<p><strong>ಹೊಸದುರ್ಗ: </strong>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದು. ನೀತಿ ಸಂಹಿತೆ ಜಾರಿಯಾದರೆ ಕೆಲಸಗಳು ನಿಲ್ಲುತ್ತವೆ. ಹಾಗಾಗಿ ಕಾಲಹರಣ ಮಾಡದೆ ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಪುರಸಭಾ ಸದಸ್ಯರಿಗೆ ಕರೆ ನೀಡಿದರು.</p>.<p>ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸೋಮವಾರ 2021-22ನೇ ಸಾಲಿನ ಬಜೆಟ್ ಮಂಡನೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಕೋವಿಡ್ ಕಾರಣ 2 ವರ್ಷಗಳಿಂದ ನೀರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಂದಿಲ್ಲ. ಪುರಸಭಾ ಸದಸ್ಯರು ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡ ಶ್ರೀಧರ್ ಭಟ್ ಮಾತನಾಡಿ, ‘ಪಟ್ಟಣದ ಅಯ್ಯಪ್ಪಸ್ವಾಮಿ ಬಡಾವಣೆ ಅತ್ಯಂತ ಹಿಂದುಳಿದಿದೆ. ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಈ ಬಾರಿಯ ಅನುದಾನದಲ್ಲಿ ಅಭಿವೃದ್ಧಿಪಡಿಸಿ’ ಎಂದು ಸಲಹೆ ನೀಡಿದರು.</p>.<p>‘ಬಡಾವಣೆಯ ಅಭಿವೃದ್ಧಿಗೆ ₹ 3 ಕೋಟಿಯಿಂದ ₹ 4 ಕೋಟಿ ಬೇಕಾಗುತ್ತದೆ. ಅಷ್ಟೊಂದು ಅನುದಾನ ಒಮ್ಮೆಲೆ ಒಂದೇ ಬಡಾವಣೆಗೆ ಇಡಲು ಸಾಧ್ಯವಾಗುವುದಿಲ್ಲ. ಈ ಬಾರಿ ₹ 1 ಕೋಟಿ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಪಡಿಸಲಾಗುವುದು’ ಎಂದು ಶಾಸಕರು ಉತ್ತರಿಸಿದರು.</p>.<p>ಸಾರ್ವಜನಿಕರ ಪರವಾಗಿ ಮಾತನಾಡಿದ ಬಾಲರಾಜ್, ‘ಪಟ್ಟಣದ ಹಳೆ ಮಾಧ್ಯಮಿಕ ಶಾಲೆ ಶತಮಾನ ಆಚರಿಸಿಕೊಂಡರೂ ಅದಕ್ಕೆ ಸೂಕ್ತ ರಕ್ಷಣೆಯಿಲ್ಲ. ಅನೈತಿಕ ಚಟುವಟಿಕೆ ತಾಣವಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕು’ ಎಂದು ತಿಳಿಸಿದರು.</p>.<p>ಪಟ್ಟಣದಲ್ಲಿ ರುದ್ರಭೂಮಿಗೆ ಬೇಕಾದ 10 ಎಕರೆ ಭೂಮಿಯನ್ನು ಪಟ್ಟಣದ 10 ಕಿ.ಮೀ. ವ್ಯಾಪ್ತಿಯಲ್ಲಿ ಗುರುತಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕರುಸೂಚಿಸಿದರು.</p>.<p>ಸಭೆಯಲ್ಲಿ ಪಟ್ಟಣದ ಅನೇಕ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿ ಮೂಲಸೌಕರ್ಯಗಳ ಕೊರತೆ ಇದೆ. ಈ ಬಗ್ಗೆ ಪುರಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಶಾಸಕರು ಗಮನ ನೀಡಬೇಕು ಎಂದು ನಾಗರಿಕರು ಸಲಹೆ ನೀಡಿದರು.</p>.<p>ಪುರಸಭೆ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಜ್ಯೋತಿ ಕೆಂಚಪ್ಪ, ಪ್ರಭಾರ ಮುಖ್ಯಾಧಿಕಾರಿ, ಪುರಸಭಾ ಸದಸ್ಯರು, ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯ ನಾಗರಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ: </strong>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದು. ನೀತಿ ಸಂಹಿತೆ ಜಾರಿಯಾದರೆ ಕೆಲಸಗಳು ನಿಲ್ಲುತ್ತವೆ. ಹಾಗಾಗಿ ಕಾಲಹರಣ ಮಾಡದೆ ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಪುರಸಭಾ ಸದಸ್ಯರಿಗೆ ಕರೆ ನೀಡಿದರು.