<p>ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಬಸ್ಗಳು ಹಂತ ಹಂತವಾಗಿ ರಸ್ತೆಗೆ ಇಳಿಯುತ್ತಿದ್ದು, ಮಂಗಳವಾರ 105 ಬಸ್ಗಳು ರಾಜ್ಯದ ವಿವಿಧೆಡೆ ಸಂಚಾರ ನಡೆಸಿದವು.</p>.<p>ಆರನೇ ವೇತನ ಆಯೋಗಕ್ಕೆ ಪಟ್ಟುಹಿಡಿದಿರುವ ಸಾರಿಗೆ ನೌಕರರು ಮುಷ್ಕರವನ್ನು ಹದಿನಾಲ್ಕನೇ ದಿನವೂ ಮುಂದುವರೆಸಿದ್ದಾರೆ. ಹೀಗಾಗಿ 950 ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಆದರೆ, ಮಂಗಳವಾರ ದಿಢೀರನೇ 50 ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಏ. 21ರಂದು ಇನ್ನಷ್ಟು ನೌಕರರು ಹಾಜರಾಗುವ ಸಾಧ್ಯತೆ ಇದೆ.</p>.<p>ವಿಭಾಗ ವ್ಯಾಪ್ತಿಯ 294 ಬಸ್ಗಳ ಪೈಕಿ ಧರಣಿ ಕೈಗೊಂಡ ಮೊದಲ ದಿನ 6, ಎರಡು ಮತ್ತು ಮೂರನೇ ದಿನ ತಲಾ ಒಂಬತ್ತು ಬಸ್ಗಳು ಮಾತ್ರ ಸಂಚರಿಸಿದ್ದವು. ಆದರೆ, ಮಂಗಳವಾರದಿಂದ 200 ನೌಕರರು ಆಸಕ್ತಿ ತೋರಿದ ಪರಿಣಾಮ 105 ಬಸ್ಗಳು ರಸ್ತೆಗೆ ಇಳಿದವು.</p>.<p>ಒಟ್ಟು 260 ರೂಟ್ಗಳಿದ್ದು, ಅವುಗಳಲ್ಲಿ 105ಕ್ಕೂ ಹೆಚ್ಚು ರೂಟ್ಗಳಲ್ಲಿ ಸಂಚಾರ ಮೊದಲಿನಂತೆ ಆರಂಭವಾಗಿದೆ. ಚಿತ್ರದುರ್ಗ ಸೇರಿ ನಾಲ್ಕು ಡಿಪೊಗಳ ಬಸ್ಗಳು ಬೆಂಗಳೂರು, ದಾವಣಗೆರೆ, ಭರಮಸಾಗರ, ಶಿವಮೊಗ್ಗ, ಚನ್ನಗಿರಿ, ಹೊಸದುರ್ಗ, ಚಳ್ಳಕೆರೆ, ಪಾವಗಡ, ಹೊಸಪೇಟೆ ಮಾರ್ಗವಾಗಿ ಸಂಚರಿಸಿದವು.</p>.<p>ಮಾಮೂಲಿ ದಿನಗಳಲ್ಲಿ ಚಿತ್ರದುರ್ಗ ವಿಭಾಗದಿಂದ ಸಂಸ್ಥೆಗೆ ₹ 30 ಲಕ್ಷ ಸಂಗ್ರವಾಗುತ್ತಿತ್ತು. 19ರಂದು ₹ 3.5 ಲಕ್ಷ ಸಂಗ್ರಹವಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಭಾಗದಲ್ಲಿರುವ ಸಾರಿಗೆ ಇಲಾಖೆಯ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರು. ಸಂಚಾರ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಿತು.</p>.<p>ಕರ್ತವ್ಯಕ್ಕೆ ಹಾಜರಾಗಿ: ಸೂಚನೆ</p>.<p>‘ಪ್ರಯಾಣಿಕರಿಗೆ ತೊಂದರೆ ಆಗಬಾರದು. ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ವಿಭಾಗದ ಎಲ್ಲ ಬಸ್ಗಳು ಸಂಚಾರ ನಡೆಸಿದರೆ ಉತ್ತಮ. ಆದ್ದರಿಂದ ಕರ್ತವ್ಯಕ್ಕೆ ಹಾಜರಾಗಿ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯ್ಕುಮಾರ್ ನೌಕರರಲ್ಲಿ ಮನವಿ ಮಾಡಿದ್ದಾರೆ.</p>.<p>‘ಚಿತ್ರದುರ್ಗ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ಇಲ್ಲಿಗೆ ವರ್ಗಾವಣೆಗೊಂಡ ಬಹುತೇಕರು ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ 45 ಜನರನ್ನು ಸಂಸ್ಥೆ ಮೊದಲಿದ್ದ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಈಗಲೂ ಗೈರಾಗುತ್ತಿರುವವರು ನಿರ್ಲಕ್ಷ್ಯತೋರದೆ ಹಾಜರಾಗಿ’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಬಸ್ಗಳು ಹಂತ ಹಂತವಾಗಿ ರಸ್ತೆಗೆ ಇಳಿಯುತ್ತಿದ್ದು, ಮಂಗಳವಾರ 105 ಬಸ್ಗಳು ರಾಜ್ಯದ ವಿವಿಧೆಡೆ ಸಂಚಾರ ನಡೆಸಿದವು.