<p><strong>ಚಿತ್ರದುರ್ಗ:</strong> ‘ಭಾರತ-ಚೀನಾ ನಡುವಿನ ಯುದ್ಧದ ಸಂದರ್ಭದಲ್ಲಿ ಜಯವಿಭವ ಸ್ವಾಮೀಜಿ ತಾವು ಧರಿಸುತ್ತಿದ್ದ ಚಿನ್ನದ ಕಿರೀಟ, ಆಭರಣ ಹಾಗೂ ಧನವನ್ನು ರಾಷ್ಟ್ರ ರಕ್ಷಣೆಗೆ ಸಮರ್ಪಿಸಿದ್ದರು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ಮುರುಘಾ ಮಠದ ಲೀಲಾ ವಿಶ್ರಾಂತಿ ತಾಣದಲ್ಲಿ ಬುಧವಾರ ಆಯೋಜಿಸಿದ್ದ ಜಯವಿಭವ ಸ್ವಾಮೀಜಿಯ 61ನೇ ಸ್ಮರಣೋತ್ಸವದಲ್ಲಿ ವಚನಾಭಿಷೇಕ ಸಲ್ಲಿಸಿ ಮಾತನಾಡಿದ ಅವರು, ‘ಮುರುಘಾಮಠ ಪರಂಪರೆಯ ಎಲ್ಲಾ ಸ್ವಾಮೀಜಿಗಳು ದೂರದೃಷ್ಟಿಯುಳ್ಳವರಾಗಿದ್ದರು. ನಮ್ಮ ದೇಶ ಉಳಿದರೆ ನಾವು ಉಳಿವೆವು ಎಂಬುದು ಮಲ್ಲಿಕಾರ್ಜುನ ಶ್ರೀಗಳ ವಾಣಿಯಾಗಿತ್ತು’ ಎಂದರು.</p>.<p>‘ಜಯವಿಭವ ಶ್ರೀಗಳು ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ನೀಡಬೇಕು ಎಂಬ ಚಿಂತನೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಮತ್ತು ಧನವನ್ನು ದೇಶದ ರಕ್ಷಣಾನಿಧಿಗೆ ಅರ್ಪಿಸಿ ಶ್ರೀಮಠದ ಗೌರವ-ಘನತೆಯನ್ನು ಹೆಚ್ಚಿಸಿದ್ದರು’ ಎಂದು ಸ್ಮರಿಸಿದರು.</p>.<p>‘ಜಯದೇವ ಶ್ರೀ ಹಾಗೂ ಮಲ್ಲಿಕಾರ್ಜುನ ಶ್ರೀಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಬಹುಬಾಷಾ ಪಂಡಿತರಾಗಿದ್ದರು. ಕೃಷಿಯ ಕಡೆ ಹೆಚ್ಚಿನ ಒಲವು ಹೊಂದಿದ್ದರು. ಅದರ ಪ್ರತಿಫಲವಾಗಿ ಶ್ರೀಮಠದ ಪಕ್ಕದ ತೋಟವನ್ನು ಇಂದಿಗೂ ಕಾಣಬಹುದಾಗಿದೆ’ ಎಂದರು.</p>.<p>‘ತಮ್ಮ ಅಲ್ಪ ಕಾಲಾವಧಿಯಲ್ಲಿ ಶ್ರೀಮಠವನ್ನು ಅಭಿವೃದ್ಧಿಪಡಿಸಿದರು. ಬೆಂಗಳೂರಿನಲ್ಲಿ ಸರ್ಪಭೂಷಣ ಮಠ ಸ್ಥಾಪನೆ ಮಾಡಿದರು. ಹಾಸನ, ಚಿಕ್ಕಜಾಜೂರಿನಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ ಜಾಗಗಳನ್ನು ಖರೀದಿ ಮಾಡಿದ್ದರು’ ಎಂದು ಹೇಳಿದರು.</p>.<p>‘ನಮ್ಮ ಕುಟುಂಬ ಹಿಂದಿನಿಂದಲೂ ಶ್ರೀಮಠದೊಂದಿಗೆ ಉತ್ತಮ ಭಾಂದವ್ಯ ಹೊಂದಿದೆ. ಶ್ರೀಮಠದಲ್ಲಿ 1962ರಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಮ್ಮ ತಂದೆಯವರ ವಿವಾಹ ನಡೆದಿತ್ತು. ಜಯವಿಭವ ಸ್ವಾಮೀಜಿ ಆಶೀರ್ವಾದ ಮಾಡಿದ್ದರು’ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್ ತಿಳಿಸಿದರು.</p>.