<p><strong>ಚಿತ್ರದುರ್ಗ: </strong>ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಅವರಿಗೆ ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಡವಾಗಿ ಜ್ಞಾನೋದಯ ಆಗಿದೆ. ಈವರೆಗೆ ಈ ವಿಚಾರ ಮುಚ್ಚಿಟ್ಟಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.</p>.<p>ಮುರುಘಾ ಮಠದಲ್ಲಿ ಬುಧವಾರ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>'ಸತ್ಯಾಸತ್ಯತೆಯನ್ನು ಕಾಂಗ್ರೆಸ್ ನಾಯಕರು ತಡವಾಗಿ ಬಾಯಿ ಬಿಟ್ಟಿದ್ದಾರೆ. ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಒಳಜಗಳ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಂಡರೆ ಬೇರೆಯವರಿಗೆ ಆಗಲ್ಲ. ಸಿದ್ದರಾಮಯ್ಯ ಅವರೊಂದಿಗಿನ ಮುನಿಸು ಅಂತ್ಯ ಕಂಡಿಲ್ಲ' ಎಂದು ಹೇಳಿದರು.</p>.<p>'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಂಘಪರಿವಾರದ ಕಾರ್ಯಕರ್ತರ ಕೊಲೆ ನಡೆಯಿತು. ಹಿಂದೂಗಳನ್ನು ನಿಂದಿಸಿದರೆ ಮುಸ್ಲಿಮರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ ಎಂಬ ಭ್ರಮೆ ಸಿದ್ಧರಾಮಯ್ಯ ಅವರಲ್ಲಿದೆ. ಈ ಭ್ರಮೆಯಿಂದ ಅವರು ಹೊರ ಬರಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಅವರಿಗೆ ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಡವಾಗಿ ಜ್ಞಾನೋದಯ ಆಗಿದೆ. ಈವರೆಗೆ ಈ ವಿಚಾರ ಮುಚ್ಚಿಟ್ಟಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.</p>.<p>ಮುರುಘಾ ಮಠದಲ್ಲಿ ಬುಧವಾರ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>'ಸತ್ಯಾಸತ್ಯತೆಯನ್ನು ಕಾಂಗ್ರೆಸ್ ನಾಯಕರು ತಡವಾಗಿ ಬಾಯಿ ಬಿಟ್ಟಿದ್ದಾರೆ. ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಒಳಜಗಳ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಂಡರೆ ಬೇರೆಯವರಿಗೆ ಆಗಲ್ಲ. ಸಿದ್ದರಾಮಯ್ಯ ಅವರೊಂದಿಗಿನ ಮುನಿಸು ಅಂತ್ಯ ಕಂಡಿಲ್ಲ' ಎಂದು ಹೇಳಿದರು.</p>.<p>'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಂಘಪರಿವಾರದ ಕಾರ್ಯಕರ್ತರ ಕೊಲೆ ನಡೆಯಿತು. ಹಿಂದೂಗಳನ್ನು ನಿಂದಿಸಿದರೆ ಮುಸ್ಲಿಮರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ ಎಂಬ ಭ್ರಮೆ ಸಿದ್ಧರಾಮಯ್ಯ ಅವರಲ್ಲಿದೆ. ಈ ಭ್ರಮೆಯಿಂದ ಅವರು ಹೊರ ಬರಬೇಕು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>