<p><strong>ಧರ್ಮಪುರ:</strong> ‘ಪ್ರತಿಯೊಬ್ಬ ನಾಗರಿಕರೂ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದರ ಜೊತೆಗೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಆಗ ಶಾಂತಿಯುತ ಸಮಾಜದ ಏಳಿಗೆಯನ್ನು ಕಾಣಲು ಸಾಧ್ಯ’ ಎಂದು ಡಿವೈಎಸ್ಪಿ ಶಿವಕುಮಾರ್ ತಿಳಿಸಿದರು.</p>.<p>ಇಲ್ಲಿನ ಸ್ವಾಭಿಮಾನ್ ವಸತಿ ಶಾಲೆಯ ಮೈದಾನದಲ್ಲಿ ಅಬ್ಬಿನಹೊಳೆ ಪೊಲೀಸ್ ಠಾಣೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾನೂನಿನ ಜಾಗೃತಿ ಜಾತ್ರೆ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತರು ಮತ್ತು ಉದ್ಯೋಗಸ್ಥರು ಇದರ ಬಲೆಯಲ್ಲಿ ಬೀಳುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕು’ ಎಂದು ಸಿಪಿಐ ಗುಡ್ಡಪ್ಪ ತಿಳಿಸಿದರು.</p>.<p>‘ಬಾಲ್ಯವಿವಾಹ, ವರದಕ್ಷಿಣೆ ಪಿಡುಗು, ಬಾಲ ಕಾರ್ಮಿಕ ಪದ್ಧತಿ, ರಸ್ತೆ ಅಪಘಾತ, ಮೊಬೈಲ್ ಬಳಕೆ ಜಾಸ್ತಿಯಾಗಿದೆ. ಜೊತೆಗೆ ಯುವಕರು ಮದ್ಯಪಾನ ಸೇವನೆಯ ದಾಸರಾಗಿದ್ದಾರೆ. ಕುಟುಂಬಗಳಲ್ಲಿ ಉತ್ತಮ ವಾತಾವರಣ ಇಲ್ಲದೆ ಕಲುಷಿತವಾಗಿದೆ’ ಎಂದು ಪಿಎಸ್ಐ ದೇವರಾಜು ತಿಳಿಸಿದರು.</p>.<p>ಪ್ರಾಂಶುಪಾಲ ಪ್ರೊ.ವಿ.ವೀರಣ್ಣ, ರಂಗಸ್ವಾಮಿ ಮಾತನಾಡಿದರು. ಭೀಮಂತರಾಮ್ ಅವರ ಥಿಯೇಟರ್ ಪೋರ್ಟ್ ಕಲಾ ತಂಡದಿಂದ ಕಾನೂನು ಜಾಗೃತಿ ಜಾತ್ರೆ ನಾಟಕ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ಜಾನ್ ಅಮಾನುಲ್ಲಾ, ಕೆಡಿಪಿ ಸದಸ್ಯ ತಿಮ್ಮಯ್ಯ, ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಎಂ.ಶಿವಣ್ಣ, ಈಶ್ವರಪ್ಪ, ಲಕ್ಷ್ಮಿದೇವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ:</strong> ‘ಪ್ರತಿಯೊಬ್ಬ ನಾಗರಿಕರೂ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದರ ಜೊತೆಗೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಆಗ ಶಾಂತಿಯುತ ಸಮಾಜದ ಏಳಿಗೆಯನ್ನು ಕಾಣಲು ಸಾಧ್ಯ’ ಎಂದು ಡಿವೈಎಸ್ಪಿ ಶಿವಕುಮಾರ್ ತಿಳಿಸಿದರು.</p>.<p>ಇಲ್ಲಿನ ಸ್ವಾಭಿಮಾನ್ ವಸತಿ ಶಾಲೆಯ ಮೈದಾನದಲ್ಲಿ ಅಬ್ಬಿನಹೊಳೆ ಪೊಲೀಸ್ ಠಾಣೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾನೂನಿನ ಜಾಗೃತಿ ಜಾತ್ರೆ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತರು ಮತ್ತು ಉದ್ಯೋಗಸ್ಥರು ಇದರ ಬಲೆಯಲ್ಲಿ ಬೀಳುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಎಚ್ಚರದಿಂದ ಇರಬೇಕು’ ಎಂದು ಸಿಪಿಐ ಗುಡ್ಡಪ್ಪ ತಿಳಿಸಿದರು.</p>.<p>‘ಬಾಲ್ಯವಿವಾಹ, ವರದಕ್ಷಿಣೆ ಪಿಡುಗು, ಬಾಲ ಕಾರ್ಮಿಕ ಪದ್ಧತಿ, ರಸ್ತೆ ಅಪಘಾತ, ಮೊಬೈಲ್ ಬಳಕೆ ಜಾಸ್ತಿಯಾಗಿದೆ. ಜೊತೆಗೆ ಯುವಕರು ಮದ್ಯಪಾನ ಸೇವನೆಯ ದಾಸರಾಗಿದ್ದಾರೆ. ಕುಟುಂಬಗಳಲ್ಲಿ ಉತ್ತಮ ವಾತಾವರಣ ಇಲ್ಲದೆ ಕಲುಷಿತವಾಗಿದೆ’ ಎಂದು ಪಿಎಸ್ಐ ದೇವರಾಜು ತಿಳಿಸಿದರು.</p>.<p>ಪ್ರಾಂಶುಪಾಲ ಪ್ರೊ.ವಿ.ವೀರಣ್ಣ, ರಂಗಸ್ವಾಮಿ ಮಾತನಾಡಿದರು. ಭೀಮಂತರಾಮ್ ಅವರ ಥಿಯೇಟರ್ ಪೋರ್ಟ್ ಕಲಾ ತಂಡದಿಂದ ಕಾನೂನು ಜಾಗೃತಿ ಜಾತ್ರೆ ನಾಟಕ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್ಜಾನ್ ಅಮಾನುಲ್ಲಾ, ಕೆಡಿಪಿ ಸದಸ್ಯ ತಿಮ್ಮಯ್ಯ, ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ, ಎಂ.ಶಿವಣ್ಣ, ಈಶ್ವರಪ್ಪ, ಲಕ್ಷ್ಮಿದೇವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>