<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ಅಳವಡಿಸದೇ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದು ದುರದೃಷ್ಟಕರ. ಇದರ ವಿರುದ್ಧ ಚಳವಳಿ ಆರಂಭಗೊಂಡಿದ್ದು ಮಾದಿಗರು ಬೀದಿಗಳಿದು ಪ್ರತಿಭಟಿಸುತ್ತಿದ್ದಾರೆ. ಹೋರಾಟ ತೀವ್ರಗೊಳ್ಳುವ ಮುನ್ನ ಅಧಿಸೂಚನೆ ರದ್ದುಪಡಿಸಬೇಕು, ಒಳಮೀಸಲಾತಿ ಅನ್ವಯಿಸಿ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>‘ಒಳಮೀಸಲಾತಿಗಾಗಿ 35 ವರ್ಷಗಳಿಂದ ಹೋರಾಟ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸ್ಪಂದಿಸಿ ಒಳಮೀಸಲಾತಿ ಹಂಚಿಕೆ ಮಾಡಿದ ಕೀರ್ತಿ ತಮಗೆ ಸಲ್ಲುತ್ತದೆ. ಆದರೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಹೆಚ್ಚು ಮೀಸಲಾತಿ ಸೌಲಭ್ಯ ಪಡೆದಿರುವ ಸಮುದಾಯಗಳು ಅನವಶ್ಯಕವಾಗಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಮಾದಿಗ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಹಂಚಿ ತಿನ್ನುವ ಗುಣ ಇಲ್ಲದ ಕೆಲ ಸಮುದಾಯಗಳ ಸದಸ್ಯರು ಒಳಮೀಸಲಾತಿ ವಿಷಯದಲ್ಲಿ ಇಲ್ಲಸಲ್ಲದ ಗೊಂದಲ ಉಂಟು ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಆಂಧ್ರ, ತೆಲಂಗಾಣದಲ್ಲಿ ಈಗಾಗಲೇ ಒಳಮೀಸಲಾತಿ ಅನುಷ್ಠಾನಗೊಂಡಿದ್ದು ಹಂಚಿಕೊಂಡು ಸೌಲಭ್ಯ ಪಡೆಯುತ್ತಿದ್ದಾರೆ. ಇಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಬೇಕು. ಎ.ಜೆ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿಯ ಶಿಫಾರಸು, ಪ್ರಸ್ತುತ ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಸಮುದಾಯಗಳು ಒಪ್ಪಲಿಲ್ಲ. ಇದರಿಂದ ಅನಾಥ, ಅಸ್ಪೃಶ್ಯ ಅಲೆಮಾರಿಗಳಿಗೆ ತೀವ್ರ ಅನ್ಯಾಯ ಆಗಿದೆ. ಇಷ್ಟೆಲ್ಲ ಅನ್ಯಾಯದ ನಡುವೆಯೂ ಒಳಮೀಸಲಾತಿ ಜಾರಿಯನ್ನು ನಾವು ಸ್ವಾಗತಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಈಗ ಜಾರಿಗೊಳಿಸಿರುವ ಒಳಮೀಸಲಾತಿ ಅನುಷ್ಠಾನಕ್ಕೆ ಅಡ್ಡಿಪಡಿಸಲಾಗುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ವಿಷಯವಾರು ನೇಮಕಾತಿ ಕೈಬಿಟ್ಟು, ವಿಶ್ವವಿದ್ಯಾಲಯಗಳನ್ನೇ ಒಂದು ಘಟಕವಾಗಿಸುವ ಹುನ್ನಾರ ನಡೆಯುತ್ತಿದೆ. ಪಟ್ಟಭದ್ರರ ಮಾತುಗಳನ್ನು ಧಿಕ್ಕರಿಸಿ ಅಸ್ಪೃಶ್ಯ, ನೊಂದ ಮಾದಿಗರಿಗೆ ನ್ಯಾಯ ಕೊಡಿಸಲು ಮುಖ್ಯಮಂತ್ರಿಗಳು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. </p>.