<p><strong>ಚಿತ್ರದುರ್ಗ: </strong>‘ಮಾನವೀಯ ಮೌಲ್ಯವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಕನಕದಾಸರು ಸೇರಿ ಅನೇಕ ಮಹನೀಯರ ಆದರ್ಶ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಸರಳವಾಗಿ ಆಯೋಜಿಸಿದ್ದ ‘ಸಂತಶ್ರೇಷ್ಠ ಕನಕದಾಸರ ಜಯಂತ್ಯುತ್ಸವ’ದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರು ನೆಮ್ಮದಿಯ ಬದುಕು ಕಾಣಬೇಕು. ಸರಳ ರೀತಿಯಲ್ಲಿ ಜೀವನ ಸಾಗಿಸಬೇಕು. ದೇಶದ ಒಳಿತಿಗಾಗಿ ಶ್ರಮಿಸಬೇಕು. ಇವೆಲ್ಲವೂ ಸಾಧ್ಯವಾಗಬೇಕಾದರೆ, ಕನಕದಾಸರು ಸೇರಿದಂತೆ ರಾಷ್ಟ್ರದ ಮಹಾನ್ ವ್ಯಕ್ತಿಗಳು ಬಿತ್ತಿದ ತತ್ವಾದರ್ಶ ಪಾಲಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಟಿ.ಯೋಗೇಶ, ‘ಕನಕದಾಸರು ಭಕ್ತಿ ಪರಂಪರೆ ಆರಾಧನೆಯ ಹಿನ್ನೆಲೆಯಲ್ಲಿ ಬಂದವರಾದರೂ ಅವರ ತತ್ವ, ಸಾಹಿತ್ಯದಲ್ಲಿ ಸಮಾಜಿಕ ಕಳಕಳಿ ಇದೆ’ ಎಂದು ಹೇಳಿದರು.</p>.<p>‘ಕನಕದಾಸರು ಒಂದು ಶಕ್ತಿಯಾಗಿ ನಾಡನ್ನು ಸುತ್ತಿ ತತ್ವ, ಸಂದೇಶ, ದೈವಭಕ್ತಿ ಸಾರುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಶ್ರೇಷ್ಠ ದಾರ್ಶನಿಕರಾಗಿದ್ದಾರೆ. ಹೀಗಾಗಿ ಅವರು ಒಂದು ವಿಶ್ವಕೋಶವಿದ್ದಂತೆ’ ಎಂದು ಬಣ್ಣಿಸಿದರು.</p>.<p>ಉಪವಿಭಾಗಾಧಿಕಾರಿ ಪ್ರಸನ್ನ, ಡಿಡಿಪಿಐ ರವಿಶಂಕರ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಸದಾಶಿವ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ಮಾನವೀಯ ಮೌಲ್ಯವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಕನಕದಾಸರು ಸೇರಿ ಅನೇಕ ಮಹನೀಯರ ಆದರ್ಶ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಸರಳವಾಗಿ ಆಯೋಜಿಸಿದ್ದ ‘ಸಂತಶ್ರೇಷ್ಠ ಕನಕದಾಸರ ಜಯಂತ್ಯುತ್ಸವ’ದಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬರು ನೆಮ್ಮದಿಯ ಬದುಕು ಕಾಣಬೇಕು. ಸರಳ ರೀತಿಯಲ್ಲಿ ಜೀವನ ಸಾಗಿಸಬೇಕು. ದೇಶದ ಒಳಿತಿಗಾಗಿ ಶ್ರಮಿಸಬೇಕು. ಇವೆಲ್ಲವೂ ಸಾಧ್ಯವಾಗಬೇಕಾದರೆ, ಕನಕದಾಸರು ಸೇರಿದಂತೆ ರಾಷ್ಟ್ರದ ಮಹಾನ್ ವ್ಯಕ್ತಿಗಳು ಬಿತ್ತಿದ ತತ್ವಾದರ್ಶ ಪಾಲಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಟಿ.ಯೋಗೇಶ, ‘ಕನಕದಾಸರು ಭಕ್ತಿ ಪರಂಪರೆ ಆರಾಧನೆಯ ಹಿನ್ನೆಲೆಯಲ್ಲಿ ಬಂದವರಾದರೂ ಅವರ ತತ್ವ, ಸಾಹಿತ್ಯದಲ್ಲಿ ಸಮಾಜಿಕ ಕಳಕಳಿ ಇದೆ’ ಎಂದು ಹೇಳಿದರು.</p>.<p>‘ಕನಕದಾಸರು ಒಂದು ಶಕ್ತಿಯಾಗಿ ನಾಡನ್ನು ಸುತ್ತಿ ತತ್ವ, ಸಂದೇಶ, ದೈವಭಕ್ತಿ ಸಾರುವ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಶ್ರೇಷ್ಠ ದಾರ್ಶನಿಕರಾಗಿದ್ದಾರೆ. ಹೀಗಾಗಿ ಅವರು ಒಂದು ವಿಶ್ವಕೋಶವಿದ್ದಂತೆ’ ಎಂದು ಬಣ್ಣಿಸಿದರು.</p>.<p>ಉಪವಿಭಾಗಾಧಿಕಾರಿ ಪ್ರಸನ್ನ, ಡಿಡಿಪಿಐ ರವಿಶಂಕರ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಸದಾಶಿವ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>