ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರತಾಪಗೌಡ, ಮುನಿರತ್ನ, ರೋಷನ್ ಬೇಗ್ ಬಿಜೆಪಿಯವರಾಗಿ ಟಿಕೆಟ್ ಕೇಳುವುದು ತಪ್ಪಲ್ಲ. ಆದರೆ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಂದಿದ್ದೇನೆ ಎಂದು ಒತ್ತಡ ಹೇರುವುದು ತಪ್ಪು. ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಜಾತಿ ನೋಡಿ ಟಿಕೆಟ್ ಕೊಡುವ ಪದ್ಧತಿ ಬಿಜೆಪಿಯಲ್ಲಿ ಇಲ್ಲ’ ಎಂದರು.