<p>ಎಸ್ಸಿ, ಎಸ್ಟಿ ಸಮುದಾಯಗಳ ಶೇ 24ರಷ್ಟು ಮೀಸಲಾತಿ ಹಂಚಿಕೆಗೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತರಲಾಗಿದೆ. ಅದನ್ನು ತೆರವುಗೊಳಿಸಲು ರಾಜ್ಯ ಕಾನೂನು ಇಲಾಖೆ ವಿಫಲವಾಗಿದೆ. ಒಳಮೀಸಲಾತಿ ಹಂಚಿಕೆಗೂ ತಡೆಯಾಜ್ಞೆ ತರಲು ಯತ್ನಿಸಲಾಗುತ್ತಿದೆ. ಇದಕ್ಕೆ ಕಾನೂನಾತ್ಮಕವಾದ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. </p>.<p>‘ವಿವಿಗಳಲ್ಲಿ ವಿಷಯವಾರು ಅತಿಥಿ ಉಪನ್ಯಾಸಕರ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮೀಸಲಾತಿ ಸೌಲಭ್ಯ ಪಡೆದು, ಹಿಂದುಳಿದಿರುವ ಮಾದಿಗ ಸಮುದಾಯವನ್ನು ಪರಿಶಿಷ್ಟ ಜಾತಿಯಲ್ಲಿ ಗ್ರೂಪ್ ‘ಎ’ ಎಂದು ಎಲ್ಲಾ ಆಯೋಗಗಳು ಗುರುತಿಸಿವೆ. ಅದರಂತೆ ರೋಸ್ಟರ್ ಬಿಂದು ಪ್ರಕಾರ ವಿಷಯವಾರು ಉಪನ್ಯಾಸಕರ ನೇಮಕಾತಿ ಆಗಬೇಕು’</p>.<p>ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜಾತಿಯವರು ಎಷ್ಟು ಪ್ರಮಾಣದಲ್ಲಿ ಉದ್ಯೋಗ ಪಡೆದಿದ್ದಾರೆ, ‘ಡಿ’ ವರ್ಗದಿಂದ ಉನ್ನತ ಹುದ್ದೆಯವರೆಗೂ ಎಷ್ಟು ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ, ಉಪನ್ಯಾಸಕರು, ಪ್ರಾಧ್ಯಾಪಕರು, ಕುಲಸಚಿವ, ಕುಲಪತಿ, ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಯಾವ ಸಮುದಾಯದವರು ಎಷ್ಟು ಹುದ್ದೆ ಪಡೆದಿದ್ದಾರೆಂಬ ಅಂಕಿ ಅಂಶದ ಪಟ್ಟಿಯನ್ನು ಪ್ರಕಟಿಸಬೇಕು. ಇದರಿಂದ ಸತ್ಯ ಹೊರಬೀಳಲಿದೆ ಎಂದು ಆಗ್ರಹಿಸಿದ್ದಾರೆ. </p>.<p>ಮೀಸಲಾತಿ ಶೇ 50ರ ಅನ್ವಯ ಪರಿಶಿಷ್ಟ ಜಾತಿಗಳಿಗೆ ಶೇ15ರ ಪ್ರಮಾಣದಲ್ಲಿಯೇ ನೇಮಕಾತಿ ಮಾಡುವುದಾದರೆ ಒಳಮೀಸಲಾತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಆಯೋಗಗಳು ಮಾದಿಗರಿಗೆ ಶೇ 6ರಷ್ಟು ಮೀಸಲಾತಿ ನಿಗದಿಪಡಿಸಿದ್ದು, ಅದರಂತೆ ಹುದ್ದೆಗಳನ್ನು ತುಂಬುವ ತೀರ್ಮಾನ ಮಾಡಬೇಕು.<br><br>‘ಹೊಲಯ–ಮಾದಿಗರು ಒಟ್ಟು ಕುಟುಂಬದವರಂತೆ ಬಾಳಬೇಕು. ಅಣ್ಣ-ತಮ್ಮಂದಿರಾ ನಾವು ಯಾರೊಬ್ಬರ ಮಧ್ಯಸ್ಥಿಕೆ ಇಲ್ಲದೆ ಆಸ್ತಿ ಹಂಚಿಕೆ ಮಾಡಿಕೊಳ್ಳುವ ರೀತಿ ಒಳಮೀಸಲಾತಿ ಜಾರಿ ವಿಷಯದಲ್ಲಿ ಪ್ರಬುದ್ಧತೆ ಮೆರೆಯಬೇಕಾಗಿದೆ. ಚಪ್ಪಲಿ ಹೊಲಿದು, ಚರಂಡಿ, ಕಕ್ಕಸು ಗುಂಡಿ ಸ್ವಚ್ಛತೆ ಮಾಡುತ್ತಲೇ ಜೀವಿಸುತ್ತಿರುವ ಮಾದಿಗರಿಗೆ ನ್ಯಾಯ ಸಿಗಬೇಕು. ಛಲವಾದಿ ಸಮುದಾಯದವರು ಯಾವುದೇ ರೀತಿ ಗೊಂದಲಕ್ಕೆ ಸಿಲುಕದೆ ಅಂಬೇಡ್ಕರ್ ಆಶಯಗಳೊಂದಿಗೆ ಚಿಂತನೆ ನಡೆಸಬೇಕು. ಆ. 12ರಂದು ಕರೆದಿರುವ ವಿಶೇಷ ಸಂಪುಟದ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಿದ ಕೀರ್ತಿಗೆ ಮುಖ್ಯಮಂತ್ರಿಗಳು ಪಾತ್ರರಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><strong>ಸೌಲಭ್ಯ ಹಂಚಿಕೆಯಲ್ಲೂ ಒಳಮೀಸಲಾತಿ ಬೇಕು</strong></p><p> ಆಂಧ್ರ ತೆಲಂಗಾಣದಂತೆ ಮನೆ ನಿವೇಶನ ಹಂಚಿಕೆ ಸಾಲ ಸೌಲಭ್ಯ ಕೈಗಾರಿಕೆ ನಿವೇಶನಗಳ ಹಂಚಿಕೆ ಹಾಸ್ಟೆಲ್ ಸೀಟು ಹಂಚಿಕೆ ಮೊರಾರ್ಜಿ ಕಿತ್ತೂರು ರಾಣಿ ಚನ್ನಮ್ಮ ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಒಳಮೀಸಲಾತಿ ಜಾರಿಗೊಳ್ಳಬೇಕು. ಆಯಾ ಜಿಲ್ಲೆಗಳಲ್ಲಿನ ಪರಿಶಿಷ್ಟ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕು ಎಂದು ಆಂಜನೇಯ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಉದ್ಯೋಗದಲ್ಲಿ ಒಳಮೀಸಲಾತಿ ನೀಡಿರುವಾಗ ಬಡ್ತಿಯಲ್ಲೂ ಒಳಮೀಸಲಾತಿ ನೀಡುವುದು ನ್ಯಾಯಸಮ್ಮತ. ಸರ್ಕಾರಿ ನೌಕರರು ಅಧಿಕಾರಿಗಳಿಗೆ ಬಡ್ತಿ ಮುಂಬಡ್ತಿ ಬ್ಯಾಕ್ಲಾಗ್ ನೀಡುವಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಲೋಕೋಪಯೋಗಿ ಸೇರಿ ವಿವಿಧ ಇಲಾಖೆಗಳ ಸರಬರಾಜು ಮತ್ತು ಗುತ್ತಿಗೆಯಲ್ಲಿ ₹ 1 ಕೋಟಿವರೆಗಿನ ಕಾಮಗಾರಿಗಳಿಗೆ ಮೀಸಲಾತಿ ಜಾರಿಯಲ್ಲಿದ್ದು ಇಲ್ಲೂ ಒಳಮೀಸಲಾತಿ ಅನ್ವಯಿಸಬೇಕು ಎಂದು ಕೋರಿದ್ದಾರೆ. ಪರಿಶಿಷ್ಟ ಜಾತಿ ಉಪಯೋಜನೆಯಲ್ಲಿ (ಎಸ್ಸಿಪಿ) ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಅಡಿ ಒದಗಿಸಿದ ಒಟ್ಟು ಅನುದಾನದಲ್ಲಿ ಶೇ 6ರಷ್ಟನ್ನು ಮಾದಿಗ ಸಮುದಾಯಕ್ಕೆ ವೆಚ್ಚ ಮಾಡುವ ಮೂಲಕ ಆರ್ಥಿಕ ಮೀಸಲಾತಿಯನ್ನು ಒದಗಿಸಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಒಳಮೀಸಲಾತಿ ಅಳವಡಿಸದೇ 56,432 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವುದು ದುರದೃಷ್ಟಕರ. ಇದರ ವಿರುದ್ಧ ಚಳವಳಿ ಆರಂಭಗೊಂಡಿದ್ದು ಮಾದಿಗರು ಬೀದಿಗಳಿದು ಪ್ರತಿಭಟಿಸುತ್ತಿದ್ದಾರೆ. ಹೋರಾಟ ತೀವ್ರಗೊಳ್ಳುವ ಮುನ್ನ ಅಧಿಸೂಚನೆ ರದ್ದುಪಡಿಸಬೇಕು, ಒಳಮೀಸಲಾತಿ ಅನ್ವಯಿಸಿ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಬೇಕು’ ಎಂದು ಒತ್ತಾಯಿಸಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ.</p>.<p>‘ಒಳಮೀಸಲಾತಿಗಾಗಿ 35 ವರ್ಷಗಳಿಂದ ಹೋರಾಟ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸ್ಪಂದಿಸಿ ಒಳಮೀಸಲಾತಿ ಹಂಚಿಕೆ ಮಾಡಿದ ಕೀರ್ತಿ ತಮಗೆ ಸಲ್ಲುತ್ತದೆ. ಆದರೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಹೆಚ್ಚು ಮೀಸಲಾತಿ ಸೌಲಭ್ಯ ಪಡೆದಿರುವ ಸಮುದಾಯಗಳು ಅನವಶ್ಯಕವಾಗಿ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಮಾದಿಗ ಸಮುದಾಯದಲ್ಲಿ ಆತಂಕ ಮೂಡಿಸಿದೆ. ಹಂಚಿ ತಿನ್ನುವ ಗುಣ ಇಲ್ಲದ ಕೆಲ ಸಮುದಾಯಗಳ ಸದಸ್ಯರು ಒಳಮೀಸಲಾತಿ ವಿಷಯದಲ್ಲಿ ಇಲ್ಲಸಲ್ಲದ ಗೊಂದಲ ಉಂಟು ಮಾಡುತ್ತಿದ್ದಾರೆ’ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಆಂಧ್ರ, ತೆಲಂಗಾಣದಲ್ಲಿ ಈಗಾಗಲೇ ಒಳಮೀಸಲಾತಿ ಅನುಷ್ಠಾನಗೊಂಡಿದ್ದು ಹಂಚಿಕೊಂಡು ಸೌಲಭ್ಯ ಪಡೆಯುತ್ತಿದ್ದಾರೆ. ಇಂತಹ ವಾತಾವರಣ ರಾಜ್ಯದಲ್ಲಿ ನಿರ್ಮಾಣವಾಗಬೇಕು. ಎ.ಜೆ. ಸದಾಶಿವ ಆಯೋಗದ ವರದಿ, ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿಯ ಶಿಫಾರಸು, ಪ್ರಸ್ತುತ ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಸಮುದಾಯಗಳು ಒಪ್ಪಲಿಲ್ಲ. ಇದರಿಂದ ಅನಾಥ, ಅಸ್ಪೃಶ್ಯ ಅಲೆಮಾರಿಗಳಿಗೆ ತೀವ್ರ ಅನ್ಯಾಯ ಆಗಿದೆ. ಇಷ್ಟೆಲ್ಲ ಅನ್ಯಾಯದ ನಡುವೆಯೂ ಒಳಮೀಸಲಾತಿ ಜಾರಿಯನ್ನು ನಾವು ಸ್ವಾಗತಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಈಗ ಜಾರಿಗೊಳಿಸಿರುವ ಒಳಮೀಸಲಾತಿ ಅನುಷ್ಠಾನಕ್ಕೆ ಅಡ್ಡಿಪಡಿಸಲಾಗುತ್ತಿದೆ. ವಿಶ್ವವಿದ್ಯಾಲಯಗಳಲ್ಲಿ ವಿಷಯವಾರು ನೇಮಕಾತಿ ಕೈಬಿಟ್ಟು, ವಿಶ್ವವಿದ್ಯಾಲಯಗಳನ್ನೇ ಒಂದು ಘಟಕವಾಗಿಸುವ ಹುನ್ನಾರ ನಡೆಯುತ್ತಿದೆ. ಪಟ್ಟಭದ್ರರ ಮಾತುಗಳನ್ನು ಧಿಕ್ಕರಿಸಿ ಅಸ್ಪೃಶ್ಯ, ನೊಂದ ಮಾದಿಗರಿಗೆ ನ್ಯಾಯ ಕೊಡಿಸಲು ಮುಖ್ಯಮಂತ್ರಿಗಳು ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. </p>.