ಮಹಿಳೆಯರ ಪರ ಎಂದು ಬಿಂಬಿಸಿಕೊಳ್ಳುವ ಬಂಡವಾಳಶಾಹಿ ರಾಜಕೀಯ ಪಕ್ಷಗಳ ಮುಖಂಡರ ನೈಜ ಬಣ್ಣವನ್ನು ಇದು ಬಯಲು ಮಾಡಿದಂತಿದೆ. ಸಮಾಜದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಹೆಚ್ಚುತ್ತಿರುವ ದುಃಸ್ಥಿತಿಯಲ್ಲಿ ಸಮಾಜವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ಜನಪ್ರತಿನಿಧಿಗಳ ಬೇಜವಾಬ್ದಾರಿ ಮಾತುಗಳು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ ಎಂದು ಎಸ್ಯುಸಿಐ (ಸಿ) ರವಿಕುಮಾರ್ ತಿಳಿಸಿದ್ದಾರೆ.