ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ಮತ್ತು ನೆಹರೂ ಹಿರಿಯ ನಾಯಕರು. ಅವರನ್ನು ಅವಹೇಳನ ಮಾಡುವುದು ತಪ್ಪು. ರಾಜಕಾರಣಕ್ಕೆ ದೊಡ್ಡ ನಾಯಕರ ಹೆಸರು ಎಳೆದು ತರುವುದು ಸರಿಯಲ್ಲ. ಇಬ್ಬರ ಹೆಸರಿನಲ್ಲಿ ನಡೆಯುತ್ತಿರುವ ವಿವಾದಕ್ಕೆ ತೆರೆ ಎಳೆಯಬೇಕಿದೆ' ಎಂದು ಹೇಳಿದರು.