವಿಗಳು ಸಹಾಯಧನವನ್ನು ಪಡೆದಿದ್ದಾರೆ. ಮೊದಲ ಕಂತಿನಲ್ಲಿ 39,271 ಫಲಾನುಭವಿಗಳಿಗೆ ತಲಾ ₹ 1 ಸಾವಿರ, ಎರಡನೇ ಕಂತಿನಲ್ಲಿ 34,506 ಫಲಾನುಭವಿಗಳಿಗೆ ₹ 2ಸಾವಿರ ವರ್ಗಾವಣೆ ಆಗಿದೆ’ ಎಂದು ರಾಜ ನಾಯ್ಕ್ ತಿಳಿಸಿದರು.</p>.<p>‘ಮೂರನೇ ಕಂತಿನಲ್ಲಿ 30,450 ಫಲಾನುಭವಿಗಳಿಗೆ ತಲಾ ₹ 2 ಸಾವಿರದಂತೆ ನೀಡಲಾಗಿದೆ. ಒಟ್ಟು 47,448 ಫಲಾನುಭವಿಗಳಿಗೆ<br />₹ 17.57 ಕೋಟಿ ನೇರವಾಗಿ ಆನ್ಲೈನ್ ಮೂಲಕ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.</p>.<p>...</p>.<p>ಜಿಲ್ಲೆ 2020-21ನೇ ಸಾಲಿನ ಪೋಷಣ್ ಮಾಸಾಚರಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ. ಅಂಗನವಾಡಿ ಮಕ್ಕಳಲ್ಲಿ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಿ.</p>.<p><strong>-ಕವಿತಾ ಎಸ್. ಮನ್ನಿಕೇರಿ, ಜಿಲ್ಲಾಧಿಕಾರಿ</strong></p>.<p>.....</p>.<p>ಪೋಷಣ್ ಅಭಿಯಾನದಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು.</p>.<p><strong>ಡಾ.ಕೆ. ನಂದಿನಿದೇವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ತಗ್ಗಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯಪ್ರವೃತ್ತರಾಗಬೇಕು’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸಲಹೆ ನೀಡಿದರು.</p>.<p>ಪೋಷಣ್ ಅಭಿಯಾನ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅಡಿ ಶುಕ್ರವಾರ ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯ ಕ್ರಮ ಉದ್ಘಾಟನೆ ಹಾಗೂ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಕೂಡಿದ ಮಕ್ಕಳನ್ನು ಪೌಷ್ಟಿಕತೆ ಕಡೆಗೆ ತರುವಲ್ಲಿ ಹೆಚ್ಚಿನ ಶ್ರಮವಹಿಸಿ ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ’ ಎಂದು ಅಧಿಕಾರಿಗಳಿಗೆ<br />ಸೂಚಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜ ನಾಯ್ಕ್, ‘ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಅಡಿ ಗರ್ಭಿಣಿ, ಬಾಣಂತಿಯರಿಗೆ ₹ 5 ಸಾವಿರ ಸಹಾಯಧನವನ್ನು ಮೂರು ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ’ ಎಂದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಡಾ.ಕೆ.ಎಲ್. ವಿಶ್ವನಾಥ್, ಸಿಡಿಪಿಒ ಸುಧಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಂ. ವೀಣಾ ಇದ್ದರು.</p>.<p><strong>ಮಾತೃವಂದನಾ: ₹ 17.57 ಕೋಟಿ ವರ್ಗಾವಣೆ</strong></p>.<p>‘ಜಿಲ್ಲೆಯಲ್ಲಿ ಈವರೆಗೆ ಈ ಯೋಜನೆಯ ಅಡಿ 47,478 ಫಲಾನುಭವಿಗಳು ನೋಂದಣಿ ಆಗಿದ್ದಾರೆ. 39,769 ಫಲಾನುಭವಿಗಳು ಸಹಾಯಧನವನ್ನು ಪಡೆದಿದ್ದಾರೆ. ಮೊದಲ ಕಂತಿನಲ್ಲಿ 39,271 ಫಲಾನುಭವಿಗಳಿಗೆ ತಲಾ ₹ 1 ಸಾವಿರ, ಎರಡನೇ ಕಂತಿನಲ್ಲಿ 34,506 ಫಲಾನುಭವಿಗಳಿಗೆ ₹ 2ಸಾವಿರ ವರ್ಗಾವಣೆ ಆಗಿದೆ’ ಎಂದು ರಾಜ ನಾಯ್ಕ್ ತಿಳಿಸಿದರು.</p>.<p>‘ಮೂರನೇ ಕಂತಿನಲ್ಲಿ 30,450 ಫಲಾನುಭವಿಗಳಿಗೆ ತಲಾ ₹ 2 ಸಾವಿರದಂತೆ ನೀಡಲಾಗಿದೆ. ಒಟ್ಟು 47,448 ಫಲಾನುಭವಿಗಳಿಗೆ<br />₹ 17.57 ಕೋಟಿ ನೇರವಾಗಿ ಆನ್ಲೈನ್ ಮೂಲಕ ಫಲಾನುಭವಿಗಳ ಖಾತೆಗೆ ಪಾವತಿಸಲಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.</p>.<p>...</p>.<p>ಜಿಲ್ಲೆ 2020-21ನೇ ಸಾಲಿನ ಪೋಷಣ್ ಮಾಸಾಚರಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ. ಅಂಗನವಾಡಿ ಮಕ್ಕಳಲ್ಲಿ ಶೌಚಾಲಯ ಬಳಕೆ ಕುರಿತು ಅರಿವು ಮೂಡಿಸಿ.</p>.<p><strong>-ಕವಿತಾ ಎಸ್. ಮನ್ನಿಕೇರಿ, ಜಿಲ್ಲಾಧಿಕಾರಿ</strong></p>.<p>.....</p>.<p>ಪೋಷಣ್ ಅಭಿಯಾನದಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಹೆಚ್ಚು ಒತ್ತು ನೀಡಲಾಗಿದೆ. ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು.</p>.<p><strong>ಡಾ.ಕೆ. ನಂದಿನಿದೇವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>