<p><strong>ಚಳ್ಳಕೆರೆ</strong>: ಜೈಲುಗಳು ಶಿಕ್ಷೆ ನೀಡುವ ಬದಲಿಗೆ ಖೈದಿಗಳ ಮನಃಪರಿವರ್ತನೆ ಮಾಡುವ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಕಾರಾಗೃಹದ ಅಧೀಕ್ಷಕಿ ಎಂ.ಮಹಾದೇವಿ ತಿಳಿಸಿದರು.</p>.<p>ಹೆಚ್ಚಿನ ಅಧ್ಯಯನದ ಸಲುವಾಗಿ ನಗರದ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಈಚೆಗೆ ಚಿತ್ರದುರ್ಗ ಕಾರಾಗೃಹಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಕಾರಾಗೃಹದಲ್ಲಿ ಊಟ, ವಸತಿ, ಗ್ರಂಥಾಲಯ ಸೌಲಭ್ಯದ ಜತೆಗೆ ಸಾಹಿತ್ಯ, ಕಲೆ, ಸಂಗೀತ ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಿಸಲಾಗಿದೆ ಎಂದರು.</p>.<p>ಜೈಲುಗಳ ಬಗೆಗಳು, ಅವುಗಳ ಸುಧಾರಣೆ, ಪೋಕ್ಸೊ ಕಾಯ್ದೆ, ಖೈದಿಗಳ ನಡಾವಳಿ ಮತ್ತು ಶಿಕ್ಷೆ ಇತ್ಯಾದಿ ಕುರಿತು ಜೈಲರ್ ಶ್ರೀಮಂತಗೌಡ ಪಾಟೀಲ್ ಮಾಹಿತಿ ನೀಡಿದರು.</p>.<p>ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಕೆ. ದೇವಪ್ಪ, ಗ್ರಂಥಪಾಲಕ ಶ್ರೀರಾಮರೆಡ್ಡಿ, ಸಹ ಪ್ರಾಧ್ಯಾಪಕ ಕೆ.ಸಿ.ಶರಣಪ್ಪ ಮಾತನಾಡಿದರು.</p>.<p>ಅಧ್ಯಾಪಕ ಟಿ.ನಾಗರಾಜ, ಸಮಾಜಶಾಸ್ತ್ರ ಉಪನ್ಯಾಸಕ ಚಿತ್ತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>: ಜೈಲುಗಳು ಶಿಕ್ಷೆ ನೀಡುವ ಬದಲಿಗೆ ಖೈದಿಗಳ ಮನಃಪರಿವರ್ತನೆ ಮಾಡುವ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಕಾರಾಗೃಹದ ಅಧೀಕ್ಷಕಿ ಎಂ.ಮಹಾದೇವಿ ತಿಳಿಸಿದರು.</p>.<p>ಹೆಚ್ಚಿನ ಅಧ್ಯಯನದ ಸಲುವಾಗಿ ನಗರದ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಈಚೆಗೆ ಚಿತ್ರದುರ್ಗ ಕಾರಾಗೃಹಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾತನಾಡಿದರು.</p>.<p>ಕಾರಾಗೃಹದಲ್ಲಿ ಊಟ, ವಸತಿ, ಗ್ರಂಥಾಲಯ ಸೌಲಭ್ಯದ ಜತೆಗೆ ಸಾಹಿತ್ಯ, ಕಲೆ, ಸಂಗೀತ ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಿಸಲಾಗಿದೆ ಎಂದರು.</p>.<p>ಜೈಲುಗಳ ಬಗೆಗಳು, ಅವುಗಳ ಸುಧಾರಣೆ, ಪೋಕ್ಸೊ ಕಾಯ್ದೆ, ಖೈದಿಗಳ ನಡಾವಳಿ ಮತ್ತು ಶಿಕ್ಷೆ ಇತ್ಯಾದಿ ಕುರಿತು ಜೈಲರ್ ಶ್ರೀಮಂತಗೌಡ ಪಾಟೀಲ್ ಮಾಹಿತಿ ನೀಡಿದರು.</p>.<p>ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಕೆ. ದೇವಪ್ಪ, ಗ್ರಂಥಪಾಲಕ ಶ್ರೀರಾಮರೆಡ್ಡಿ, ಸಹ ಪ್ರಾಧ್ಯಾಪಕ ಕೆ.ಸಿ.ಶರಣಪ್ಪ ಮಾತನಾಡಿದರು.</p>.<p>ಅಧ್ಯಾಪಕ ಟಿ.ನಾಗರಾಜ, ಸಮಾಜಶಾಸ್ತ್ರ ಉಪನ್ಯಾಸಕ ಚಿತ್ತಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>