ಭದ್ರಾವತಿಗೆ ತೆರಳುತ್ತಿದ್ದ ಅವರು ಮಾರ್ಗಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೊರೊನಾ ಸೋಂಕು ಏಕಾಏಕಿ ಹೆಚ್ಚಳ ಆಗಿದ್ದರಿಂದ ಸಮಸ್ಯೆ ಉಂಟಾಗಿದೆ. ಆಮ್ಲಜನಕಕ್ಕೆ ಬೇಡಿಕೆ ಅಧಿಕವಾಗಿದೆ. ಹೆಚ್ಚುವರಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಭದ್ರಾವತಿಯ ಬಲ್ಡೋಟ ಕಂಪನಿಯ ಆಮ್ಲಜನಕ ಉತ್ಪಾದನಾ ಘಟಕದ ಪುನರಾರಂಭಕ್ಕೆ ಪ್ರಯತ್ನಿಸಲಾಗುತ್ತಿದೆ’ ಎಂದರು.