<p><strong>ಹೊಸದುರ್ಗ:</strong> ತಾಲ್ಲೂಕಿನ ಹುಣವಿನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪಗೆರೆಯಲ್ಲಿ ಚರಂಡಿಗಳು ಅವ್ಯವಸ್ಥೆಯ ಆಗರವಾಗಿವೆ. ಅವುಗಳಲ್ಲಿನ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಅನಾರೋಗ್ಯದ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.</p>.<p>‘ಚರಂಡಿಗಳು ಸ್ವಚ್ಛತೆ ಕಾಣದೆ ವರ್ಷಗಳೇ ಕಳೆದಿದ್ದು, ಅಲ್ಲಲ್ಲಿ ಬ್ಲಾಕ್ ಆಗಿವೆ. ಕೊಳಚೆ ನೀರು ನಿಂತಲ್ಲೇ ನಿಂತಿದ್ದು, ಸೊಳ್ಳೆ ಹಾಗೂ ನೊಣಗಳ ಆವಾಸ ತಾಣವಾಗಿದೆ. ಚರಂಡಿ ಪಕ್ಕದಲ್ಲೇ ಮನೆಗಳಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಳೆ ಬಂದರೇ ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಳ್ಳುತ್ತದೆ. ದುರ್ವಾಸನೆಯಿಂದಾಗಿ ವಾಸ ಮಾಡಲೂ ಕಷ್ಟವಾಗಿದೆ. ಆಗಾಗ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>‘ಎ.ಕೆ. ಕಾಲೊನಿಯ ಜನರ ಕಷ್ಟ ಕೇಳುವವರಿಲ್ಲ. ಮನೆ ಪಕ್ಕದಲ್ಲೇ ಚರಂಡಿ ನೀರು ಹರಿದು ಹೋಗುತ್ತಿದೆ. ಚರಂಡಿಗಳು ಬ್ಲಾಕ್ ಆಗಿದ್ದು, ಮಲೇರಿಯಾದಂತಹ ರೋಗಗಳ ಭೀತಿ ಎದುರಾಗಿದೆ. ಮಿನಿ ಟ್ಯಾಂಕರ್ ಸ್ವಚ್ಛತೆ ಕಾಣದೆ ಪಾಚಿ ಕಟ್ಟಿದೆ. ಈ ಎಲ್ಲಾ ಸಮಸ್ಯೆಗಳನ್ನೂ ಶೀಘ್ರದಲ್ಲೇ ಪರಿಹರಿಸಿ ಎಂದು ಹುಣವಿನಡು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿ ನೀಡಿ ವಾರ ಕಳೆದರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ’ ಎಂದು ಕಪ್ಪಗೆರೆ ಗ್ರಾಮದ ಕೆಂಚಪ್ಪ ನಾಯ್ಕ ಬೇಸರ ವ್ಯಕ್ತಪಡಿಸಿದರು.</p>.<p>ಇನ್ನೆರಡು ದಿನಗಳಲ್ಲಿ ಚರಂಡಿ ಹಾಗೂ ಮಿನಿ ಟ್ಯಾಂಕರ್ ಸ್ವಚ್ಛಗೊಳಿಸಲಾಗುವುದು ಎಂದು ಹುಣವಿನಡು ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಹುಣವಿನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪಗೆರೆಯಲ್ಲಿ ಚರಂಡಿಗಳು ಅವ್ಯವಸ್ಥೆಯ ಆಗರವಾಗಿವೆ. ಅವುಗಳಲ್ಲಿನ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಅನಾರೋಗ್ಯದ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.</p>.<p>‘ಚರಂಡಿಗಳು ಸ್ವಚ್ಛತೆ ಕಾಣದೆ ವರ್ಷಗಳೇ ಕಳೆದಿದ್ದು, ಅಲ್ಲಲ್ಲಿ ಬ್ಲಾಕ್ ಆಗಿವೆ. ಕೊಳಚೆ ನೀರು ನಿಂತಲ್ಲೇ ನಿಂತಿದ್ದು, ಸೊಳ್ಳೆ ಹಾಗೂ ನೊಣಗಳ ಆವಾಸ ತಾಣವಾಗಿದೆ. ಚರಂಡಿ ಪಕ್ಕದಲ್ಲೇ ಮನೆಗಳಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಳೆ ಬಂದರೇ ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಳ್ಳುತ್ತದೆ. ದುರ್ವಾಸನೆಯಿಂದಾಗಿ ವಾಸ ಮಾಡಲೂ ಕಷ್ಟವಾಗಿದೆ. ಆಗಾಗ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.</p>.<p>‘ಎ.ಕೆ. ಕಾಲೊನಿಯ ಜನರ ಕಷ್ಟ ಕೇಳುವವರಿಲ್ಲ. ಮನೆ ಪಕ್ಕದಲ್ಲೇ ಚರಂಡಿ ನೀರು ಹರಿದು ಹೋಗುತ್ತಿದೆ. ಚರಂಡಿಗಳು ಬ್ಲಾಕ್ ಆಗಿದ್ದು, ಮಲೇರಿಯಾದಂತಹ ರೋಗಗಳ ಭೀತಿ ಎದುರಾಗಿದೆ. ಮಿನಿ ಟ್ಯಾಂಕರ್ ಸ್ವಚ್ಛತೆ ಕಾಣದೆ ಪಾಚಿ ಕಟ್ಟಿದೆ. ಈ ಎಲ್ಲಾ ಸಮಸ್ಯೆಗಳನ್ನೂ ಶೀಘ್ರದಲ್ಲೇ ಪರಿಹರಿಸಿ ಎಂದು ಹುಣವಿನಡು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿ ನೀಡಿ ವಾರ ಕಳೆದರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ’ ಎಂದು ಕಪ್ಪಗೆರೆ ಗ್ರಾಮದ ಕೆಂಚಪ್ಪ ನಾಯ್ಕ ಬೇಸರ ವ್ಯಕ್ತಪಡಿಸಿದರು.</p>.<p>ಇನ್ನೆರಡು ದಿನಗಳಲ್ಲಿ ಚರಂಡಿ ಹಾಗೂ ಮಿನಿ ಟ್ಯಾಂಕರ್ ಸ್ವಚ್ಛಗೊಳಿಸಲಾಗುವುದು ಎಂದು ಹುಣವಿನಡು ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>