<p><strong>ಧರ್ಮಪುರ:</strong> ‘ಕನ್ನಡ ಅನ್ನ ಕೊಡುವ, ಬದುಕು ನೀಡುವ ಭಾಷೆಯಾಗಲು ಪ್ರಭುತ್ವದ ಪಾತ್ರ ಅತ್ಯಂತ ಮಹತ್ವವಾದದ್ದು’ ಎಂದು ಸಾಹಿತಿ ಜಡೇಕುಂಟೆ ಮಂಜುನಾಥ್ ಅಭಿಪ್ರಾಯಪಟ್ಟರು. </p>.<p>ಸಮೀಪದ ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>‘ಗ್ರಾಮೀಣ ಭಾಗದ ಜನ ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಹೋಗಲಾರಂಭಿಸಿದ ಕಾಲಘಟ್ಟದಲ್ಲಿ ಇಂಗ್ಲಿಷ್ ಕಲಿತವರಿಗೆ ಹೆಚ್ಚು ಉದ್ಯೋಗ ಸಿಗಲಾರಂಭಿಸಿದಾಗ ಆ ಭಾಷೆಯ ಮೇಲಿನ ವ್ಯಾಮೋಹ ಜಾಸ್ತಿಯಾಯಿತು. ಇದರಿಂದ ಕನ್ನಡ ಅಭಿಮಾನದ ಪ್ರಶ್ನೆ ಜಾಗೃತವಾಯಿತು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅನ್ಯ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ, ಮಾತೃ ಭಾಷೆ ಕಡೆಗಣಿಸಬಾರದು’ ಎಂದರು. </p>.<p>‘ಬೇರೆ ಯಾವುದೇ ರಾಜ್ಯಗಳಿಗೆ ನಾವು ಹೋದರೆ ಅವರು ಅಲ್ಲಿಯ ಭಾಷೆಯನ್ನೇ ಮಾತನಾಡುತ್ತಾರೆ. ಆದರೆ, ನಾವು ಕನ್ನಡಿಗರು ಕನ್ನಡವನ್ನು ಮರೆತಿದ್ದೇವೆ. ಇಂದಿನ ಪೀಳಿಗೆ ಇದನ್ನು ಗ್ರಹಿಸಬೇಕು’ ಎಂದು ಪ್ರೌಢಶಾಲೆ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ಹೇಳಿದರು. </p>.<p>ಉಪ ಪ್ರಾಂಶುಪಾಲ ಎಂ.ಜಿ.ರುದ್ರಮುನಿ, ಎಸ್ಡಿಎಂಸಿ ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿದರು. </p>.<p>ಸುಭಾನ್ ಸಾಬ್, ವಿಜಯಕುಮಾರ್, ತಿಪ್ಪೇಸ್ವಾಮಿ, ಪುಷ್ಪಾವತಿ, ಬಿ.ಬಿ.ಜಾನ್, ಭಾಗ್ಯಮ್ಮ, ರಮೇಶ್, ಸಪ್ತಗಿರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ‘ಕನ್ನಡ ಅನ್ನ ಕೊಡುವ, ಬದುಕು ನೀಡುವ ಭಾಷೆಯಾಗಲು ಪ್ರಭುತ್ವದ ಪಾತ್ರ ಅತ್ಯಂತ ಮಹತ್ವವಾದದ್ದು’ ಎಂದು ಸಾಹಿತಿ ಜಡೇಕುಂಟೆ ಮಂಜುನಾಥ್ ಅಭಿಪ್ರಾಯಪಟ್ಟರು. </p>.<p>ಸಮೀಪದ ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>‘ಗ್ರಾಮೀಣ ಭಾಗದ ಜನ ಉದ್ಯೋಗ ಅರಸಿ ಬೆಂಗಳೂರಿಗೆ ವಲಸೆ ಹೋಗಲಾರಂಭಿಸಿದ ಕಾಲಘಟ್ಟದಲ್ಲಿ ಇಂಗ್ಲಿಷ್ ಕಲಿತವರಿಗೆ ಹೆಚ್ಚು ಉದ್ಯೋಗ ಸಿಗಲಾರಂಭಿಸಿದಾಗ ಆ ಭಾಷೆಯ ಮೇಲಿನ ವ್ಯಾಮೋಹ ಜಾಸ್ತಿಯಾಯಿತು. ಇದರಿಂದ ಕನ್ನಡ ಅಭಿಮಾನದ ಪ್ರಶ್ನೆ ಜಾಗೃತವಾಯಿತು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅನ್ಯ ಭಾಷೆಗಳನ್ನು ಕಲಿಯುವುದು ತಪ್ಪಲ್ಲ. ಆದರೆ, ಮಾತೃ ಭಾಷೆ ಕಡೆಗಣಿಸಬಾರದು’ ಎಂದರು. </p>.<p>‘ಬೇರೆ ಯಾವುದೇ ರಾಜ್ಯಗಳಿಗೆ ನಾವು ಹೋದರೆ ಅವರು ಅಲ್ಲಿಯ ಭಾಷೆಯನ್ನೇ ಮಾತನಾಡುತ್ತಾರೆ. ಆದರೆ, ನಾವು ಕನ್ನಡಿಗರು ಕನ್ನಡವನ್ನು ಮರೆತಿದ್ದೇವೆ. ಇಂದಿನ ಪೀಳಿಗೆ ಇದನ್ನು ಗ್ರಹಿಸಬೇಕು’ ಎಂದು ಪ್ರೌಢಶಾಲೆ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ್ ಹೇಳಿದರು. </p>.<p>ಉಪ ಪ್ರಾಂಶುಪಾಲ ಎಂ.ಜಿ.ರುದ್ರಮುನಿ, ಎಸ್ಡಿಎಂಸಿ ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿದರು. </p>.<p>ಸುಭಾನ್ ಸಾಬ್, ವಿಜಯಕುಮಾರ್, ತಿಪ್ಪೇಸ್ವಾಮಿ, ಪುಷ್ಪಾವತಿ, ಬಿ.ಬಿ.ಜಾನ್, ಭಾಗ್ಯಮ್ಮ, ರಮೇಶ್, ಸಪ್ತಗಿರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>