ಮಠದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ವೈಯಕ್ತಿಕ ಕಾರಣ ನೀಡಿ ಜುಲೈ 24ರಂದು ಹಾಸ್ಟೆಲ್ನಿಂದ ಹೊರ ಬಂದಿದ್ದರು. ಬಳಿಕ ಅವರು ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ತಲುಪಿದ್ದರು. ಠಾಣೆಯಿಂದ ಮಕ್ಕಳನ್ನು ಕರೆತಂದ ಬಸವರಾಜನ್ ಹಾಗೂ ಸೌಭಾಗ್ಯ ಅವರು ವಸತಿನಿಲಯಕ್ಕೆ ಒಪ್ಪಿಸದೇ ತಮ್ಮ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದರು ಎಂದು ಹಾಸ್ಟೆಲ್ ವಾರ್ಡನ್ ದೂರು ದಾಖಲಿಸಿದ್ದರು.