ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ಗಿರೀಶ, ‘ವಿವೇಕಾನಂದರು ಹೇಳಿದಂತೆ ಯಾವುದೇ ವ್ಯಕ್ತಿ ತನ್ನೊಳಗಿರುವ ಪ್ರತಿಭೆ, ಸಾಮರ್ಥ್ಯ, ಬುದ್ಧಿವಂತಿಕೆ ಪ್ರದರ್ಶಿಸುವುದೇ ಶಿಕ್ಷಣವಾಗಿದೆ. ಅದೇ ರೀತಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳದಿದ್ದರೆ ಎಂತಹ ಶಿಕ್ಷಣ ಪಡೆದರು ಅದು ಪೂರ್ಣವಾಗುವುದಿಲ್ಲ. ಹಲವು ವಿಷಯಗಳಲ್ಲಿ ತಜ್ಞರಾದಾಗ ಸಮಾಜಕ್ಕೆ ಏನಾದರೂ ಕೊಡುಗೆ ನೀಡಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.
ವಕೀಲ ಎನ್.ಬಿ.ವಿಶ್ವನಾಥ್, ಕಾಲೇಜಿನ ಪ್ರಾಂಶುಪಾಲ ಪ್ರೊ.ಆರ್.ಕೆ.ರಂಗಸ್ವಾಮಿ, ಐಕ್ಯುಎಸಿಯ ಡಾ.ರಮೇಶ್ ರಟಗೇರಿ, ವಕೀಲ ಸಂಘದ ಅಧ್ಯಕ್ಷ ಎಸ್.ವಿಜಯ್ಕುಮಾರ್, ಉಪಾಧ್ಯಕ್ಷ ಟಿ.ನಾಗೇಂದ್ರಪ್ಪ, ವಕೀಲ ಎಚ್.ಬಿ.ದೇವಿಪ್ರಸಾದ್ ಇದ್ದರು.