<p><strong>ಹೊಸದುರ್ಗ</strong>: ತಾಲ್ಲೂಕಿನ ಮತ್ತೋಡು ಹೋಬಳಿಯ ಗುಡ್ಡದನೇರಲಕೆರೆ ಗ್ರಾಮದಲ್ಲಿ ಹಾಗೂ ಬೆಟ್ಟದಲ್ಲಿ ನೆಲೆಸಿರುವ ದಶರಥರಾಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಕಾರ್ತಿಕ ಮಹೋತ್ಸವ ಸೋಮವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>.<p>ಸೋಮವಾರ ದಶರಥರಾಮೇಶ್ವರ ಸ್ವಾಮಿಗೆ ಬೆಳಿಗ್ಗೆ 5 ಗಂಟೆಗೆ ರುದ್ರಾಭಿಷೇಕ, 9ಕ್ಕೆ ಅಷ್ಟೋತ್ತರ ಪೂಜೆ, ಮಧ್ಯಾಹ್ನ 3 ಗಂಟೆಗೆ ಪಂಚಾಮೃತ ಅಭಿಷೇಕ, ಸಂಜೆ 5 ಗಂಟೆಗೆ ಬಿಲ್ವಾರ್ಚನೆ ನಡೆಯಿತು. ನಂತರ 7.30ಕ್ಕೆ ಸಾಷ್ಟಾಂಗ ಪೂಜೆ ಹಾಗೂ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>.<p>ಬಾಳೆದಿಂಡಿನ ಸಹಾಯದಿಂದ ಮಂಟಪದ ರೀತಿಯಲ್ಲಿ ಕದಳಿ ನಿರ್ಮಿಸಿ, ಅದಕ್ಕೆ ವಿಶೇಷ ಅಲಂಕಾರ ಮತ್ತು ಪೂಜೆ ನೇರವೇರಿಸಿಲಾಯಿತು. ಉತ್ಸವ ಸ್ವಾಮಿ ಸನ್ನಿಧಾನದಲ್ಲಿ ದೀಪ ಬೆಳಗಿಸಲಾಯಿತು.</p>.<p>ದಾವಣಗೆರೆ, ಬೆಂಗಳೂರು, ತುಮಕೂರು ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ಧದರು. ಒಂದು ಲಕ್ಷದ ಒಂದು ದೀಪ ಬೆಳಗಿಸಲಾಯಿತು. ಬೆಟ್ಟದಲ್ಲಿಯೂ ಸಹ ದೀಪ ಹಚ್ಚಿ ಬೆಳಗಿಸಲಾಯಿತು. ದೀಪೋತ್ಸವದ ನಂತರ ಅನ್ನಸಂತರ್ಪಣೆ ನಡೆಯಿತು.</p>.<p>ಭಕ್ತರು ದೀಪ ಬೆಳಗಿಸುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಪ್ರಾರ್ಥಿಸಿದರು. ಸಾವಿರಾರು ಭಕ್ತರು ಆಗಮಿಸಿ, ಸ್ವಾಮಿಯ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ತಾಲ್ಲೂಕಿನ ಮತ್ತೋಡು ಹೋಬಳಿಯ ಗುಡ್ಡದನೇರಲಕೆರೆ ಗ್ರಾಮದಲ್ಲಿ ಹಾಗೂ ಬೆಟ್ಟದಲ್ಲಿ ನೆಲೆಸಿರುವ ದಶರಥರಾಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಕಾರ್ತಿಕ ಮಹೋತ್ಸವ ಸೋಮವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>.<p>ಸೋಮವಾರ ದಶರಥರಾಮೇಶ್ವರ ಸ್ವಾಮಿಗೆ ಬೆಳಿಗ್ಗೆ 5 ಗಂಟೆಗೆ ರುದ್ರಾಭಿಷೇಕ, 9ಕ್ಕೆ ಅಷ್ಟೋತ್ತರ ಪೂಜೆ, ಮಧ್ಯಾಹ್ನ 3 ಗಂಟೆಗೆ ಪಂಚಾಮೃತ ಅಭಿಷೇಕ, ಸಂಜೆ 5 ಗಂಟೆಗೆ ಬಿಲ್ವಾರ್ಚನೆ ನಡೆಯಿತು. ನಂತರ 7.30ಕ್ಕೆ ಸಾಷ್ಟಾಂಗ ಪೂಜೆ ಹಾಗೂ ದೀಪೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು.</p>.<p>ಬಾಳೆದಿಂಡಿನ ಸಹಾಯದಿಂದ ಮಂಟಪದ ರೀತಿಯಲ್ಲಿ ಕದಳಿ ನಿರ್ಮಿಸಿ, ಅದಕ್ಕೆ ವಿಶೇಷ ಅಲಂಕಾರ ಮತ್ತು ಪೂಜೆ ನೇರವೇರಿಸಿಲಾಯಿತು. ಉತ್ಸವ ಸ್ವಾಮಿ ಸನ್ನಿಧಾನದಲ್ಲಿ ದೀಪ ಬೆಳಗಿಸಲಾಯಿತು.</p>.<p>ದಾವಣಗೆರೆ, ಬೆಂಗಳೂರು, ತುಮಕೂರು ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ಧದರು. ಒಂದು ಲಕ್ಷದ ಒಂದು ದೀಪ ಬೆಳಗಿಸಲಾಯಿತು. ಬೆಟ್ಟದಲ್ಲಿಯೂ ಸಹ ದೀಪ ಹಚ್ಚಿ ಬೆಳಗಿಸಲಾಯಿತು. ದೀಪೋತ್ಸವದ ನಂತರ ಅನ್ನಸಂತರ್ಪಣೆ ನಡೆಯಿತು.</p>.<p>ಭಕ್ತರು ದೀಪ ಬೆಳಗಿಸುವ ಮೂಲಕ ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಪ್ರಾರ್ಥಿಸಿದರು. ಸಾವಿರಾರು ಭಕ್ತರು ಆಗಮಿಸಿ, ಸ್ವಾಮಿಯ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>