<p><strong>ಚಿತ್ರದುರ್ಗ:</strong> ‘ನೋಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗೆ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚನೆಯಾಗಬೇಕು. ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು’ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಆಗ್ರಹಿಸಿದರು.</p>.<p>‘42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರರು, ನಿಯೋಜಕರು, ಮನೆ ಮಾಲೀಕರು ಕಾಮಗಾರಿ ಆರಂಭವಾದ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ 2ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನವಿಲ್ಲದಂತಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಸೆಸ್ ಪಾವತಿಸದ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಜತೆಗೆ ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ’ ಎಂದು ತಿಳಿಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ಮಂಜುನಾಥ್, ಮುಖಂಡರಾದ ಡಿ.ಈಶ್ವರಪ್ಪ, ಆರ್.ಗೌಸ್ಪೀರ್, ನರಸಿಂಹಮೂರ್ತಿ, ಗೌಸ್ಖಾನ್, ರಫೀಕ್, ತಿಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ನೋಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗೆ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚನೆಯಾಗಬೇಕು. ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು’ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ಆಗ್ರಹಿಸಿದರು.</p>.<p>‘42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಗುತ್ತಿಗೆದಾರರು, ನಿಯೋಜಕರು, ಮನೆ ಮಾಲೀಕರು ಕಾಮಗಾರಿ ಆರಂಭವಾದ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ 2ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನವಿಲ್ಲದಂತಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಸೆಸ್ ಪಾವತಿಸದ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಜತೆಗೆ ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ’ ಎಂದು ತಿಳಿಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ಮಂಜುನಾಥ್, ಮುಖಂಡರಾದ ಡಿ.ಈಶ್ವರಪ್ಪ, ಆರ್.ಗೌಸ್ಪೀರ್, ನರಸಿಂಹಮೂರ್ತಿ, ಗೌಸ್ಖಾನ್, ರಫೀಕ್, ತಿಮ್ಮಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>