<p><strong>ಹೊಸದುರ್ಗ: </strong>ತಾಲ್ಲೂಕಿನ ಮಾಡದಕೆರೆ ಗುಂಡಿಹಳ್ಳಕ್ಕೆ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಸಂಚಾರಕ್ಕೆ ಮುಕ್ತವಾಗಿದೆ.</p>.<p>ಈ ಭಾಗದಲ್ಲಿ ಬಿರುಸಿನ ಮಳೆ ಬಂದಾಗ ಈ ಹಳ್ಳದಲ್ಲಿ ಸಾಕಷ್ಟು ನೀರು ಹರಿಯುತ್ತಿರುವಾಗ ಈ ಮಾರ್ಗದಲ್ಲಿ ಬರುವ ಮಾಡದಕೆರೆ, ಕೆಂಕೆರೆ, ಶೀರನಕಟ್ಟೆ ಗ್ರಾಮದ ರೈತರು ಜಮೀನುಗಳಿಗೆ ಹೋಗಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ರೈತರು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರಿಗೆ ಮನವಿ ಸಲ್ಲಿಸಿದ್ದರು.</p>.<p>ಶಾಸಕರು₹1.50 ಕೋಟಿ ವೆಚ್ಚದಲ್ಲಿ ಗುಂಡಿಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಮಗಾರಿ ಪೂರ್ಣಗೊಂಡಿದ್ದು, ಈ ಭಾಗದ ರೈತರು ಜಮೀನಿಗೆ ಹಾಗೂ ಲಕ್ಕಿಗಣಿ ಗುಡ್ಡಕ್ಕೆ ಹೋಗಲು ಸಹಕಾರಿಯಾಗಿದೆ.</p>.<p>ಗುಂಡಿಹಳ್ಳದ ಬ್ಯಾರೇಜ್ನಲ್ಲಿ 8 ಅಡಿ ಆಳದವರೆಗೂ ನೀರು ನಿಲ್ಲುತ್ತಿರುವುದರಿಂದ ಈ ಭಾಗದಲ್ಲಿ ಅಂತರ್ಜಲ ವೃದ್ಧಿಯಾಗಿದೆ. ಇದರಿಂದ ಮಾಡದಕೆರೆ, ಕೆಂಕೆರೆ, ಮಲ್ಲಾಪುರ, ಗಡಿಯಪ್ಪನಹಟ್ಟಿ, ರಾಮಜ್ಜನಹಳ್ಳಿ, ಪೂಜಾರಹಟ್ಟಿ, ಬಂಟನಗವಿ ಗ್ರಾಮಗಳ ಹಲವು ರೈತರ ಕೊಳವೆಬಾವಿಗಳಿಗೆ ನೆರವಾಗಿದೆ. ಈ ಭಾಗದ ತೆಂಗು, ಅಡಿಕೆ ಹಾಗೂ ಬಾಳೆ ತೋಟಗಳಿಗೆ ಜೀವಕಳೆ ಬಂದಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>‘ತಾಲ್ಲೂಕಿನಲ್ಲಿ ಹಲವು ಚೆಕ್ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಹಾಳಾಗಿದ್ದ ಕೆಲವು ಕೆರೆಕಟ್ಟೆ, ಚೆಕ್ಡ್ಯಾಂ, ಬ್ಯಾರೇಜ್ಗಳನ್ನು ದುರಸ್ತಿ ಮಾಡಿಸಲಾಗಿದೆ. ತಾಲ್ಲೂಕಿನ ಶ್ರೀರಾಂಪುರ, ಮತ್ತೋಡು, ಮಾಡದಕೆರೆ ಹೋಬಳಿಯ ಹಲವು ಗ್ರಾಮಗಳ ಜನರ ಅನುಕೂಲಕ್ಕಾಗಿ₹ 2.50 ಕೋಟಿ ವೆಚ್ಚದಲ್ಲಿಸಿರಿಗೊಂಡನಹಳ್ಳಿ ಸಮೀಪ ನಿರ್ಮಿಸುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲಾಗುವುದು’ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ: </strong>ತಾಲ್ಲೂಕಿನ ಮಾಡದಕೆರೆ ಗುಂಡಿಹಳ್ಳಕ್ಕೆ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಸಂಚಾರಕ್ಕೆ ಮುಕ್ತವಾಗಿದೆ.