<p><strong>ಚಿಕ್ಕಜಾಜೂರು</strong>: ಸಮೀಪದ ಹಿರೇಎಮ್ಮಿಗನೂರು ಗ್ರಾಮ ದೇವರು ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿಯ ರಥೋತ್ಸವ ಶನಿವಾರ ಶ್ರದ್ಧಾ, ಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿ ಮೂರ್ತಿಗೆ ವಿಶೇಷ ಪೂಜೆ, ಅರ್ಚನೆಗಳು ನಡೆದವು. ಸಂಜೆ ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿಗಳ ಉತ್ಸವಮೂರ್ತಿಗಳನ್ನು ಪ್ರತ್ಯೇಕ ಪಲ್ಲಕ್ಕಿಗಳಲ್ಲಿ ಕೂರಿಸಿ, ವೀರಗಾಸೆ, ನಂದಿ ಕೋಲು, ಡೊಳ್ಳು ಕುಣಿತ, ಮದ್ದಳೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಅಲಂಕೃತ ರಥದಲ್ಲಿ ಉತ್ಸವಮೂರ್ತಿ ಕೂರಿಸಿ ದೊಡ್ಡೆಡೆ ಸೇವೆ ನೆರವೇರಿಸಲಾಯಿತು. ಭಕ್ತರು ರಥದ ಚಕ್ರಗಳಿಗೆ ತೆಂಗಿನ ಕಾಯಿ ಒಡೆದು ಭಕ್ತಿ ಸಮರ್ಪಿಸಿದರು.</p>.<p>ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್. ಗಣೇಶ್, ಎಸ್.ಎಸ್. ಬಕ್ಕೇಶ್ ಹಾಗೂ ಅವರ ಕುಟುಂಬ ವರ್ಗದವರು ಕಲ್ಲೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಶಾಮನೂರು ಶಿವಶಂಕರಪ್ಪ ಅವರ ಪುತ್ರರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ಮಾಜಿ ಸಚಿವ ಎಚ್. ಆಂಜನೇಯ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯ ಭಕ್ತರು ಭಾಗವಹಿಸಿದ್ದರು. ರಾತ್ರಿ ಸ್ವಾಮಿಗೆ ಓಕುಳಿ ನಡೆಸಿ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು</strong>: ಸಮೀಪದ ಹಿರೇಎಮ್ಮಿಗನೂರು ಗ್ರಾಮ ದೇವರು ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿಯ ರಥೋತ್ಸವ ಶನಿವಾರ ಶ್ರದ್ಧಾ, ಭಕ್ತಿಯಿಂದ ನೆರವೇರಿತು.</p>.<p>ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿ ಮೂರ್ತಿಗೆ ವಿಶೇಷ ಪೂಜೆ, ಅರ್ಚನೆಗಳು ನಡೆದವು. ಸಂಜೆ ಕಲ್ಲೇಶ್ವರ ಹಾಗೂ ಆಂಜನೇಯಸ್ವಾಮಿಗಳ ಉತ್ಸವಮೂರ್ತಿಗಳನ್ನು ಪ್ರತ್ಯೇಕ ಪಲ್ಲಕ್ಕಿಗಳಲ್ಲಿ ಕೂರಿಸಿ, ವೀರಗಾಸೆ, ನಂದಿ ಕೋಲು, ಡೊಳ್ಳು ಕುಣಿತ, ಮದ್ದಳೆ ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಅಲಂಕೃತ ರಥದಲ್ಲಿ ಉತ್ಸವಮೂರ್ತಿ ಕೂರಿಸಿ ದೊಡ್ಡೆಡೆ ಸೇವೆ ನೆರವೇರಿಸಲಾಯಿತು. ಭಕ್ತರು ರಥದ ಚಕ್ರಗಳಿಗೆ ತೆಂಗಿನ ಕಾಯಿ ಒಡೆದು ಭಕ್ತಿ ಸಮರ್ಪಿಸಿದರು.</p>.<p>ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಎಸ್.ಎಸ್. ಗಣೇಶ್, ಎಸ್.ಎಸ್. ಬಕ್ಕೇಶ್ ಹಾಗೂ ಅವರ ಕುಟುಂಬ ವರ್ಗದವರು ಕಲ್ಲೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಶಾಮನೂರು ಶಿವಶಂಕರಪ್ಪ ಅವರ ಪುತ್ರರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ಮಾಜಿ ಸಚಿವ ಎಚ್. ಆಂಜನೇಯ ಪೂಜೆ ಸಲ್ಲಿಸಿದರು.</p>.<p>ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯ ಭಕ್ತರು ಭಾಗವಹಿಸಿದ್ದರು. ರಾತ್ರಿ ಸ್ವಾಮಿಗೆ ಓಕುಳಿ ನಡೆಸಿ ಜಾತ್ರಾ ಮಹೋತ್ಸವಕ್ಕೆ ತೆರೆ ಎಳೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>