<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ಜಾರಿಗೆ ದಿನಗಣನೆ ಆರಂಭವಾಗಿದ್ದು ಆಗಸ್ಟ್ನಲ್ಲಿ ಜಾರಿಯಾಗುವುದು ನಿಶ್ಚಿತ. ತ್ವರಿತ ಜಾರಿಗೆ ಆಗ್ರಹಿಸಿ ಯಾರೂ ಚಳವಳಿ ಹಾದಿ ತುಳಿಯುವುದು ಬೇಡ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಮನವಿ ಮಾಡಿದರು.</p>.<p>‘ಆಗಸ್ಟ್ನಲ್ಲಿ ಮಾದಿಗ ಸಮುದಾಯಕ್ಕೆ ನಿಜವಾದ ಸ್ವಾತಂತ್ರ್ಯ ದೊರೆಯಲಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಸಿಗಲಿದೆ. ಮೂರು ದಶಕಗಳಿಂದ ಕನಸಾಗಿದ್ದ ಮೀಸಲಾತಿ, ಸೌಲಭ್ಯ, ಅವಕಾಶ ಸಿಗಲಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಬಂದ್ನಿಂದ ಯಾವ ಉಪಯೋಗವೂ ಇಲ್ಲ. ಮಾದಿಗರ ಒಳಮೀಸಲಾತಿ ವಿಷಯದಿಂದ ಸಾರ್ವಜನಿಕರಿಗೆ ಏಕೆ ತೊಂದರೆ ಕೊಡಬೇಕು?’ ಎಂದು ಪ್ರಶ್ನಿಸಿದರು. </p>.<p>‘ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಹೆಸರಿನಲ್ಲಿ ಎರಡು ಸಮುದಾಯಗಳ ಜನರು ಪ್ರಮಾಣಪತ್ರ ಪಡೆಯುತ್ತಿದ್ದ ಕಾರಣ ಗೊಂದಲವಿತ್ತು. ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ಕ್ರಮ ವಹಿಸಲಾಗಿದೆ. ಸಮುದಾಯಗಳ ಹಿಂದುಳಿದಿರುವಿಕೆ ಸಂಬಂಧ ಅಧ್ಯಯನ ನಡೆಯುತ್ತಿದ್ದು, ಈ ತಿಂಗಳೊಳಗೆ ವರದಿ ಸಲ್ಲಿಕೆಯಾಗಲಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಗೊಳಿಸುವ ಅನಿವಾರ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕಾಳಜಿ ಇದೆ. ವಯಸ್ಸು ಮೀರಿದ ಉದ್ಯೋಗಾಕಾಂಕ್ಷಿಗಳಿಗೆ ಒಂದು ವರ್ಷ ಸಡಿಲಿಕೆ ನೀಡುವಂತೆ ಈಗಾಗಲೇ ಮನವಿ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ಜಾರಿಗೆ ದಿನಗಣನೆ ಆರಂಭವಾಗಿದ್ದು ಆಗಸ್ಟ್ನಲ್ಲಿ ಜಾರಿಯಾಗುವುದು ನಿಶ್ಚಿತ. ತ್ವರಿತ ಜಾರಿಗೆ ಆಗ್ರಹಿಸಿ ಯಾರೂ ಚಳವಳಿ ಹಾದಿ ತುಳಿಯುವುದು ಬೇಡ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಮನವಿ ಮಾಡಿದರು.</p>.<p>‘ಆಗಸ್ಟ್ನಲ್ಲಿ ಮಾದಿಗ ಸಮುದಾಯಕ್ಕೆ ನಿಜವಾದ ಸ್ವಾತಂತ್ರ್ಯ ದೊರೆಯಲಿದೆ. ಸಾಮಾಜಿಕ, ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಸಿಗಲಿದೆ. ಮೂರು ದಶಕಗಳಿಂದ ಕನಸಾಗಿದ್ದ ಮೀಸಲಾತಿ, ಸೌಲಭ್ಯ, ಅವಕಾಶ ಸಿಗಲಿವೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಬಂದ್ನಿಂದ ಯಾವ ಉಪಯೋಗವೂ ಇಲ್ಲ. ಮಾದಿಗರ ಒಳಮೀಸಲಾತಿ ವಿಷಯದಿಂದ ಸಾರ್ವಜನಿಕರಿಗೆ ಏಕೆ ತೊಂದರೆ ಕೊಡಬೇಕು?’ ಎಂದು ಪ್ರಶ್ನಿಸಿದರು. </p>.<p>‘ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಹೆಸರಿನಲ್ಲಿ ಎರಡು ಸಮುದಾಯಗಳ ಜನರು ಪ್ರಮಾಣಪತ್ರ ಪಡೆಯುತ್ತಿದ್ದ ಕಾರಣ ಗೊಂದಲವಿತ್ತು. ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ಕ್ರಮ ವಹಿಸಲಾಗಿದೆ. ಸಮುದಾಯಗಳ ಹಿಂದುಳಿದಿರುವಿಕೆ ಸಂಬಂಧ ಅಧ್ಯಯನ ನಡೆಯುತ್ತಿದ್ದು, ಈ ತಿಂಗಳೊಳಗೆ ವರದಿ ಸಲ್ಲಿಕೆಯಾಗಲಿದೆ’ ಎಂದರು.</p>.<p>‘ಒಳಮೀಸಲಾತಿ ಜಾರಿಗೊಳಿಸುವ ಅನಿವಾರ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕಾಳಜಿ ಇದೆ. ವಯಸ್ಸು ಮೀರಿದ ಉದ್ಯೋಗಾಕಾಂಕ್ಷಿಗಳಿಗೆ ಒಂದು ವರ್ಷ ಸಡಿಲಿಕೆ ನೀಡುವಂತೆ ಈಗಾಗಲೇ ಮನವಿ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>