‘ರಾಜ್ಯ ಸರ್ಕಾರದ ಸಹಯೋಗದಲ್ಲಿ ಮೊದಲ ಹಂತವಾಗಿ ಸೆಪ್ಟೆಂಬರ್ 15ರವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಜಲದ ಮೂಲ, ಜಲ ಪುನರ್ ಬಳಕೆ, ಜಲ ಸಂರಕ್ಷಣೆ, ಮಳೆ ನೀರಿನ ಕೊಯ್ಲು, ಕೆರೆ-ಕಟ್ಟೆಗಳ ಪುನಶ್ಚೇತನ, ಕೊಳವೆಬಾವಿಗಳ ಜಲ ಮರುಪೂರಣ, ಇಂಗುಗುಂಡಿಗಳ ತಯಾರಿಕೆ, ಜಲಾನಯನ ಅಭಿವೃದ್ಧಿ, ತ್ಯಾಜ್ಯ ನೀರಿನ ಪುನರ್ಬಳಕೆ ಹಾಗೂ ಹಸಿರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದರು.