<p><strong>ಹೊಳಲ್ಕೆರೆ: </strong>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರ ಆರಂಭಿಸಲಾಗಿದ್ದು, ಪೋಷಕರು ಮಕ್ಕಳನ್ನು ದಾಖಲಿಸಬಹುದು ಎಂದು ಶಾಸಕಎಂ. ಚಂದ್ರಪ್ಪ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಪೋಷಣೆಗಾಗಿ ಇಲ್ಲಿ 5 ಬೆಡ್ಗಳ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ. ಅಪೌಷ್ಟಿಕ ಮಕ್ಕಳನ್ನು ಇಲ್ಲಿಗೆ ದಾಖಲಿಸಿದರೆ ಮಗು ಹಾಗೂ ಅವರ ಪೋಷಕರಿಗೆ ನಿತ್ಯ ಪೌಷ್ಟಿಕ ಆಹಾರ ನೀಡಲಾಗುವುದು. 14 ದಿನ ಇಲ್ಲಿ ಇರಬೇಕಿದ್ದು, ಅವರ ದುಡಿಮೆಗೆ ತೊಂದರೆ ಆಗಬಾರದು ಎಂದು ಪೋಷಕರಿಗೆ ₹289 ದಿನದ ಭತ್ಯೆಯನ್ನೂ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಇಲ್ಲಿಗೆ ದಾಖಲಿಸಬೇಕು’ ಎಂದರು.</p>.<p>‘2008ರಲ್ಲಿ ಶಾಸಕನಾಗಿದ್ದಾಗ ಆಸ್ಪತ್ರೆಯ ಹಳೆ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲಾಗಿತ್ತು. ಈಗ ಮತ್ತೆ ₹ 31 ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ಸೇರಿ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>ಮಕ್ಕಳ ತಜ್ಞ ಡಾ.ಬಿ. ಮಂಜುನಾಥ್ ಮಾತನಾಡಿ, ‘1979ರಲ್ಲಿ ದಾವಣಗೆರೆಯ ವೈದ್ಯೆ ನಿರ್ಮಲಾ ಕೇಸರಿ ಅವರು ಮಕ್ಕಳಿಗಾಗಿ ಪೌಷ್ಠಿಕ ಕೇಂದ್ರಆರಂಭಿಸಿದ್ದರು. ಈಗ ಸರ್ಕಾರ ಆಯ್ದ ಆಸ್ಪತ್ರೆಗಳಲ್ಲಿ ಪೌಷ್ಠಿಕ ಆಹಾರ ಕೇಂದ್ರ<br />ಗಳನ್ನು ಆರಂಭಿಸಿದೆ. ತಾಲ್ಲೂಕಿನಲ್ಲಿ 764 ಸಾಧಾರಣ, 14 ತೀವ್ರ ಅಪೌಷ್ಟಿಕತೆ ಹೊಂದಿದ್ದಾರೆ. ಮೊದಲಿಗೆ ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳನ್ನು ದಾಖಲಿಸಿಕೊಳ್ಳಲಾಗುವುದು’ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಕೆ.ಸಿ.ರಮೇಶ್, ಸದಸ್ಯ ಮುರುಗೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ಸಜ್ಜನ್, ಡಿ.ಸಿ.ಮೋಹನ್, ಅರಸನಘಟ್ಟ ಸಂಜಯ್, ಡಾ.ಸುಮಾ, ಡಾ.ರುದ್ರೇಶ್, ಡಾ.ಸಿ.ಎಚ್. ಮಂಜುನಾಥ್, ಸಂತೋಷ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ ನಾಯ್ಕ್, ರಮೇಶ್, ಪ್ರವೀಣ್, ಮರುಳಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ: </strong>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರ ಆರಂಭಿಸಲಾಗಿದ್ದು, ಪೋಷಕರು ಮಕ್ಕಳನ್ನು ದಾಖಲಿಸಬಹುದು ಎಂದು ಶಾಸಕಎಂ. ಚಂದ್ರಪ್ಪ ಹೇಳಿದರು.</p>.<p>ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಪೌಷ್ಟಿಕ ಆಹಾರ ಪುನಶ್ಚೇತನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>‘ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಪೋಷಣೆಗಾಗಿ ಇಲ್ಲಿ 5 ಬೆಡ್ಗಳ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ. ಅಪೌಷ್ಟಿಕ ಮಕ್ಕಳನ್ನು ಇಲ್ಲಿಗೆ ದಾಖಲಿಸಿದರೆ ಮಗು ಹಾಗೂ ಅವರ ಪೋಷಕರಿಗೆ ನಿತ್ಯ ಪೌಷ್ಟಿಕ ಆಹಾರ ನೀಡಲಾಗುವುದು. 14 ದಿನ ಇಲ್ಲಿ ಇರಬೇಕಿದ್ದು, ಅವರ ದುಡಿಮೆಗೆ ತೊಂದರೆ ಆಗಬಾರದು ಎಂದು ಪೋಷಕರಿಗೆ ₹289 ದಿನದ ಭತ್ಯೆಯನ್ನೂ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಇಲ್ಲಿಗೆ ದಾಖಲಿಸಬೇಕು’ ಎಂದರು.</p>.<p>‘2008ರಲ್ಲಿ ಶಾಸಕನಾಗಿದ್ದಾಗ ಆಸ್ಪತ್ರೆಯ ಹಳೆ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಿಸಲಾಗಿತ್ತು. ಈಗ ಮತ್ತೆ ₹ 31 ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ಸೇರಿ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿದರು.</p>.<p>ಮಕ್ಕಳ ತಜ್ಞ ಡಾ.ಬಿ. ಮಂಜುನಾಥ್ ಮಾತನಾಡಿ, ‘1979ರಲ್ಲಿ ದಾವಣಗೆರೆಯ ವೈದ್ಯೆ ನಿರ್ಮಲಾ ಕೇಸರಿ ಅವರು ಮಕ್ಕಳಿಗಾಗಿ ಪೌಷ್ಠಿಕ ಕೇಂದ್ರಆರಂಭಿಸಿದ್ದರು. ಈಗ ಸರ್ಕಾರ ಆಯ್ದ ಆಸ್ಪತ್ರೆಗಳಲ್ಲಿ ಪೌಷ್ಠಿಕ ಆಹಾರ ಕೇಂದ್ರ<br />ಗಳನ್ನು ಆರಂಭಿಸಿದೆ. ತಾಲ್ಲೂಕಿನಲ್ಲಿ 764 ಸಾಧಾರಣ, 14 ತೀವ್ರ ಅಪೌಷ್ಟಿಕತೆ ಹೊಂದಿದ್ದಾರೆ. ಮೊದಲಿಗೆ ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳನ್ನು ದಾಖಲಿಸಿಕೊಳ್ಳಲಾಗುವುದು’ ಎಂದರು.</p>.<p>ಪುರಸಭೆ ಉಪಾಧ್ಯಕ್ಷ ಕೆ.ಸಿ.ರಮೇಶ್, ಸದಸ್ಯ ಮುರುಗೇಶ್, ತಾಲ್ಲೂಕು ವೈದ್ಯಾಧಿಕಾರಿ ಡಾ.ವಿನಯ್ ಸಜ್ಜನ್, ಡಿ.ಸಿ.ಮೋಹನ್, ಅರಸನಘಟ್ಟ ಸಂಜಯ್, ಡಾ.ಸುಮಾ, ಡಾ.ರುದ್ರೇಶ್, ಡಾ.ಸಿ.ಎಚ್. ಮಂಜುನಾಥ್, ಸಂತೋಷ್, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ ನಾಯ್ಕ್, ರಮೇಶ್, ಪ್ರವೀಣ್, ಮರುಳಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>