</p>.<p>ಈ ಭಾಗದಲ್ಲಿ ಬಿರುಸಿನ ಮಳೆ ಬಂದಾಗ ಈ ಹಳ್ಳದಲ್ಲಿ ಸಾಕಷ್ಟು ನೀರು ಹರಿಯುತ್ತಿರುವಾಗ ಈ ಮಾರ್ಗದಲ್ಲಿ ಬರುವ ಮಾಡದಕೆರೆ, ಕೆಂಕೆರೆ, ಶೀರನಕಟ್ಟೆ ಗ್ರಾಮದ ರೈತರು ಜಮೀನುಗಳಿಗೆ ಹೋಗಲು ತೊಂದರೆಯಾಗುತ್ತಿತ್ತು. ಈ ಬಗ್ಗೆ ರೈತರು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಅವರಿಗೆ ಮನವಿ ಸಲ್ಲಿಸಿದ್ದರು.</p>.<p>ಶಾಸಕರು₹1.50 ಕೋಟಿ ವೆಚ್ಚದಲ್ಲಿ ಗುಂಡಿಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ್ದರು. ಕಾಮಗಾರಿ ಪೂರ್ಣಗೊಂಡಿದ್ದು, ಈ ಭಾಗದ ರೈತರು ಜಮೀನಿಗೆ ಹಾಗೂ ಲಕ್ಕಿಗಣಿ ಗುಡ್ಡಕ್ಕೆ ಹೋಗಲು ಸಹಕಾರಿಯಾಗಿದೆ.</p>.<p>ಗುಂಡಿಹಳ್ಳದ ಬ್ಯಾರೇಜ್ನಲ್ಲಿ 8 ಅಡಿ ಆಳದವರೆಗೂ ನೀರು ನಿಲ್ಲುತ್ತಿರುವುದರಿಂದ ಈ ಭಾಗದಲ್ಲಿ ಅಂತರ್ಜಲ ವೃದ್ಧಿಯಾಗಿದೆ. ಇದರಿಂದ ಮಾಡದಕೆರೆ, ಕೆಂಕೆರೆ, ಮಲ್ಲಾಪುರ, ಗಡಿಯಪ್ಪನಹಟ್ಟಿ, ರಾಮಜ್ಜನಹಳ್ಳಿ, ಪೂಜಾರಹಟ್ಟಿ, ಬಂಟನಗವಿ ಗ್ರಾಮಗಳ ಹಲವು ರೈತರ ಕೊಳವೆಬಾವಿಗಳಿಗೆ ನೆರವಾಗಿದೆ. ಈ ಭಾಗದ ತೆಂಗು, ಅಡಿಕೆ ಹಾಗೂ ಬಾಳೆ ತೋಟಗಳಿಗೆ ಜೀವಕಳೆ ಬಂದಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.</p>.<p>‘ತಾಲ್ಲೂಕಿನಲ್ಲಿ ಹಲವು ಚೆಕ್ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಹಾಳಾಗಿದ್ದ ಕೆಲವು ಕೆರೆಕಟ್ಟೆ, ಚೆಕ್ಡ್ಯಾಂ, ಬ್ಯಾರೇಜ್ಗಳನ್ನು ದುರಸ್ತಿ ಮಾಡಿಸಲಾಗಿದೆ. ತಾಲ್ಲೂಕಿನ ಶ್ರೀರಾಂಪುರ, ಮತ್ತೋಡು, ಮಾಡದಕೆರೆ ಹೋಬಳಿಯ ಹಲವು ಗ್ರಾಮಗಳ ಜನರ ಅನುಕೂಲಕ್ಕಾಗಿ₹ 2.50 ಕೋಟಿ ವೆಚ್ಚದಲ್ಲಿಸಿರಿಗೊಂಡನಹಳ್ಳಿ ಸಮೀಪ ನಿರ್ಮಿಸುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಲಾಗುವುದು’ ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>