ಇದು ಪಕ್ಷದ ಕ್ರಮವೇ ಇರಬಹುದು. ಆದರೆ, ಕೊರೊನಾದಂತಹ ಸಂದಿಗ್ಧ ಸ್ಥಿತಿಯಲ್ಲಿ ಆರೋಗ್ಯ ಖಾತೆಯನ್ನು ಯಶಸ್ವಿಯಾಗಿ ಶ್ರೀರಾಮುಲು ನಿಭಾಯಿಸಿದ್ದಾರೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ರಾಜ್ಯದ ಎಲ್ಲ ಜಿಲ್ಲೆಗಳ ಆಸ್ಪತ್ರೆಗಳಿಗೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ್ದಾರೆ. ಸಿಬ್ಬಂದಿ, ರೋಗಿಗಳ ಸಮಸ್ಯೆ ಆಲಿಸಿ ಪರಿಹಾರ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಖಾತೆ ಬದಲಾವಣೆ ಮಾಡಿರುವುದು ಜನರಿಗೆ ತಪ್ಪು ಸಂದೇಶ ಹೋಗಲು ಎಡೆ ಮಾಡಿಕೊಟ್ಟಿದೆ ಎಂದು ಅಖಿಲ ಕರ್ನಾಟಕ ಶ್ರೀರಾಮುಲು ಅಭಿಮಾನಿಗಳ ಸೈನ್ಯದ ರಾಜ್ಯ ಘಟಕದ ಅಧ್ಯಕ್ಷ ಬಿ.ವಿಜಯ್ ಹೇಳಿದರು.