<p><strong>ಹಿರಿಯೂರು (ಚಿತ್ರದುರ್ಗ)</strong>: ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಎಂಬುವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ.</p>.<p>ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರು ಹಂಚಿಕೊಂಡ ಫೋನ್ ನಂಬರ್ ಸಂಪರ್ಕ ಮಾಡಿದ ರೈತನಿಗೆ ಅನುಕೂಲವಾಗಿದೆ. ಲಾಭದ ನಿರೀಕ್ಷೆ ಇಲ್ಲದೆ ಈರುಳ್ಳಿ ಮಾರಾಟ ಮಾಡಿದ್ದಾರೆ.</p>.<p>'ನಮಗೆ ಅವಶ್ಯಕತೆ ಇರುವ ಬೆಳೆಯನ್ನು ರೈತರಿಂದ ಸೂಕ್ತ ಬೆಲೆಗೆ ಖರೀದಿಸಿ ಬೇಕಿರುವವರಿಗೆ ಹಂಚುತ್ತೇವೆ' ಎಂದು ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಪೋಸ್ಟ್ ಜೊತೆಗೆ ಮೊಬೈಲ್ ಫೋನ್ ನಂಬರ್ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್, ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿದ್ದರು.</p>.<p>ಈರುಳ್ಳಿಯನ್ನು ಬೆಂಗಳೂರಿಗೆ ಕೊಂಡೊಯ್ದು ಮಾರಾಟ ಮಾಡಿದ್ದಾರೆ. 60 ಚೀಲಕ್ಕೆ ಬಾಡಿಗೆ ಸೇರಿಸಿ ₹ 37 ಸಾವಿರ ಸಿಕ್ಕೆದೆ. ಸಂಕಷ್ಟದಲ್ಲಿದ್ದ ರೈತ ಸಂತಸಗೊಂಡಿದ್ದಾನೆ.</p>.<p>'ಒಂದು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೆ. 70 ಚೀಲ ಈರುಳ್ಳಿಯಲ್ಲಿ 10 ಚೀಲ ಕೊಳೆತು ಹೋಗಿತ್ತು. ಉಳಿದ ಈರುಳ್ಳಿ ಮಾರಾಟ ಮಾಡಲು ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಸಂಗ್ರಹಿಸಿ ಇಟ್ಟಿದ್ದೆವು. ಉಪೇಂದ್ರ ಅವರು ಹಾಕಿದ್ದ ಪೋಸ್ಟ್ ನೋಡಿ ಸಂಪರ್ಕಿಸಿದೆ. ಅವರೂ ಸ್ಪಂದಿಸಿದರು. ಲಾಭಕ್ಕಿಂತ ಈ ಬೆಲೆ ಸಿಕ್ಕಿರುವುದು ಖುಷಿಯಾಗಿದೆ' ಎಂದು ರೈತ ಮಹೇಶ್ ಸಂತಸ ಹಂಚಿಕೊಂಡಿದ್ದಾರೆ.</p>.<p><a href="https://www.prajavani.net/entertainment/cinema/kannada-actor-upendra-extends-help-to-film-industry-people-and-the-needy-829696.html" itemprop="url">ಚಿತ್ರರಂಗ, ಕಿರುತೆರೆ ಕಾರ್ಮಿಕರಿಗೆ ನಟ ಉಪೇಂದ್ರ ನೆರವಿನ ಮಹಾಪೂರ </a></p>.<p>'ನಮ್ಮ ಬಳಿ ಖರೀದಿಸಿದ ಈರುಳ್ಳಿಯನ್ನು ಅವರು ಕಾರ್ಮಿಕರಿಗೆ ಹಂಚುತ್ತಿರುವುದು ತುಂಬಾ ಖುಷಿಯಾಯಿತು. ಇಂತಹ ಸಂದರ್ಭದಲ್ಲಿ ಅವರು ಮಾಡುವ ಸಾಮಾಜಿಕ ಕಾರ್ಯಕ್ಕೆ ನಮಗೆ ಲಾಭ ಬೇಡ ಅನ್ನಿಸಿತು. ರೈತರಿಗೆ ಅನುಕೂಲ ಆಗಲಿ ಎಂದು ಮುಂದೆ ಬಂದಿರುವುದು ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ಬೆಲೆ ಸಿಗುತ್ತಿರಲಿಲ್ಲ' ಎಂದು ಮಹೇಶ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p><a href="https://www.prajavani.net/entertainment/cinema/upendra-seeks-crop-information-830713.html" itemprop="url">ರೈತರೇ ನಿಮ್ಮ ಬೆಳೆ, ಬೆಲೆ ತಿಳಿಸಿ: ಅಸಹಾಯಕರಿಗೆ ನೆರವಾಗಲು ಉಪೇಂದ್ರ ಯೋಜನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು (ಚಿತ್ರದುರ್ಗ)</strong>: ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಎಂಬುವರು ಬೆಳೆದಿದ್ದ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ.</p>.<p>ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರು ಹಂಚಿಕೊಂಡ ಫೋನ್ ನಂಬರ್ ಸಂಪರ್ಕ ಮಾಡಿದ ರೈತನಿಗೆ ಅನುಕೂಲವಾಗಿದೆ. ಲಾಭದ ನಿರೀಕ್ಷೆ ಇಲ್ಲದೆ ಈರುಳ್ಳಿ ಮಾರಾಟ ಮಾಡಿದ್ದಾರೆ.</p>.<p>'ನಮಗೆ ಅವಶ್ಯಕತೆ ಇರುವ ಬೆಳೆಯನ್ನು ರೈತರಿಂದ ಸೂಕ್ತ ಬೆಲೆಗೆ ಖರೀದಿಸಿ ಬೇಕಿರುವವರಿಗೆ ಹಂಚುತ್ತೇವೆ' ಎಂದು ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಪೋಸ್ಟ್ ಜೊತೆಗೆ ಮೊಬೈಲ್ ಫೋನ್ ನಂಬರ್ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್, ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿದ್ದರು.</p>.<p>ಈರುಳ್ಳಿಯನ್ನು ಬೆಂಗಳೂರಿಗೆ ಕೊಂಡೊಯ್ದು ಮಾರಾಟ ಮಾಡಿದ್ದಾರೆ. 60 ಚೀಲಕ್ಕೆ ಬಾಡಿಗೆ ಸೇರಿಸಿ ₹ 37 ಸಾವಿರ ಸಿಕ್ಕೆದೆ. ಸಂಕಷ್ಟದಲ್ಲಿದ್ದ ರೈತ ಸಂತಸಗೊಂಡಿದ್ದಾನೆ.</p>.<p>'ಒಂದು ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದೆ. 70 ಚೀಲ ಈರುಳ್ಳಿಯಲ್ಲಿ 10 ಚೀಲ ಕೊಳೆತು ಹೋಗಿತ್ತು. ಉಳಿದ ಈರುಳ್ಳಿ ಮಾರಾಟ ಮಾಡಲು ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಸಂಗ್ರಹಿಸಿ ಇಟ್ಟಿದ್ದೆವು. ಉಪೇಂದ್ರ ಅವರು ಹಾಕಿದ್ದ ಪೋಸ್ಟ್ ನೋಡಿ ಸಂಪರ್ಕಿಸಿದೆ. ಅವರೂ ಸ್ಪಂದಿಸಿದರು. ಲಾಭಕ್ಕಿಂತ ಈ ಬೆಲೆ ಸಿಕ್ಕಿರುವುದು ಖುಷಿಯಾಗಿದೆ' ಎಂದು ರೈತ ಮಹೇಶ್ ಸಂತಸ ಹಂಚಿಕೊಂಡಿದ್ದಾರೆ.</p>.<p><a href="https://www.prajavani.net/entertainment/cinema/kannada-actor-upendra-extends-help-to-film-industry-people-and-the-needy-829696.html" itemprop="url">ಚಿತ್ರರಂಗ, ಕಿರುತೆರೆ ಕಾರ್ಮಿಕರಿಗೆ ನಟ ಉಪೇಂದ್ರ ನೆರವಿನ ಮಹಾಪೂರ </a></p>.<p>'ನಮ್ಮ ಬಳಿ ಖರೀದಿಸಿದ ಈರುಳ್ಳಿಯನ್ನು ಅವರು ಕಾರ್ಮಿಕರಿಗೆ ಹಂಚುತ್ತಿರುವುದು ತುಂಬಾ ಖುಷಿಯಾಯಿತು. ಇಂತಹ ಸಂದರ್ಭದಲ್ಲಿ ಅವರು ಮಾಡುವ ಸಾಮಾಜಿಕ ಕಾರ್ಯಕ್ಕೆ ನಮಗೆ ಲಾಭ ಬೇಡ ಅನ್ನಿಸಿತು. ರೈತರಿಗೆ ಅನುಕೂಲ ಆಗಲಿ ಎಂದು ಮುಂದೆ ಬಂದಿರುವುದು ಸಂತಸ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ಬೆಲೆ ಸಿಗುತ್ತಿರಲಿಲ್ಲ' ಎಂದು ಮಹೇಶ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p><a href="https://www.prajavani.net/entertainment/cinema/upendra-seeks-crop-information-830713.html" itemprop="url">ರೈತರೇ ನಿಮ್ಮ ಬೆಳೆ, ಬೆಲೆ ತಿಳಿಸಿ: ಅಸಹಾಯಕರಿಗೆ ನೆರವಾಗಲು ಉಪೇಂದ್ರ ಯೋಜನೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>