<p>‘ಬಸವ ಕುಮಾರ ಸ್ವಾಮೀಜಿ ಶ್ರೀಮಠದಲ್ಲಿ ಶರಣರ, ಮಹನೀಯರ ಸ್ಮರಣೆ ಮತ್ತು ಜಯಂತಿ ಕಾರ್ಯಕ್ರಮಗಳನ್ನು ಜವಾಬ್ದಾರಿ, ಅರ್ಥಪೂರ್ಣವಾಗಿ ಆಯೋಜಿಸುತ್ತಾ ಬರುತ್ತಿದ್ದಾರೆ. ಶ್ರೀಮಠವು ನವಕೋಟಿ ನಾರಾಯಣ ಪೀಠವೆಂದು ಪ್ರಸಿದ್ಧಿ ಪಡೆದಿತ್ತು. ಜಯವಿಭವ ಶ್ರೀಗಳು ಮಾನವೀಯತೆ ಗುಣವುಳ್ಳವರಾಗಿದ್ದರು. ಅವರ ಕಾರ್ಯಗಳು ಅವಿಸ್ಮರಣೀಯ’ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ವೀರೇಶ್ ಹೇಳಿದರು.</p>.<p>‘ಜಯದೇವ ಶ್ರೀಗಳು ಜಯವಿಭವ ಶ್ರೀಗಳನ್ನು ತಮ್ಮ ಉತ್ತರಾಧಿಕಾರಿಯಾಗಿ ಆರಿಸಿಕೊಂಡು ಅವರಿಗೆ ಕಾಶಿಯಲ್ಲಿ ಉನ್ನತ ಶಿಕ್ಷಣ ಕೊಡಿಸಿದರು. ಕೃಷಿಗೆ ಹೆಚ್ಚು ಒತ್ತು ನೀಡಿ ಶ್ರೀಮಠದ ಮುಂದೆ ತೋಟದ ನಿರ್ಮಾಣ ಮಾಡಿದರು’ ಎಂದು ಎಸ್ಜೆಎಂ ಪದವಿ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್.ಪಂಚಾಕ್ಷರಿ ತಿಳಿಸಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ, ವೀರಶೈವ ಸಮಾಜದ ನಿರ್ದೇಶಕ ಎಸ್.ಪರಮೇಶ್, ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ, ಭಕ್ತರಾದ ಆನಂದ್, ರೇವಣ್ಣ, ನವೀನ್ ಮಸ್ಕಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಭಾರತ-ಚೀನಾ ನಡುವಿನ ಯುದ್ಧದ ಸಂದರ್ಭದಲ್ಲಿ ಜಯವಿಭವ ಸ್ವಾಮೀಜಿ ತಾವು ಧರಿಸುತ್ತಿದ್ದ ಚಿನ್ನದ ಕಿರೀಟ, ಆಭರಣ ಹಾಗೂ ಧನವನ್ನು ರಾಷ್ಟ್ರ ರಕ್ಷಣೆಗೆ ಸಮರ್ಪಿಸಿದ್ದರು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವ ಕುಮಾರ ಸ್ವಾಮೀಜಿ ತಿಳಿಸಿದರು.</p>.<p>ಇಲ್ಲಿನ ಮುರುಘಾ ಮಠದ ಲೀಲಾ ವಿಶ್ರಾಂತಿ ತಾಣದಲ್ಲಿ ಬುಧವಾರ ಆಯೋಜಿಸಿದ್ದ ಜಯವಿಭವ ಸ್ವಾಮೀಜಿಯ 61ನೇ ಸ್ಮರಣೋತ್ಸವದಲ್ಲಿ ವಚನಾಭಿಷೇಕ ಸಲ್ಲಿಸಿ ಮಾತನಾಡಿದ ಅವರು, ‘ಮುರುಘಾಮಠ ಪರಂಪರೆಯ ಎಲ್ಲಾ ಸ್ವಾಮೀಜಿಗಳು ದೂರದೃಷ್ಟಿಯುಳ್ಳವರಾಗಿದ್ದರು. ನಮ್ಮ ದೇಶ ಉಳಿದರೆ ನಾವು ಉಳಿವೆವು ಎಂಬುದು ಮಲ್ಲಿಕಾರ್ಜುನ ಶ್ರೀಗಳ ವಾಣಿಯಾಗಿತ್ತು’ ಎಂದರು.</p>.<p>‘ಜಯವಿಭವ ಶ್ರೀಗಳು ಯುದ್ಧದ ಸಂದರ್ಭದಲ್ಲಿ ದೇಶಕ್ಕಾಗಿ ಏನಾದರೂ ನೀಡಬೇಕು ಎಂಬ ಚಿಂತನೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಮತ್ತು ಧನವನ್ನು ದೇಶದ ರಕ್ಷಣಾನಿಧಿಗೆ ಅರ್ಪಿಸಿ ಶ್ರೀಮಠದ ಗೌರವ-ಘನತೆಯನ್ನು ಹೆಚ್ಚಿಸಿದ್ದರು’ ಎಂದು ಸ್ಮರಿಸಿದರು.</p>.