ತರಾಸು ರಂಗಮಂದಿರದಲ್ಲಿ ಶುಕ್ರವಾರ ಕಾರ್ಯಕ್ರಮ ನಿಗದಿಯಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕ ಕಾರ್ಮಿಕರನ್ನು ಕಾರ್ಮಿಕ ಸಚಿವರು ಸನ್ಮಾನಿಸಬೇಕಾಗಿತ್ತು. ಸಚಿವರು ನಿಗದಿತ ವೇಳೆಗೆ ಬಾರದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಯಿತು. ಈ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನ ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.