<p><strong>ಚಿತ್ರದುರ್ಗ:</strong> ವೃತ್ತಿ ಮತ್ತು ವೈಯಕ್ತಿಕ ಬದುಕಿನ ನಡುವೆ ಸಮನ್ವಯ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ ‘ಕೋವಿಡ್ ಮತ್ತು ಮಾಧ್ಯಮಗಳು’ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ‘ವೃತ್ತಿ ಧರ್ಮ ಮತ್ತು ಜೀವನ ಧರ್ಮ ಒಟ್ಟಾಗಿ ಸಾಗಬೇಕಿದೆ. ಧರ್ಮ ಮತ್ತು ವೃತ್ತಿಯನ್ನು ಬಿಟ್ಟು ಜೀವನವಿಲ್ಲ’ ಎಂದು ಹೇಳಿದರು.</p>.<p>‘ಪತ್ರಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸಲು ಬೌದ್ಧಿಕತೆ ಅಗತ್ಯವಾಗಿ ಬೇಕು. ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪತ್ರಕರ್ತರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ‘ಕೋವಿಡ್ ಸಂಕಷ್ಟ ಎದುರಾದಾಗ ಪತ್ರಕರ್ತರು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಕೊರೊನಾ ಸೋಂಕಿಗೆ ಮುಖಾಮುಖಿಯಾಗಿ ರಜೆ ಪಡೆಯದೇ ಕೆಲಸ ಮಾಡಿದೆವು. ಆದರೂ, ಪತ್ರಿಕಾರಂಗ ಸಂಕಷ್ಟಕ್ಕೆ ಸಿಲುಕಿದೆ. ಈ ಸಂಕಷ್ಟದಿಂದ ಹೊರಗೆ ಬರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ’ ಎಂದು ಹೇಳಿದರು.</p>.<p>‘ಕೋವಿಡ್ನಿಂದ ರಾಜ್ಯದ ಹಲವು ಪತ್ರಕರ್ತರು ಮೃತಪಟ್ಟಿದ್ದಾರೆ. ಇಂತಹ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರವನ್ನು ಮನವೊಲಿಸಲಾಗಿದೆ. ರಾಜ್ಯ ಸರ್ಕಾರವೂ ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿದೆ. ಆರೋಗ್ಯ ಭಾಗ್ಯ ಯೋಜನೆಯ ಫಲ ಎಲ್ಲರಿಗೂ ಸಿಗುವಂತೆ ಆಗಿದೆ’ ಎಂದರು.</p>.<p>ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ, ‘ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ಪತ್ರಿಕೋದ್ಯಮದಲ್ಲಿ ಬದಲಾವಣೆ ಕಾಣುತ್ತಿದೆ. ಬದಲಾವಣೆಗೆ ಹೊಂದಿಕೊಳ್ಳುವ ಪ್ರವೃತ್ತಿಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ವೃತ್ತಿ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಅಧ್ಯಯನಶೀಲತೆ ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಲಕ್ಷ್ಮಣ್, ಉಪಾಧ್ಯಕ್ಷರಾದ ಡಿ.ಕುಮಾರಸ್ವಾಮಿ, ನಾಗರಾಜ ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡಗೆರೆ, ಹಿರಿಯ ಪತ್ರಕರ್ತ ನರೇನಹಳ್ಳಿ ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ವೃತ್ತಿ ಮತ್ತು ವೈಯಕ್ತಿಕ ಬದುಕಿನ ನಡುವೆ ಸಮನ್ವಯ ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಭಾನುವಾರ ಆಯೋಜಿಸಿದ್ದ ‘ಕೋವಿಡ್ ಮತ್ತು ಮಾಧ್ಯಮಗಳು’ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ‘ವೃತ್ತಿ ಧರ್ಮ ಮತ್ತು ಜೀವನ ಧರ್ಮ ಒಟ್ಟಾಗಿ ಸಾಗಬೇಕಿದೆ. ಧರ್ಮ ಮತ್ತು ವೃತ್ತಿಯನ್ನು ಬಿಟ್ಟು ಜೀವನವಿಲ್ಲ’ ಎಂದು ಹೇಳಿದರು.</p>.<p>‘ಪತ್ರಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸಲು ಬೌದ್ಧಿಕತೆ ಅಗತ್ಯವಾಗಿ ಬೇಕು. ಬೌದ್ಧಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪತ್ರಕರ್ತರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ‘ಕೋವಿಡ್ ಸಂಕಷ್ಟ ಎದುರಾದಾಗ ಪತ್ರಕರ್ತರು ಮನೆಯಲ್ಲಿ ಕುಳಿತುಕೊಳ್ಳಲಿಲ್ಲ. ಕೊರೊನಾ ಸೋಂಕಿಗೆ ಮುಖಾಮುಖಿಯಾಗಿ ರಜೆ ಪಡೆಯದೇ ಕೆಲಸ ಮಾಡಿದೆವು. ಆದರೂ, ಪತ್ರಿಕಾರಂಗ ಸಂಕಷ್ಟಕ್ಕೆ ಸಿಲುಕಿದೆ. ಈ ಸಂಕಷ್ಟದಿಂದ ಹೊರಗೆ ಬರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ’ ಎಂದು ಹೇಳಿದರು.</p>.<p>‘ಕೋವಿಡ್ನಿಂದ ರಾಜ್ಯದ ಹಲವು ಪತ್ರಕರ್ತರು ಮೃತಪಟ್ಟಿದ್ದಾರೆ. ಇಂತಹ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರವನ್ನು ಮನವೊಲಿಸಲಾಗಿದೆ. ರಾಜ್ಯ ಸರ್ಕಾರವೂ ಪತ್ರಕರ್ತರ ಬೇಡಿಕೆಗಳಿಗೆ ಸ್ಪಂದಿಸಿದೆ. ಆರೋಗ್ಯ ಭಾಗ್ಯ ಯೋಜನೆಯ ಫಲ ಎಲ್ಲರಿಗೂ ಸಿಗುವಂತೆ ಆಗಿದೆ’ ಎಂದರು.</p>.<p>ದಾವಣಗೆರೆ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ, ‘ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ಪತ್ರಿಕೋದ್ಯಮದಲ್ಲಿ ಬದಲಾವಣೆ ಕಾಣುತ್ತಿದೆ. ಬದಲಾವಣೆಗೆ ಹೊಂದಿಕೊಳ್ಳುವ ಪ್ರವೃತ್ತಿಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ವೃತ್ತಿ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಅಧ್ಯಯನಶೀಲತೆ ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಲಕ್ಷ್ಮಣ್, ಉಪಾಧ್ಯಕ್ಷರಾದ ಡಿ.ಕುಮಾರಸ್ವಾಮಿ, ನಾಗರಾಜ ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಗೌಡಗೆರೆ, ಹಿರಿಯ ಪತ್ರಕರ್ತ ನರೇನಹಳ್ಳಿ ಅರುಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>