<p>‘ಜಯದೇವ ಶ್ರೀ ಹಾಗೂ ಮಲ್ಲಿಕಾರ್ಜುನ ಶ್ರೀಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಬಹುಬಾಷಾ ಪಂಡಿತರಾಗಿದ್ದರು. ಕೃಷಿಯ ಕಡೆ ಹೆಚ್ಚಿನ ಒಲವು ಹೊಂದಿದ್ದರು. ಅದರ ಪ್ರತಿಫಲವಾಗಿ ಶ್ರೀಮಠದ ಪಕ್ಕದ ತೋಟವನ್ನು ಇಂದಿಗೂ ಕಾಣಬಹುದಾಗಿದೆ’ ಎಂದರು.</p>.<p>‘ತಮ್ಮ ಅಲ್ಪ ಕಾಲಾವಧಿಯಲ್ಲಿ ಶ್ರೀಮಠವನ್ನು ಅಭಿವೃದ್ಧಿಪಡಿಸಿದರು. ಬೆಂಗಳೂರಿನಲ್ಲಿ ಸರ್ಪಭೂಷಣ ಮಠ ಸ್ಥಾಪನೆ ಮಾಡಿದರು. ಹಾಸನ, ಚಿಕ್ಕಜಾಜೂರಿನಲ್ಲಿ ವಿದ್ಯಾರ್ಥಿ ನಿಲಯಕ್ಕಾಗಿ ಜಾಗಗಳನ್ನು ಖರೀದಿ ಮಾಡಿದ್ದರು’ ಎಂದು ಹೇಳಿದರು.</p>.<p>‘ನಮ್ಮ ಕುಟುಂಬ ಹಿಂದಿನಿಂದಲೂ ಶ್ರೀಮಠದೊಂದಿಗೆ ಉತ್ತಮ ಭಾಂದವ್ಯ ಹೊಂದಿದೆ. ಶ್ರೀಮಠದಲ್ಲಿ 1962ರಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನಮ್ಮ ತಂದೆಯವರ ವಿವಾಹ ನಡೆದಿತ್ತು. ಜಯವಿಭವ ಸ್ವಾಮೀಜಿ ಆಶೀರ್ವಾದ ಮಾಡಿದ್ದರು’ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್ ತಿಳಿಸಿದರು.</p>.<p>‘ಬಸವ ಕುಮಾರ ಸ್ವಾಮೀಜಿ ಶ್ರೀಮಠದಲ್ಲಿ ಶರಣರ, ಮಹನೀಯರ ಸ್ಮರಣೆ ಮತ್ತು ಜಯಂತಿ ಕಾರ್ಯಕ್ರಮಗಳನ್ನು ಜವಾಬ್ದಾರಿ, ಅರ್ಥಪೂರ್ಣವಾಗಿ ಆಯೋಜಿಸುತ್ತಾ ಬರುತ್ತಿದ್ದಾರೆ. ಶ್ರೀಮಠವು ನವಕೋಟಿ ನಾರಾಯಣ ಪೀಠವೆಂದು ಪ್ರಸಿದ್ಧಿ ಪಡೆದಿತ್ತು. ಜಯವಿಭವ ಶ್ರೀಗಳು ಮಾನವೀಯತೆ ಗುಣವುಳ್ಳವರಾಗಿದ್ದರು. ಅವರ ಕಾರ್ಯಗಳು ಅವಿಸ್ಮರಣೀಯ’ ಎಂದು ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ವೀರೇಶ್ ಹೇಳಿದರು.</p>.<p>‘ಜಯದೇವ ಶ್ರೀಗಳು ಜಯವಿಭವ ಶ್ರೀಗಳನ್ನು ತಮ್ಮ ಉತ್ತರಾಧಿಕಾರಿಯಾಗಿ ಆರಿಸಿಕೊಂಡು ಅವರಿಗೆ ಕಾಶಿಯಲ್ಲಿ ಉನ್ನತ ಶಿಕ್ಷಣ ಕೊಡಿಸಿದರು. ಕೃಷಿಗೆ ಹೆಚ್ಚು ಒತ್ತು ನೀಡಿ ಶ್ರೀಮಠದ ಮುಂದೆ ತೋಟದ ನಿರ್ಮಾಣ ಮಾಡಿದರು’ ಎಂದು ಎಸ್ಜೆಎಂ ಪದವಿ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್.ಪಂಚಾಕ್ಷರಿ ತಿಳಿಸಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಎಚ್.ಸಿ.ನಿರಂಜನಮೂರ್ತಿ, ವೀರಶೈವ ಸಮಾಜದ ನಿರ್ದೇಶಕ ಎಸ್.ಪರಮೇಶ್, ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ, ಭಕ್ತರಾದ ಆನಂದ್, ರೇವಣ್ಣ, ನವೀನ್ ಮಸ್ಕಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>