ಚಿಕ್ಕಜಾಜೂರು: ಇದೇ ಡಿ.9ರಂದು ಬೆಳಿಗ್ಗೆ 9 ಗಂಟೆಗೆ ಚಿಕ್ಕಜಾಜೂರು ಸಮೀಪದ ಗುಂಜಿಗನೂರು ಗ್ರಾಮದಲ್ಲಿ ನಡೆಯುವ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಟೂರ್ನಿಯನ್ನು ಶಾಸಕ ಎಂ. ಚಂದ್ರಪ್ಪ ಹಾಗೂ ಪಿ.ಎಸ್. ಮೂರ್ತಿ ಉದ್ಘಾಟಿಸಲಿದ್ದಾರೆ.
ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ತಂಡಕ್ಕೆ ಕ್ರಮವಾಗಿ ₹25,000, ₹15,000, 7,500 ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.