<p>ಎಸ್ಸಿ, ಎಸ್ಟಿ ಸಮುದಾಯಗಳ ಶೇ 24ರಷ್ಟು ಮೀಸಲಾತಿ ಹಂಚಿಕೆಗೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತರಲಾಗಿದೆ. ಅದನ್ನು ತೆರವುಗೊಳಿಸಲು ರಾಜ್ಯ ಕಾನೂನು ಇಲಾಖೆ ವಿಫಲವಾಗಿದೆ. ಒಳಮೀಸಲಾತಿ ಹಂಚಿಕೆಗೂ ತಡೆಯಾಜ್ಞೆ ತರಲು ಯತ್ನಿಸಲಾಗುತ್ತಿದೆ. ಇದಕ್ಕೆ ಕಾನೂನಾತ್ಮಕವಾದ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. </p>.<p>‘ವಿವಿಗಳಲ್ಲಿ ವಿಷಯವಾರು ಅತಿಥಿ ಉಪನ್ಯಾಸಕರ ಆಯ್ಕೆ ಮಾಡುವ ಪ್ರಕ್ರಿಯೆ ಆರಂಭಗೊಂಡಿದೆ. ಅತ್ಯಂತ ಕಡಿಮೆ ಪ್ರಮಾಣದಲ್ಲಿ ಮೀಸಲಾತಿ ಸೌಲಭ್ಯ ಪಡೆದು, ಹಿಂದುಳಿದಿರುವ ಮಾದಿಗ ಸಮುದಾಯವನ್ನು ಪರಿಶಿಷ್ಟ ಜಾತಿಯಲ್ಲಿ ಗ್ರೂಪ್ ‘ಎ’ ಎಂದು ಎಲ್ಲಾ ಆಯೋಗಗಳು ಗುರುತಿಸಿವೆ. ಅದರಂತೆ ರೋಸ್ಟರ್ ಬಿಂದು ಪ್ರಕಾರ ವಿಷಯವಾರು ಉಪನ್ಯಾಸಕರ ನೇಮಕಾತಿ ಆಗಬೇಕು’</p>.<p>ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜಾತಿಯವರು ಎಷ್ಟು ಪ್ರಮಾಣದಲ್ಲಿ ಉದ್ಯೋಗ ಪಡೆದಿದ್ದಾರೆ, ‘ಡಿ’ ವರ್ಗದಿಂದ ಉನ್ನತ ಹುದ್ದೆಯವರೆಗೂ ಎಷ್ಟು ಮಂದಿ ಉದ್ಯೋಗ ಪಡೆದುಕೊಂಡಿದ್ದಾರೆ, ಉಪನ್ಯಾಸಕರು, ಪ್ರಾಧ್ಯಾಪಕರು, ಕುಲಸಚಿವ, ಕುಲಪತಿ, ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಯಾವ ಸಮುದಾಯದವರು ಎಷ್ಟು ಹುದ್ದೆ ಪಡೆದಿದ್ದಾರೆಂಬ ಅಂಕಿ ಅಂಶದ ಪಟ್ಟಿಯನ್ನು ಪ್ರಕಟಿಸಬೇಕು. ಇದರಿಂದ ಸತ್ಯ ಹೊರಬೀಳಲಿದೆ ಎಂದು ಆಗ್ರಹಿಸಿದ್ದಾರೆ. </p>.<p>ಮೀಸಲಾತಿ ಶೇ 50ರ ಅನ್ವಯ ಪರಿಶಿಷ್ಟ ಜಾತಿಗಳಿಗೆ ಶೇ15ರ ಪ್ರಮಾಣದಲ್ಲಿಯೇ ನೇಮಕಾತಿ ಮಾಡುವುದಾದರೆ ಒಳಮೀಸಲಾತಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಆಯೋಗಗಳು ಮಾದಿಗರಿಗೆ ಶೇ 6ರಷ್ಟು ಮೀಸಲಾತಿ ನಿಗದಿಪಡಿಸಿದ್ದು, ಅದರಂತೆ ಹುದ್ದೆಗಳನ್ನು ತುಂಬುವ ತೀರ್ಮಾನ ಮಾಡಬೇಕು.