<p><strong>ಚಿತ್ರದುರ್ಗ</strong>: ‘38 ತಿಂಗಳ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆ. 5ರಿಂದ ಕೆಎಸ್ಆರ್ಟಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ’ ಎಂದು ಎಐಟಿಯುಸಿ ಜಿಲ್ಲಾ ಗೌರವಾಧ್ಯಕ್ಷ ಜಿ.ಸಿ.ಸುರೇಶ್ಬಾಬು ತಿಳಿಸಿದರು.</p>.<p>‘ಶಕ್ತಿ ಯೋಜನೆ ಯಶಸ್ವಿಯಾಗಲು ಕೆಎಸ್ಆರ್ಟಿಸಿ ಸಿಬ್ಬಂದಿಗಳ ಪರಿಶ್ರಮವಿದೆ. ಚಾಲಕರು, ನಿರ್ವಾಹಕರು ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. 38 ತಿಂಗಳ ಬಾಕಿ ವೇತನ ಕೇಳಿದರೆ ಎಸ್ಮಾ ಜಾರಿಗೊಳಿಸಿ ಕ್ರಮ ಕೈಗೊಳ್ಳುತ್ತೇವೆಂದು ರಾಜ್ಯ ಸರ್ಕಾರ ಬೆದರಿಕೆ ಹಾಕುತ್ತಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ರಾಜ್ಯದಲ್ಲಿ 14,00 ಸಿಬ್ಬಂದಿ ಕೊರತೆಯಿದೆ. 4,000ಬಸ್ಗಳು ಕಡಿಮೆಯಿದೆ. ಇರುವುದರಲ್ಲೇ ಸುಧಾರಿಸಿಕೊಂಡು ಸಾರಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಿಸಬೇಕು. ಆದರೆ ಯಾವುದೇ ಸೌಲಭ್ಯಗಳು ನಮಗೆ ದೊರಕುತ್ತಿಲ್ಲ’ ಎಂದು ಫೆಡರೇಷನ್ ಉಪಾಧ್ಯಕ್ಷ ರಹೀಂಸಾಬ್ ಅಳಲು ತೋಡಿಕೊಂಡಿರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಆರ್.ಉಮಾಪತಿ, ಓಂಕಾರಪ್ಪ, ಮೂರ್ತಿನಾಯ್ಕ, ರಾಮಾಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘38 ತಿಂಗಳ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆ. 5ರಿಂದ ಕೆಎಸ್ಆರ್ಟಿಸಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ’ ಎಂದು ಎಐಟಿಯುಸಿ ಜಿಲ್ಲಾ ಗೌರವಾಧ್ಯಕ್ಷ ಜಿ.ಸಿ.ಸುರೇಶ್ಬಾಬು ತಿಳಿಸಿದರು.</p>.<p>‘ಶಕ್ತಿ ಯೋಜನೆ ಯಶಸ್ವಿಯಾಗಲು ಕೆಎಸ್ಆರ್ಟಿಸಿ ಸಿಬ್ಬಂದಿಗಳ ಪರಿಶ್ರಮವಿದೆ. ಚಾಲಕರು, ನಿರ್ವಾಹಕರು ಹಗಲು-ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. 38 ತಿಂಗಳ ಬಾಕಿ ವೇತನ ಕೇಳಿದರೆ ಎಸ್ಮಾ ಜಾರಿಗೊಳಿಸಿ ಕ್ರಮ ಕೈಗೊಳ್ಳುತ್ತೇವೆಂದು ರಾಜ್ಯ ಸರ್ಕಾರ ಬೆದರಿಕೆ ಹಾಕುತ್ತಿದೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ರಾಜ್ಯದಲ್ಲಿ 14,00 ಸಿಬ್ಬಂದಿ ಕೊರತೆಯಿದೆ. 4,000ಬಸ್ಗಳು ಕಡಿಮೆಯಿದೆ. ಇರುವುದರಲ್ಲೇ ಸುಧಾರಿಸಿಕೊಂಡು ಸಾರಿಗೆ ನೌಕರರು ಸೇವೆ ಸಲ್ಲಿಸುತ್ತಿದ್ದಾರೆ. ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಿಸಬೇಕು. ಆದರೆ ಯಾವುದೇ ಸೌಲಭ್ಯಗಳು ನಮಗೆ ದೊರಕುತ್ತಿಲ್ಲ’ ಎಂದು ಫೆಡರೇಷನ್ ಉಪಾಧ್ಯಕ್ಷ ರಹೀಂಸಾಬ್ ಅಳಲು ತೋಡಿಕೊಂಡಿರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಆರ್.ಉಮಾಪತಿ, ಓಂಕಾರಪ್ಪ, ಮೂರ್ತಿನಾಯ್ಕ, ರಾಮಾಂಜನೇಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>