<p><strong>ಚಿತ್ರದುರ್ಗ:</strong> ‘ಪ್ರತಿ ವರ್ಷದಂತೆ ಈ ಬಾರಿಯೂ ಸಹ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ, ಕೈಗಾರಿಕಾ ಮೇಳ ಮತ್ತು ಪ್ರದರ್ಶನವನ್ನು ಯಶಸ್ವಿಗೊಳಿಸಬೇಕು. ರೈತರಿಗೆ, ಕೃಷಿ ಆಸಕ್ತರಿಗೆ ಮಾಹಿತಿ ನೀಡುವ ಕಾರ್ಯ ಅಚ್ಚುಕಟ್ಟಾಗಿ ಆಗಬೇಕು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಸೋಮವಾರ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವದ ಕೃಷಿ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಮಠದ ವಿಶಾಲ ಆವರಣದಲ್ಲಿ ಮೇಳ ಆಯೋಜಿಸಲಾಗುತ್ತದೆ. ಪ್ರಗತಿಪರ ಕೃಷಿಕರು, ಯುವ ಕೃಷಿಕರನ್ನು ಆಹ್ವಾನಿಸಲಾಗುತ್ತದೆ’ ಎಂದರು.</p>.<p>‘ಈ ಮೇಳದಲ್ಲಿ ಕೃಷಿಕರು, ತೋಟಗಾರಿಕೆ, ಸಾಕುಪ್ರಾಣಿಗಳ ನಿರ್ವಹಣೆ, ಗೃಹ ಕೈಗಾರಿಕೆ, ಸಣ್ಣ ಮತ್ತು ಬೃಹತ್ ಕೈಗಾರಿಕೆ ಸೇರಿದಂತೆ ರೈತರಿಗೆ ವರದಾನವಾಗುವಂತಹ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಸೌಕರ್ಯ, ಸಂಪನ್ಮೂಲ, ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಪ್ರದರ್ಶನ, ಮತ್ತು ಮಾರಾಟವನ್ನು ಅತ್ಯಂತ ಅಚ್ಚುಕಟ್ಟಾಗಿ ಎಲ್ಲಿಯೂ ಲೋಪವಾಗದಂತೆ ನಿರ್ವಹಿಸಿ ಯಶಸ್ವಿಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಆಕಾಶ್ ಸೂಚಿಸಿದರು.</p>.<p>ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎಸ್.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ , ಕೃಷಿ ಮೇಳದ ಸಂಘಟಕ ಪಿ.ವೀರೇಂದ್ರ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಪ್ರತಿ ವರ್ಷದಂತೆ ಈ ಬಾರಿಯೂ ಸಹ ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ, ಕೈಗಾರಿಕಾ ಮೇಳ ಮತ್ತು ಪ್ರದರ್ಶನವನ್ನು ಯಶಸ್ವಿಗೊಳಿಸಬೇಕು. ರೈತರಿಗೆ, ಕೃಷಿ ಆಸಕ್ತರಿಗೆ ಮಾಹಿತಿ ನೀಡುವ ಕಾರ್ಯ ಅಚ್ಚುಕಟ್ಟಾಗಿ ಆಗಬೇಕು’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ನಗರದ ಮುರುಘಾ ಮಠದಲ್ಲಿ ಸೋಮವಾರ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವದ ಕೃಷಿ ಮೇಳದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಮಠದ ವಿಶಾಲ ಆವರಣದಲ್ಲಿ ಮೇಳ ಆಯೋಜಿಸಲಾಗುತ್ತದೆ. ಪ್ರಗತಿಪರ ಕೃಷಿಕರು, ಯುವ ಕೃಷಿಕರನ್ನು ಆಹ್ವಾನಿಸಲಾಗುತ್ತದೆ’ ಎಂದರು.</p>.<p>‘ಈ ಮೇಳದಲ್ಲಿ ಕೃಷಿಕರು, ತೋಟಗಾರಿಕೆ, ಸಾಕುಪ್ರಾಣಿಗಳ ನಿರ್ವಹಣೆ, ಗೃಹ ಕೈಗಾರಿಕೆ, ಸಣ್ಣ ಮತ್ತು ಬೃಹತ್ ಕೈಗಾರಿಕೆ ಸೇರಿದಂತೆ ರೈತರಿಗೆ ವರದಾನವಾಗುವಂತಹ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಸೌಕರ್ಯ, ಸಂಪನ್ಮೂಲ, ಒದಗಿಸಲಾಗುತ್ತದೆ’ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಪ್ರದರ್ಶನ, ಮತ್ತು ಮಾರಾಟವನ್ನು ಅತ್ಯಂತ ಅಚ್ಚುಕಟ್ಟಾಗಿ ಎಲ್ಲಿಯೂ ಲೋಪವಾಗದಂತೆ ನಿರ್ವಹಿಸಿ ಯಶಸ್ವಿಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಆಕಾಶ್ ಸೂಚಿಸಿದರು.</p>.<p>ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಎಸ್.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿ , ಕೃಷಿ ಮೇಳದ ಸಂಘಟಕ ಪಿ.ವೀರೇಂದ್ರ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>