<br><br>‘ಹೊಲಯ–ಮಾದಿಗರು ಒಟ್ಟು ಕುಟುಂಬದವರಂತೆ ಬಾಳಬೇಕು. ಅಣ್ಣ-ತಮ್ಮಂದಿರಾ ನಾವು ಯಾರೊಬ್ಬರ ಮಧ್ಯಸ್ಥಿಕೆ ಇಲ್ಲದೆ ಆಸ್ತಿ ಹಂಚಿಕೆ ಮಾಡಿಕೊಳ್ಳುವ ರೀತಿ ಒಳಮೀಸಲಾತಿ ಜಾರಿ ವಿಷಯದಲ್ಲಿ ಪ್ರಬುದ್ಧತೆ ಮೆರೆಯಬೇಕಾಗಿದೆ. ಚಪ್ಪಲಿ ಹೊಲಿದು, ಚರಂಡಿ, ಕಕ್ಕಸು ಗುಂಡಿ ಸ್ವಚ್ಛತೆ ಮಾಡುತ್ತಲೇ ಜೀವಿಸುತ್ತಿರುವ ಮಾದಿಗರಿಗೆ ನ್ಯಾಯ ಸಿಗಬೇಕು. ಛಲವಾದಿ ಸಮುದಾಯದವರು ಯಾವುದೇ ರೀತಿ ಗೊಂದಲಕ್ಕೆ ಸಿಲುಕದೆ ಅಂಬೇಡ್ಕರ್ ಆಶಯಗಳೊಂದಿಗೆ ಚಿಂತನೆ ನಡೆಸಬೇಕು. ಆ. 12ರಂದು ಕರೆದಿರುವ ವಿಶೇಷ ಸಂಪುಟದ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಿದ ಕೀರ್ತಿಗೆ ಮುಖ್ಯಮಂತ್ರಿಗಳು ಪಾತ್ರರಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><strong>ಸೌಲಭ್ಯ ಹಂಚಿಕೆಯಲ್ಲೂ ಒಳಮೀಸಲಾತಿ ಬೇಕು</strong></p><p> ಆಂಧ್ರ ತೆಲಂಗಾಣದಂತೆ ಮನೆ ನಿವೇಶನ ಹಂಚಿಕೆ ಸಾಲ ಸೌಲಭ್ಯ ಕೈಗಾರಿಕೆ ನಿವೇಶನಗಳ ಹಂಚಿಕೆ ಹಾಸ್ಟೆಲ್ ಸೀಟು ಹಂಚಿಕೆ ಮೊರಾರ್ಜಿ ಕಿತ್ತೂರು ರಾಣಿ ಚನ್ನಮ್ಮ ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಒಳಮೀಸಲಾತಿ ಜಾರಿಗೊಳ್ಳಬೇಕು. ಆಯಾ ಜಿಲ್ಲೆಗಳಲ್ಲಿನ ಪರಿಶಿಷ್ಟ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ಸೌಲಭ್ಯಗಳನ್ನು ಹಂಚಿಕೆ ಮಾಡಬೇಕು ಎಂದು ಆಂಜನೇಯ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಉದ್ಯೋಗದಲ್ಲಿ ಒಳಮೀಸಲಾತಿ ನೀಡಿರುವಾಗ ಬಡ್ತಿಯಲ್ಲೂ ಒಳಮೀಸಲಾತಿ ನೀಡುವುದು ನ್ಯಾಯಸಮ್ಮತ. ಸರ್ಕಾರಿ ನೌಕರರು ಅಧಿಕಾರಿಗಳಿಗೆ ಬಡ್ತಿ ಮುಂಬಡ್ತಿ ಬ್ಯಾಕ್ಲಾಗ್ ನೀಡುವಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು. ಲೋಕೋಪಯೋಗಿ ಸೇರಿ ವಿವಿಧ ಇಲಾಖೆಗಳ ಸರಬರಾಜು ಮತ್ತು ಗುತ್ತಿಗೆಯಲ್ಲಿ ₹ 1 ಕೋಟಿವರೆಗಿನ ಕಾಮಗಾರಿಗಳಿಗೆ ಮೀಸಲಾತಿ ಜಾರಿಯಲ್ಲಿದ್ದು ಇಲ್ಲೂ ಒಳಮೀಸಲಾತಿ ಅನ್ವಯಿಸಬೇಕು ಎಂದು ಕೋರಿದ್ದಾರೆ. ಪರಿಶಿಷ್ಟ ಜಾತಿ ಉಪಯೋಜನೆಯಲ್ಲಿ (ಎಸ್ಸಿಪಿ) ಬುಡಕಟ್ಟು ಉಪ ಯೋಜನೆ (ಟಿಎಸ್ಪಿ) ಅಡಿ ಒದಗಿಸಿದ ಒಟ್ಟು ಅನುದಾನದಲ್ಲಿ ಶೇ 6ರಷ್ಟನ್ನು ಮಾದಿಗ ಸಮುದಾಯಕ್ಕೆ ವೆಚ್ಚ ಮಾಡುವ ಮೂಲಕ ಆರ್ಥಿಕ ಮೀಸಲಾತಿಯನ್ನು ಒದಗಿಸಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>