</p>.<p>ಆರನೇ ವೇತನ ಆಯೋಗಕ್ಕೆ ಪಟ್ಟುಹಿಡಿದಿರುವ ಸಾರಿಗೆ ನೌಕರರು ಮುಷ್ಕರವನ್ನು ಹದಿನಾಲ್ಕನೇ ದಿನವೂ ಮುಂದುವರೆಸಿದ್ದಾರೆ. ಹೀಗಾಗಿ 950 ನೌಕರರು ಕರ್ತವ್ಯಕ್ಕೆ ಗೈರಾಗಿದ್ದಾರೆ. ಆದರೆ, ಮಂಗಳವಾರ ದಿಢೀರನೇ 50 ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದು, ಏ. 21ರಂದು ಇನ್ನಷ್ಟು ನೌಕರರು ಹಾಜರಾಗುವ ಸಾಧ್ಯತೆ ಇದೆ.</p>.<p>ವಿಭಾಗ ವ್ಯಾಪ್ತಿಯ 294 ಬಸ್ಗಳ ಪೈಕಿ ಧರಣಿ ಕೈಗೊಂಡ ಮೊದಲ ದಿನ 6, ಎರಡು ಮತ್ತು ಮೂರನೇ ದಿನ ತಲಾ ಒಂಬತ್ತು ಬಸ್ಗಳು ಮಾತ್ರ ಸಂಚರಿಸಿದ್ದವು. ಆದರೆ, ಮಂಗಳವಾರದಿಂದ 200 ನೌಕರರು ಆಸಕ್ತಿ ತೋರಿದ ಪರಿಣಾಮ 105 ಬಸ್ಗಳು ರಸ್ತೆಗೆ ಇಳಿದವು.</p>.<p>ಒಟ್ಟು 260 ರೂಟ್ಗಳಿದ್ದು, ಅವುಗಳಲ್ಲಿ 105ಕ್ಕೂ ಹೆಚ್ಚು ರೂಟ್ಗಳಲ್ಲಿ ಸಂಚಾರ ಮೊದಲಿನಂತೆ ಆರಂಭವಾಗಿದೆ. ಚಿತ್ರದುರ್ಗ ಸೇರಿ ನಾಲ್ಕು ಡಿಪೊಗಳ ಬಸ್ಗಳು ಬೆಂಗಳೂರು, ದಾವಣಗೆರೆ, ಭರಮಸಾಗರ, ಶಿವಮೊಗ್ಗ, ಚನ್ನಗಿರಿ, ಹೊಸದುರ್ಗ, ಚಳ್ಳಕೆರೆ, ಪಾವಗಡ, ಹೊಸಪೇಟೆ ಮಾರ್ಗವಾಗಿ ಸಂಚರಿಸಿದವು.</p>.<p>ಮಾಮೂಲಿ ದಿನಗಳಲ್ಲಿ ಚಿತ್ರದುರ್ಗ ವಿಭಾಗದಿಂದ ಸಂಸ್ಥೆಗೆ ₹ 30 ಲಕ್ಷ ಸಂಗ್ರವಾಗುತ್ತಿತ್ತು. 19ರಂದು ₹ 3.5 ಲಕ್ಷ ಸಂಗ್ರಹವಾಗಿದೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಒಳಭಾಗದಲ್ಲಿರುವ ಸಾರಿಗೆ ಇಲಾಖೆಯ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರು. ಸಂಚಾರ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಿತು.</p>.<p>ಕರ್ತವ್ಯಕ್ಕೆ ಹಾಜರಾಗಿ: ಸೂಚನೆ</p>.<p>‘ಪ್ರಯಾಣಿಕರಿಗೆ ತೊಂದರೆ ಆಗಬಾರದು. ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ವಿಭಾಗದ ಎಲ್ಲ ಬಸ್ಗಳು ಸಂಚಾರ ನಡೆಸಿದರೆ ಉತ್ತಮ. ಆದ್ದರಿಂದ ಕರ್ತವ್ಯಕ್ಕೆ ಹಾಜರಾಗಿ’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯ್ಕುಮಾರ್ ನೌಕರರಲ್ಲಿ ಮನವಿ ಮಾಡಿದ್ದಾರೆ.</p>.<p>‘ಚಿತ್ರದುರ್ಗ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ಇಲ್ಲಿಗೆ ವರ್ಗಾವಣೆಗೊಂಡ ಬಹುತೇಕರು ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ 45 ಜನರನ್ನು ಸಂಸ್ಥೆ ಮೊದಲಿದ್ದ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಈಗಲೂ ಗೈರಾಗುತ್ತಿರುವವರು ನಿರ್ಲಕ್ಷ್ಯತೋರದೆ ಹಾಜರಾಗಿ’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>