<p><strong>ಚಿತ್ರದುರ್ಗ: </strong>ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗುರುವಾರ ಸಡಗರ, ಸಂಭ್ರಮದಿಂದ ನೆರವೇರಿತು.</p>.<p>ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರಾ ಮಹೋತ್ಸವ ಎಂಬ ಪ್ರತೀತಿಯನ್ನು ನಾಯಕನಹಟ್ಟಿ ಹೊಂದಿದೆ. ಒಂದು ವಾರ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.</p>.<p>ಮಹಾರಥೋತ್ಸವದ ಅಂಗವಾಗಿ ತಿಪ್ಪೇರುದ್ರಸ್ವಾಮಿ ದೇಗುಲದ ಒಳಮಠದಲ್ಲಿ ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನಡೆದವು. ಜಾತ್ರೆಗೆ ಬಂದ ಭಕ್ತರು ದೇಗುಲದ ಮುಂಭಾಗದಲ್ಲಿ ಒಣ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು. ಕೊಬ್ಬರಿ ಸುಟ್ಟ ಹೊಗೆ ಮುಗಿಲೆತ್ತರಕ್ಕೆ ವಿಸ್ತರಿಸಿತ್ತು.</p>.<p>ಮಧ್ಯಾಹ್ನ 2.30ಕ್ಕೆ ಉತ್ಸವ ಮೂರ್ತಿಯನ್ನು ದೇಗುಲದಿಂದ ರಥದ ಬಳಿಗೆ ಕೊಂಡೊಯ್ಯಲಾಯಿತು. ರಥೋತ್ಸವಕ್ಕೊ ಮೊದಲು ಮುಕ್ತಿ ಬಾವುಟವನ್ನು ಹರಾಜು ಹಾಕಲಾಯಿತು. ವೀರಭದ್ರ ಬಾಬು ಅವರು ₹ 26 ಲಕ್ಷಕ್ಕೆ ಬಾವುಟ ಖರೀದಿಸಿದರು. 2019 ಮತ್ತು 2018 ರಲ್ಲಿ ₹ 72 ಲಕ್ಷಕ್ಕೆ ಖರೀದಿಸಲಾಗಿತ್ತು. ಹರಾಜು ಪ್ರಕ್ರಿಯೆ ಮುಗಿದ ಬಳಿಕ ಬಾವುಟವನ್ನು ರಥಕ್ಕೆ ಕಟ್ಟಿ ಚಾಲನೆ ನೀಡಲಾಯಿತು.</p>.<p>ರಥದ ಮುಕ್ತಿ ಬಾವುಟ ಪಡೆದರೆ ಆರೋಗ್ಯ, ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಉದ್ಯಮಿಗಳು, ರಾಜಕಾರಣಿಗಳು ಬಾವುಟ ಪಡೆಯಲು ಪೈಪೋಟಿ ನಡೆಸುತ್ತಾರೆ.</p>.<p>ಜಾತ್ರಾ ಮಹೋತ್ಸವದ ಮೇಲೆ 'ಕೋವಿಡ್ - 19' ರ ಭೀತಿ ಆವರಿಸಿದೆ. ಮಾಸ್ಕ್ ಧರಿಸಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ಭಕ್ತರು ಮುಖಗವಸು ಧರಿಸಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಂಸದ ಎ. ನಾರಾಯಣಸ್ವಾಮಿ, ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗುರುವಾರ ಸಡಗರ, ಸಂಭ್ರಮದಿಂದ ನೆರವೇರಿತು.</p>.<p>ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರಾ ಮಹೋತ್ಸವ ಎಂಬ ಪ್ರತೀತಿಯನ್ನು ನಾಯಕನಹಟ್ಟಿ ಹೊಂದಿದೆ. ಒಂದು ವಾರ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.</p>.<p>ಮಹಾರಥೋತ್ಸವದ ಅಂಗವಾಗಿ ತಿಪ್ಪೇರುದ್ರಸ್ವಾಮಿ ದೇಗುಲದ ಒಳಮಠದಲ್ಲಿ ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನಡೆದವು. ಜಾತ್ರೆಗೆ ಬಂದ ಭಕ್ತರು ದೇಗುಲದ ಮುಂಭಾಗದಲ್ಲಿ ಒಣ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು. ಕೊಬ್ಬರಿ ಸುಟ್ಟ ಹೊಗೆ ಮುಗಿಲೆತ್ತರಕ್ಕೆ ವಿಸ್ತರಿಸಿತ್ತು.</p>.<p>ಮಧ್ಯಾಹ್ನ 2.30ಕ್ಕೆ ಉತ್ಸವ ಮೂರ್ತಿಯನ್ನು ದೇಗುಲದಿಂದ ರಥದ ಬಳಿಗೆ ಕೊಂಡೊಯ್ಯಲಾಯಿತು. ರಥೋತ್ಸವಕ್ಕೊ ಮೊದಲು ಮುಕ್ತಿ ಬಾವುಟವನ್ನು ಹರಾಜು ಹಾಕಲಾಯಿತು. ವೀರಭದ್ರ ಬಾಬು ಅವರು ₹ 26 ಲಕ್ಷಕ್ಕೆ ಬಾವುಟ ಖರೀದಿಸಿದರು. 2019 ಮತ್ತು 2018 ರಲ್ಲಿ ₹ 72 ಲಕ್ಷಕ್ಕೆ ಖರೀದಿಸಲಾಗಿತ್ತು. ಹರಾಜು ಪ್ರಕ್ರಿಯೆ ಮುಗಿದ ಬಳಿಕ ಬಾವುಟವನ್ನು ರಥಕ್ಕೆ ಕಟ್ಟಿ ಚಾಲನೆ ನೀಡಲಾಯಿತು.</p>.<p>ರಥದ ಮುಕ್ತಿ ಬಾವುಟ ಪಡೆದರೆ ಆರೋಗ್ಯ, ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಉದ್ಯಮಿಗಳು, ರಾಜಕಾರಣಿಗಳು ಬಾವುಟ ಪಡೆಯಲು ಪೈಪೋಟಿ ನಡೆಸುತ್ತಾರೆ.</p>.<p>ಜಾತ್ರಾ ಮಹೋತ್ಸವದ ಮೇಲೆ 'ಕೋವಿಡ್ - 19' ರ ಭೀತಿ ಆವರಿಸಿದೆ. ಮಾಸ್ಕ್ ಧರಿಸಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ಭಕ್ತರು ಮುಖಗವಸು ಧರಿಸಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<p>ಸಂಸದ ಎ. ನಾರಾಯಣಸ್ವಾಮಿ, ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>