‘ಈಚೆಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಅವರು ಪೂರ್ವ ನಿರ್ಧರಿತ ಕಾರ್ಯಕ್ರಮದ ಉದ್ದೇಶದಿಂದ ದೆಹಲಿಗೆ ಭೇಟಿ ನೀಡಿದ್ದರು. ನಂತರ ರಾಜ್ಯದಲ್ಲಿ ಯಾವ ನಾಯಕರೂ ನಾಯಕತ್ವ ಬದಲಾವಣೆ ಬಗ್ಗೆ ಗುಪ್ತ ಸಭೆಗಳನ್ನು ನಡೆಸಿಲ್ಲ. ಮುಂದೆಯೂ ನಡೆಸುವುದಿಲ್ಲ. ಮುಖ್ಯಮಂತ್ರಿಯಾಗಿ ನಮ್ಮ ಪ್ರಶ್ನಾತೀತ ನಾಯಕ ಯಡಿಯೂರಪ್ಪನವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದರು.