<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆ, ದಲಿತಪರ ಕಾಳಜಿ ಪ್ರಶ್ನಾತೀತ. ಆದರೆ 56,432 ಹುದ್ದೆಗಳ ನೇಮಕಾತಿ ಬಗ್ಗೆ ಅವರು ಸ್ಪಷ್ಟತೆ ನೀಡಿದ ಬಳಿಕವೇ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಗ್ರಹಿಸಿದರು.</p>.<p>‘ಶೇ 56ರಷ್ಟು ಮೀಸಲಾತಿ ಪ್ರಮಾಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದ್ದರಿಂದ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆ ನೀಡಬೇಕು. ಇಲ್ಲವಾದಲ್ಲಿ ಸಮುದಾಯ ಮತ್ತೆ ಬೀದಿಗಿಳಿದು ಹೋರಾಟ ಮಾಡಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>‘30 ವರ್ಷ ಹೋರಾಟ ನಡೆಸಿದ ಪರಿಣಾಮ ಒಳಮೀಸಲಾತಿ ಜಾರಿಗೊಂಡಿದ್ದರೂ ಗೊಂದಲಗಳು ಮುಂದುವರಿದಿವೆ. ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಅನ್ವಯಿಸುತ್ತದೆಯೇ, ಇಲ್ಲವೋ ಎಂಬ ಸ್ಪಷ್ಟತೆ ಇಲ್ಲವಾಗಿದೆ. ಇದರಿಂದ ಮಾದಿಗ ಸಮುದಾಯ ಆತಂಕಕ್ಕೆ ಒಳಗಾಗಿದೆ. ಈ ಗೊಂದಲಕ್ಕೆ ಮೊದಲು ತೆರೆ ಎಳೆಯುವ ಕೆಲಸ ಮಾಡಬೇಕು’ ಎಂದರು.</p>.<p>‘ಒಳ ಮೀಸಲಾತಿ ವಿಷಯವನ್ನು ಪರಿಶಿಷ್ಟ ಸಮುದಾಯಗಳ ನಾಯಕರು, ಸಂಘಟಕರು ಪರಸ್ಪರ ಪರಿಹರಿಸಿಕೊಂಡಲ್ಲಿ ಮಾತ್ರ ನೇಮಕಾತಿ ಪ್ರಕ್ರಿಯೆಯು ಸುಗಮವಾಗಿ ನಡೆದಾಗ ಮಾತ್ರ ನಿರುದ್ಯೋಗಿಗಳಿಗೆ ನ್ಯಾಯ ಸಿಗುತ್ತದೆ. ಈ ನಿಟ್ಟಿನಲ್ಲಿ ಸಚಿವರು, ಶಾಸಕರು ಮತ್ತು ಸಂಘಟನೆಗಳ ಮುಖಂಡರೆಲ್ಲರೂ ಸರ್ವ ಜನಾಂಗಗಳ ಒಟ್ಟಾರೆ ಹಿತದಲ್ಲಿ ತಮ್ಮ ತಮ್ಮ ಸಮುದಾಯಗಳ ಹಿತವೂ ಅಡಕವಾಗಿರುವುದನ್ನು ಅರಿತು ನೇಮಕಾತಿ ಪ್ರಕ್ರಿಯೆ ತೀವ್ರಗೊಳಿಸಲು ಅನುಕೂಲ ಆಗುವಂತೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಒಳ ಮೀಸಲಾತಿ ನಿಯಮ ಅನುಸರಿಸಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಇಲ್ಲವಾದಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯ ಆಗಲಿದೆ. ಮಾದಿಗ ಸಮುದಾಯಕ್ಕೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಯಾವುದೇ ರೀತಿಯ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ’ ಎಂದು ಹಿರಿಯೂರು ಆದಿಜಾಂಬವ ಗುರುಪೀಠದ ಷಡಕ್ಷರಮುನಿ ಸ್ವಾಮೀಜಿ ಎಚ್ಚರಿಸಿದರು.</p>.<p>‘ಒಳಮೀಸಲಾತಿ ವಿಷಯದಲ್ಲಿ ಸರ್ಕಾರ ಅಸಡ್ಡೆ ಪ್ರದರ್ಶಿಸಬಾರದು. ಊಟಕ್ಕೆ ಕರೆದು ತಟ್ಟೆ ಕಸಿದುಕೊಳ್ಳುವುದು, ಅನ್ನಕ್ಕೆ ಕನ್ನ ಹಾಕುವುದು ಮಾನವೀಯತೆಯ ಲಕ್ಷಣವಲ್ಲ. ಸಾಮಾಜಿಕ ನ್ಯಾಯದ ಹರಿಕಾರವೆಂಬ ಭೂಷಣಕ್ಕೆ ಧಕ್ಕೆ ಆಗದ ರೀತಿ ಅಸ್ಪೃಶ್ಯ ಮಾದಿಗರಿಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಮ್ಮ ಬೇಡಿಕೆ ಕಡೆಗಣಿಸಿ ಮುಂದವರೆದರೆ ಇಡೀ ರಾಜ್ಯದ ಮಾದಿಗ ಸಮುದಾಯ ಹೋರಾಟಕ್ಕೆ ಇಳಿಯಲಿದೆ. ಅನಿವಾರ್ಯವಾದರೆ ಪಾದಯಾತ್ರೆ ಕೈಗೊಳ್ಳಲು ನಾವು ಸಿದ್ಧ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದ್ಧತೆ, ದಲಿತಪರ ಕಾಳಜಿ ಪ್ರಶ್ನಾತೀತ. ಆದರೆ 56,432 ಹುದ್ದೆಗಳ ನೇಮಕಾತಿ ಬಗ್ಗೆ ಅವರು ಸ್ಪಷ್ಟತೆ ನೀಡಿದ ಬಳಿಕವೇ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಆಗ್ರಹಿಸಿದರು.</p>.<p>‘ಶೇ 56ರಷ್ಟು ಮೀಸಲಾತಿ ಪ್ರಮಾಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದ್ದರಿಂದ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂಬ ಭರವಸೆ ನೀಡಬೇಕು. ಇಲ್ಲವಾದಲ್ಲಿ ಸಮುದಾಯ ಮತ್ತೆ ಬೀದಿಗಿಳಿದು ಹೋರಾಟ ಮಾಡಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>‘30 ವರ್ಷ ಹೋರಾಟ ನಡೆಸಿದ ಪರಿಣಾಮ ಒಳಮೀಸಲಾತಿ ಜಾರಿಗೊಂಡಿದ್ದರೂ ಗೊಂದಲಗಳು ಮುಂದುವರಿದಿವೆ. ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಅನ್ವಯಿಸುತ್ತದೆಯೇ, ಇಲ್ಲವೋ ಎಂಬ ಸ್ಪಷ್ಟತೆ ಇಲ್ಲವಾಗಿದೆ. ಇದರಿಂದ ಮಾದಿಗ ಸಮುದಾಯ ಆತಂಕಕ್ಕೆ ಒಳಗಾಗಿದೆ. ಈ ಗೊಂದಲಕ್ಕೆ ಮೊದಲು ತೆರೆ ಎಳೆಯುವ ಕೆಲಸ ಮಾಡಬೇಕು’ ಎಂದರು.</p>.<p>‘ಒಳ ಮೀಸಲಾತಿ ವಿಷಯವನ್ನು ಪರಿಶಿಷ್ಟ ಸಮುದಾಯಗಳ ನಾಯಕರು, ಸಂಘಟಕರು ಪರಸ್ಪರ ಪರಿಹರಿಸಿಕೊಂಡಲ್ಲಿ ಮಾತ್ರ ನೇಮಕಾತಿ ಪ್ರಕ್ರಿಯೆಯು ಸುಗಮವಾಗಿ ನಡೆದಾಗ ಮಾತ್ರ ನಿರುದ್ಯೋಗಿಗಳಿಗೆ ನ್ಯಾಯ ಸಿಗುತ್ತದೆ. ಈ ನಿಟ್ಟಿನಲ್ಲಿ ಸಚಿವರು, ಶಾಸಕರು ಮತ್ತು ಸಂಘಟನೆಗಳ ಮುಖಂಡರೆಲ್ಲರೂ ಸರ್ವ ಜನಾಂಗಗಳ ಒಟ್ಟಾರೆ ಹಿತದಲ್ಲಿ ತಮ್ಮ ತಮ್ಮ ಸಮುದಾಯಗಳ ಹಿತವೂ ಅಡಕವಾಗಿರುವುದನ್ನು ಅರಿತು ನೇಮಕಾತಿ ಪ್ರಕ್ರಿಯೆ ತೀವ್ರಗೊಳಿಸಲು ಅನುಕೂಲ ಆಗುವಂತೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>‘ಒಳ ಮೀಸಲಾತಿ ನಿಯಮ ಅನುಸರಿಸಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಇಲ್ಲವಾದಲ್ಲಿ ಮಾದಿಗ ಸಮುದಾಯಕ್ಕೆ ಅನ್ಯಾಯ ಆಗಲಿದೆ. ಮಾದಿಗ ಸಮುದಾಯಕ್ಕೆ ಅನ್ಯಾಯವಾದರೆ ನಾವು ಸುಮ್ಮನಿರುವುದಿಲ್ಲ. ಯಾವುದೇ ರೀತಿಯ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ’ ಎಂದು ಹಿರಿಯೂರು ಆದಿಜಾಂಬವ ಗುರುಪೀಠದ ಷಡಕ್ಷರಮುನಿ ಸ್ವಾಮೀಜಿ ಎಚ್ಚರಿಸಿದರು.</p>.<p>‘ಒಳಮೀಸಲಾತಿ ವಿಷಯದಲ್ಲಿ ಸರ್ಕಾರ ಅಸಡ್ಡೆ ಪ್ರದರ್ಶಿಸಬಾರದು. ಊಟಕ್ಕೆ ಕರೆದು ತಟ್ಟೆ ಕಸಿದುಕೊಳ್ಳುವುದು, ಅನ್ನಕ್ಕೆ ಕನ್ನ ಹಾಕುವುದು ಮಾನವೀಯತೆಯ ಲಕ್ಷಣವಲ್ಲ. ಸಾಮಾಜಿಕ ನ್ಯಾಯದ ಹರಿಕಾರವೆಂಬ ಭೂಷಣಕ್ಕೆ ಧಕ್ಕೆ ಆಗದ ರೀತಿ ಅಸ್ಪೃಶ್ಯ ಮಾದಿಗರಿಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಮ್ಮ ಬೇಡಿಕೆ ಕಡೆಗಣಿಸಿ ಮುಂದವರೆದರೆ ಇಡೀ ರಾಜ್ಯದ ಮಾದಿಗ ಸಮುದಾಯ ಹೋರಾಟಕ್ಕೆ ಇಳಿಯಲಿದೆ. ಅನಿವಾರ್ಯವಾದರೆ ಪಾದಯಾತ್ರೆ ಕೈಗೊಳ್ಳಲು ನಾವು ಸಿದ್ಧ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>