<p><strong>ಚಿಕ್ಕಜಾಜೂರು:</strong> ಸಮೀಪದ ಹಿರೇಎಮ್ಮಿಗನೂರು ಗ್ರಾಮ ದೇವರು ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಯ ರಥೋತ್ಸವ ಮಂಗಳವಾರ ಸಂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಗಳಿಗೆ ವಿಶೇಷ ಪೂಜೆ, ಅರ್ಚನೆಗಳು ನಡೆದವು. ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಗಣೇಶ್, ಬಕ್ಕೇಶ್ ಹಾಗೂ ಅವರ ಕುಟುಂಬದವರು ಕಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. </p>.<p>ಸಂಜೆ ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಗಳ ಉತ್ಸವ ಮೂರ್ತಿಗಳನ್ನು ಪ್ರತ್ಯೇಕ ಪಲ್ಲಕ್ಕಿಗಳಲ್ಲಿ ಕೂರಿಸಿ, ಕಲ್ಲೇಶ್ವರ ವೀರಗಾಸೆ ತಂಡದ ನೃತ್ಯ, ನಂದಿ ಕೋಲು, ಡೊಳ್ಳು ಕುಣಿತ, ಮದ್ದಳೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಸಂಜೆಯಾಗುತ್ತಲೇ ಉತ್ಸವ ಮೂರ್ತಿಗಳನ್ನು ರಥದ ಬಳಿ ಕರೆ ತರಲಾಯಿತು. ಹೊಸ ಬಟ್ಟೆ, ಹೂವು ಮತ್ತು ಹೂವಿನ ಹಾರಗಳಿಂದ ಅಲಂಕಾರ ಮಾಡಿದ ಬೃಹತ್ ರಥದಲ್ಲಿ ಉತ್ಸವ ಮೂರ್ತಿಗಳನ್ನು ಕೂರಿಸಲಾಯಿತು. ದೊಡ್ಡೆಡೆ ಸೇವೆಯನ್ನು ನೆರವೇರಿಸಲಾಯಿತು.</p>.<p>ಅರ್ಚಕರು ಮಹಾ ಮಂಗಳಾರತಿ ಮಾಡುತ್ತಿದ್ದಂತೆ ಭಕ್ತರು ರಥದ ಚಕ್ರಗಳಿಗೆ ತೆಂಗಿನ ಕಾಯಿ ಹೊಡೆದು ಭಕ್ತಿ ಸಮರ್ಪಿಸಿದರು. ರಥೋತ್ಸವಕ್ಕೆ ಆಗಮಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಪುತ್ರರಾದ ಎಸ್.ಎಸ್. ಮಲ್ಲಿಕಾರ್ಜುನ್, ಬಕ್ಕೇಶ್, ಗಣೇಶ್ ಅವರು ಸಾವಿರಾರು ಭಕ್ತರೊಂದಿಗೆ ರಥವನ್ನು ಎಳೆದರು.</p>.<p>ಜಿಲ್ಲೆಯ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಾತ್ರಿ ಸ್ವಾಮಿಗೆ ಓಕುಳಿ ನಡೆಸಲಾಯಿತು. ಇದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು ಎಂದು ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ಸಮೀಪದ ಹಿರೇಎಮ್ಮಿಗನೂರು ಗ್ರಾಮ ದೇವರು ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಯ ರಥೋತ್ಸವ ಮಂಗಳವಾರ ಸಂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಗಳಿಗೆ ವಿಶೇಷ ಪೂಜೆ, ಅರ್ಚನೆಗಳು ನಡೆದವು. ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಗಣೇಶ್, ಬಕ್ಕೇಶ್ ಹಾಗೂ ಅವರ ಕುಟುಂಬದವರು ಕಲ್ಲೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. </p>.<p>ಸಂಜೆ ಕಲ್ಲೇಶ್ವರ ಹಾಗೂ ಆಂಜನೇಯ ಸ್ವಾಮಿಗಳ ಉತ್ಸವ ಮೂರ್ತಿಗಳನ್ನು ಪ್ರತ್ಯೇಕ ಪಲ್ಲಕ್ಕಿಗಳಲ್ಲಿ ಕೂರಿಸಿ, ಕಲ್ಲೇಶ್ವರ ವೀರಗಾಸೆ ತಂಡದ ನೃತ್ಯ, ನಂದಿ ಕೋಲು, ಡೊಳ್ಳು ಕುಣಿತ, ಮದ್ದಳೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಸಂಜೆಯಾಗುತ್ತಲೇ ಉತ್ಸವ ಮೂರ್ತಿಗಳನ್ನು ರಥದ ಬಳಿ ಕರೆ ತರಲಾಯಿತು. ಹೊಸ ಬಟ್ಟೆ, ಹೂವು ಮತ್ತು ಹೂವಿನ ಹಾರಗಳಿಂದ ಅಲಂಕಾರ ಮಾಡಿದ ಬೃಹತ್ ರಥದಲ್ಲಿ ಉತ್ಸವ ಮೂರ್ತಿಗಳನ್ನು ಕೂರಿಸಲಾಯಿತು. ದೊಡ್ಡೆಡೆ ಸೇವೆಯನ್ನು ನೆರವೇರಿಸಲಾಯಿತು.</p>.<p>ಅರ್ಚಕರು ಮಹಾ ಮಂಗಳಾರತಿ ಮಾಡುತ್ತಿದ್ದಂತೆ ಭಕ್ತರು ರಥದ ಚಕ್ರಗಳಿಗೆ ತೆಂಗಿನ ಕಾಯಿ ಹೊಡೆದು ಭಕ್ತಿ ಸಮರ್ಪಿಸಿದರು. ರಥೋತ್ಸವಕ್ಕೆ ಆಗಮಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಪುತ್ರರಾದ ಎಸ್.ಎಸ್. ಮಲ್ಲಿಕಾರ್ಜುನ್, ಬಕ್ಕೇಶ್, ಗಣೇಶ್ ಅವರು ಸಾವಿರಾರು ಭಕ್ತರೊಂದಿಗೆ ರಥವನ್ನು ಎಳೆದರು.</p>.<p>ಜಿಲ್ಲೆಯ ಹಾಗೂ ದಾವಣಗೆರೆ ಜಿಲ್ಲೆಯ ವಿವಿಧ ಕಡೆಗಳಿಂದ ಬಂದ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ರಾತ್ರಿ ಸ್ವಾಮಿಗೆ ಓಕುಳಿ ನಡೆಸಲಾಯಿತು. ಇದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು ಎಂದು ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>