<p><strong>ಚಿತ್ರದುರ್ಗ</strong>: ಧ್ವನಿ ಇಲ್ಲದವರು ಹಾಗೂ ಬಡವರಿಗೆ ನ್ಯಾಯ ಕೊಡುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ವಕೀಲರು ಮತ್ತು ನ್ಯಾಯಾಧೀಶರು ಕೆಲಸ ಮಾಡಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅಭಿಪ್ರಾಯಪಟ್ಟರು.</p>.<p>ಹೈಕೋರ್ಟ್ಗೆ ನೂತನವಾಗಿ ನೇಮಕಗೊಂಡ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದವರನ್ನು ಸನ್ಮಾನಿಸಲು ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘ ಶನಿವಾರ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನ್ಯಾಯಾಂಗ ವ್ಯವಸ್ಥೆ ಪ್ರಜಾಪ್ರಭುತ್ವದ ಬುನಾದಿ. ವಕೀಲರು, ನ್ಯಾಯಾಧೀಶರು ಈ ವ್ಯವಸ್ಥೆಯಲ್ಲಿದ್ದಾರೆ. ನ್ಯಾಯ, ಹಕ್ಕು ಸಿಗದೇ ಪರದಾಡುವ ದೊಡ್ಡ ಸಮುದಾಯ ಸಮಾಜದಲ್ಲಿದೆ. ಇಂತಹ ಸಮುದಾಯ ಗುರುತಿಸಿ ನ್ಯಾಯ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ತ್ವರಿತ ನ್ಯಾಯಾದಾನ ಆದ್ಯತೆ ಆಗಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ಸಮಾಜದ ಹಲವು ಚಳವಳಿಗಳನ್ನು ಮುನ್ನಡೆಸಿದ್ದು ವಕೀಲ ಸಮುದಾಯ. ಸಮಾಜಕ್ಕೆ ವಕೀಲರ ಮುಂದಾಳತ್ವದ ಅಗತ್ಯವಿದೆ. ಈವರೆಗೆ ವಕೀಲರಾಗಿದ್ದವರು ನ್ಯಾಯಮೂರ್ತಿ, ನ್ಯಾಯಾಧೀಶರಾದ ಬಳಿಕ ಸಾಂವಿಧಾನಿಕ ಹುದ್ದೆ ಅಲಂಕರಿಸುತ್ತಾರೆ. ಅವರು ಸ್ಥಳ, ವೃತ್ತಿಪರ ಸಮುದಾಯದ ಗಡಿಯನ್ನು ಮೀರಿ ಕಾನೂನು ಚೌಕಟ್ಟಿಗೆ ಒಳಪಡುತ್ತಾರೆ’ ಎಂದು ಹೇಳಿದರು.</p>.<p>ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನಿಯೋಜನೆಗೊಂಡ ಬಿ.ಬಸವರಾಜು, ರಾಮಚಂದ್ರ ಬಿ.ಹುದ್ದಾರ್, ಟಿ.ವೆಂಕಟೇಶ್ ನಾಯ್ಕ್ ಹಾಗೂ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ ಇ.ಎಸ್.ಈರಣ್ಣ, ಎನ್.ಆರ್.ಮಧು ಅವರನ್ನು ಸನ್ಮಾನಿಸಲಾಯಿತು.</p>.<p>ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಕರ್ನಾಟಕ ವಕೀಲರ ಪರಿಷತ್ತಿನ ಎಂ.ದೇವರಾಜ್, ಆರ್.ರಾಜಣ್ಣ, ಎಸ್.ಎಫ್.ಗೌತಮ್ ಚಂದ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಶಿವು ಯಾದವ್, ಉಪಾಧ್ಯಕ್ಷ ಜಿ.ಸಿ.ದಯಾನಂದ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಧ್ವನಿ ಇಲ್ಲದವರು ಹಾಗೂ ಬಡವರಿಗೆ ನ್ಯಾಯ ಕೊಡುವ ಮೂಲಕ ನ್ಯಾಯಾಂಗ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ವಕೀಲರು ಮತ್ತು ನ್ಯಾಯಾಧೀಶರು ಕೆಲಸ ಮಾಡಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅಭಿಪ್ರಾಯಪಟ್ಟರು.</p>.<p>ಹೈಕೋರ್ಟ್ಗೆ ನೂತನವಾಗಿ ನೇಮಕಗೊಂಡ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದವರನ್ನು ಸನ್ಮಾನಿಸಲು ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ವಕೀಲರ ಸಂಘ ಶನಿವಾರ ಆಯೋಜಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನ್ಯಾಯಾಂಗ ವ್ಯವಸ್ಥೆ ಪ್ರಜಾಪ್ರಭುತ್ವದ ಬುನಾದಿ. ವಕೀಲರು, ನ್ಯಾಯಾಧೀಶರು ಈ ವ್ಯವಸ್ಥೆಯಲ್ಲಿದ್ದಾರೆ. ನ್ಯಾಯ, ಹಕ್ಕು ಸಿಗದೇ ಪರದಾಡುವ ದೊಡ್ಡ ಸಮುದಾಯ ಸಮಾಜದಲ್ಲಿದೆ. ಇಂತಹ ಸಮುದಾಯ ಗುರುತಿಸಿ ನ್ಯಾಯ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ತ್ವರಿತ ನ್ಯಾಯಾದಾನ ಆದ್ಯತೆ ಆಗಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ಸಮಾಜದ ಹಲವು ಚಳವಳಿಗಳನ್ನು ಮುನ್ನಡೆಸಿದ್ದು ವಕೀಲ ಸಮುದಾಯ. ಸಮಾಜಕ್ಕೆ ವಕೀಲರ ಮುಂದಾಳತ್ವದ ಅಗತ್ಯವಿದೆ. ಈವರೆಗೆ ವಕೀಲರಾಗಿದ್ದವರು ನ್ಯಾಯಮೂರ್ತಿ, ನ್ಯಾಯಾಧೀಶರಾದ ಬಳಿಕ ಸಾಂವಿಧಾನಿಕ ಹುದ್ದೆ ಅಲಂಕರಿಸುತ್ತಾರೆ. ಅವರು ಸ್ಥಳ, ವೃತ್ತಿಪರ ಸಮುದಾಯದ ಗಡಿಯನ್ನು ಮೀರಿ ಕಾನೂನು ಚೌಕಟ್ಟಿಗೆ ಒಳಪಡುತ್ತಾರೆ’ ಎಂದು ಹೇಳಿದರು.</p>.<p>ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನಿಯೋಜನೆಗೊಂಡ ಬಿ.ಬಸವರಾಜು, ರಾಮಚಂದ್ರ ಬಿ.ಹುದ್ದಾರ್, ಟಿ.ವೆಂಕಟೇಶ್ ನಾಯ್ಕ್ ಹಾಗೂ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ ಇ.ಎಸ್.ಈರಣ್ಣ, ಎನ್.ಆರ್.ಮಧು ಅವರನ್ನು ಸನ್ಮಾನಿಸಲಾಯಿತು.</p>.<p>ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಕರ್ನಾಟಕ ವಕೀಲರ ಪರಿಷತ್ತಿನ ಎಂ.ದೇವರಾಜ್, ಆರ್.ರಾಜಣ್ಣ, ಎಸ್.ಎಫ್.ಗೌತಮ್ ಚಂದ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸಿ.ಶಿವು ಯಾದವ್, ಉಪಾಧ್ಯಕ್ಷ ಜಿ.ಸಿ.ದಯಾನಂದ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>