ಚಿತ್ರದುರ್ಗ: ತಾಲ್ಲೂಕಿನ ಸಿರಿಗೆರೆ ಗ್ರಾಮದಲ್ಲಿ ಸಿಡಿ ಉತ್ಸವದ ಸಿಡಿಕಂಬ ಮುರಿದುಬಿದ್ದು, ಸಿಡಿ ಆಡುತ್ತಿದ್ದ ಶಿವಕುಮಾರ್ ಎಂಬುವರು ಗಾಯಗೊಂಡಿದ್ದಾರೆ.
ಕರಿಯಮ್ಮದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸಿಡಿ ಆಡಲಾಗುತ್ತದೆ. ಗ್ರಾಮದ ದೇಗುಲದ ಸಮೀಪ ಶುಕ್ರವಾರ ಸಂಜೆ ಸಿಡಿ ಉತ್ಸವಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಸಿಡಿಕಂಬ ಏರಿದ ಶಿವಕುಮಾರ್ ಸುತ್ತ ತಿರುಗುತ್ತಿದ್ದರು. ಈ ವೇಳೆ ಅವಘಡ ನಡೆದಿದೆ.
ಸಿಡಿಕಂಬದಿಂದ ಬಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಕಂಬ ಮುರಿದು ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.