ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವ ಕಲ್ಯಾಣದಲ್ಲಿ ಕಲ್ಯಾಣ ಪರ್ವ ಉತ್ಸವ

Last Updated 15 ಸೆಪ್ಟೆಂಬರ್ 2022, 4:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಸವ ಕಲ್ಯಾಣದಲ್ಲಿ ಅಕ್ಟೋಬರ್‌ 1 ಮತ್ತು 2ರಂದು 21ನೇ ಕಲ್ಯಾಣ ಪರ್ವ ಉತ್ಸವ ಆಚರಿಸಲಾಗುತ್ತದೆ ಎಂದು ಬೆಂಗಳೂರಿನಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

‘ಲಿಂಗೈಕ್ಯ ಮಾತೆ ಮಹಾದೇವಿಯವರ ಮಾರ್ಗದರ್ಶನದಂತೆ 20 ಕಲ್ಯಾಣ ಪರ್ವಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಚರಿಸಿಕೊಂಡು ಬಂದಿದ್ದೇವೆ’ ಎಂದುಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘1988ರಲ್ಲಿ ಲಿಂಗಾನಂದ ಸ್ವಾಮೀಜಿ ಅವರಿಂದ ಬೀದರ್‌ನಲ್ಲಿ ಇಷ್ಟಲಿಂಗ ದೀಕ್ಷೆ ಪಡೆದು ಕಾರ್ಯಕರ್ತನಾಗಿ ದುಡಿದು ರಾಷ್ಟ್ರೀಯ ಬಸವದಳವನ್ನು 35 ವರ್ಷಗಳಿಂದ ಕಟ್ಟಿ ಬೆಳೆಸಿದ್ದೇನೆ. ನನ್ನ ತ್ಯಾಗ ಮತ್ತು ನಿಸ್ವಾರ್ಥ ಸೇವೆ ಗುರುತಿಸಿ ಮಾತೆ ಮಹಾದೇವಿ ರಾಷ್ಟ್ರೀಯ ಬಸವದಳ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನ ನೀಡಿದ್ದರು’ ಎಂದು ತಿಳಿಸಿದರು.

ಪ್ರಭುಲಿಂಗ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ರಾಜ್ಯ ಘಟಕದ ಅಧ್ಯಕ್ಷ ಕೆ. ವೀರೇಶ್‌ಕುಮಾರ್, ಮುಖಂಡರಾದ ಧೂಳಪ್ಪ ಸೊರಳ್ಳಿ, ಕಲ್ಮೇಶ್‌ ಲಿಂಗಾಯತ್, ಆರ್‌. ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT