ನಗರದಲ್ಲಿ ಈಗಾಗಲೇ ನಗರ ಸಾರಿಗೆ ಬಸ್ಗಳು ಸಂಚಾರ ನಡೆಸುತ್ತಿವೆ. ಆದರೆ, ನಗರ ಸಾರಿಗೆ ಬಸ್ ನಿಲ್ದಾಣಗಳೇ ಇಲ್ಲದೇ ಪ್ರಯಾಣಿಕರು ಮತ್ತು ಚಾಲಕ ನಿರ್ವಾಹಕರಿಗೆ ನಿತ್ಯ ತೊಂದರೆಯಾಗುತ್ತಿದೆ. ಇಲ್ಲಿನ ಘಟಕದ ಆವರಣವೂ ಮಣ್ಣಿನಿಂದ ಕೂಡಿದ್ದು, ನಿತ್ಯ ಕರ್ತವ್ಯನಿರ್ವಹಿಸುವ ನೌಕರರು ದೂಳಿನಿಂದ ಅನೇಕ ಕಾಯಿಲೆಗಳಿಗೆ ಈಡಾಗುತ್ತಿದ್ದಾರೆ. ತ್ವರಿತವಾಗಿ ಆವರಣಕ್ಕೆ ಸಿಮೆಂಟ್ ಕಾಂಕ್ರೀಟ್ ಮಾಡಿಸಬೇಕು. ನಗರ ಸಾರಿಗೆಗೆ ಪ್ರತ್ಯೇಕ ನಿಲ್ದಾಣ ನಿರ್ಮಿಸಬೇಕು ಎಂದು ಒತ್ತಾಯಿಸಿದರು.