</p>.<p>ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸೋಮವಾರ 2021-22ನೇ ಸಾಲಿನ ಬಜೆಟ್ ಮಂಡನೆ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.</p>.<p>ಕೋವಿಡ್ ಕಾರಣ 2 ವರ್ಷಗಳಿಂದ ನೀರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಂದಿಲ್ಲ. ಪುರಸಭಾ ಸದಸ್ಯರು ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಮುಖಂಡ ಶ್ರೀಧರ್ ಭಟ್ ಮಾತನಾಡಿ, ‘ಪಟ್ಟಣದ ಅಯ್ಯಪ್ಪಸ್ವಾಮಿ ಬಡಾವಣೆ ಅತ್ಯಂತ ಹಿಂದುಳಿದಿದೆ. ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಈ ಬಾರಿಯ ಅನುದಾನದಲ್ಲಿ ಅಭಿವೃದ್ಧಿಪಡಿಸಿ’ ಎಂದು ಸಲಹೆ ನೀಡಿದರು.</p>.<p>‘ಬಡಾವಣೆಯ ಅಭಿವೃದ್ಧಿಗೆ ₹ 3 ಕೋಟಿಯಿಂದ ₹ 4 ಕೋಟಿ ಬೇಕಾಗುತ್ತದೆ. ಅಷ್ಟೊಂದು ಅನುದಾನ ಒಮ್ಮೆಲೆ ಒಂದೇ ಬಡಾವಣೆಗೆ ಇಡಲು ಸಾಧ್ಯವಾಗುವುದಿಲ್ಲ. ಈ ಬಾರಿ ₹ 1 ಕೋಟಿ ಅನುದಾನದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಪಡಿಸಲಾಗುವುದು’ ಎಂದು ಶಾಸಕರು ಉತ್ತರಿಸಿದರು.</p>.<p>ಸಾರ್ವಜನಿಕರ ಪರವಾಗಿ ಮಾತನಾಡಿದ ಬಾಲರಾಜ್, ‘ಪಟ್ಟಣದ ಹಳೆ ಮಾಧ್ಯಮಿಕ ಶಾಲೆ ಶತಮಾನ ಆಚರಿಸಿಕೊಂಡರೂ ಅದಕ್ಕೆ ಸೂಕ್ತ ರಕ್ಷಣೆಯಿಲ್ಲ. ಅನೈತಿಕ ಚಟುವಟಿಕೆ ತಾಣವಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕು’ ಎಂದು ತಿಳಿಸಿದರು.</p>.<p>ಪಟ್ಟಣದಲ್ಲಿ ರುದ್ರಭೂಮಿಗೆ ಬೇಕಾದ 10 ಎಕರೆ ಭೂಮಿಯನ್ನು ಪಟ್ಟಣದ 10 ಕಿ.ಮೀ. ವ್ಯಾಪ್ತಿಯಲ್ಲಿ ಗುರುತಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಶಾಸಕರುಸೂಚಿಸಿದರು.</p>.<p>ಸಭೆಯಲ್ಲಿ ಪಟ್ಟಣದ ಅನೇಕ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿ ಮೂಲಸೌಕರ್ಯಗಳ ಕೊರತೆ ಇದೆ. ಈ ಬಗ್ಗೆ ಪುರಸಭೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಶಾಸಕರು ಗಮನ ನೀಡಬೇಕು ಎಂದು ನಾಗರಿಕರು ಸಲಹೆ ನೀಡಿದರು.</p>.<p>ಪುರಸಭೆ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಜ್ಯೋತಿ ಕೆಂಚಪ್ಪ, ಪ್ರಭಾರ ಮುಖ್ಯಾಧಿಕಾರಿ, ಪುರಸಭಾ ಸದಸ್ಯರು, ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯ ನಾಗರಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>