<p><strong>ಹೊಳಲ್ಕೆರೆ</strong>: ‘ವಾರ್ಷಿಕ ₹ 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಮತ್ತು ಜೀತಕ್ಕೆ ಒಳಗಾದವರಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲಾಗುವುದು’ ಎಂದು ತಹಶೀಲ್ದಾರ್ ವಿಜಯ ಕುಮಾರ್ ತಿಳಿಸಿದರು.</p>.<p>ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ನಡೆದ ಲೋಕ ಅದಾಲತ್ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾನೂನಿನ ಅರಿವು ಇರುವುದರಿಂದ ಅನ್ಯಾಯಕ್ಕೆ ಒಳಗಾಗುವುದು ಕಡಿಮೆಯಾಗುತ್ತದೆ. ದೌರ್ಜನ್ಯಕ್ಕೆ ಒಳಗಾದಾಗ ಕಾನೂನಿನ ಮೊರೆ ಹೋಗುವುದರಿಂದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಲೋಕ ಅದಾಲತ್ನಲ್ಲಿ ಕಾನೂನು ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದು’ ಎಂದರು.</p>.<p>ಪ್ಯಾನಲ್ ವಕೀಲ ಆರ್.ಹನುಮಂತಪ್ಪ, ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಮತ್ತು ಲೋಕ ಅದಾಲತ್ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರದೀಪ್, ಸಹಾಯಕ ಕಾನೂನು ನೆರವು ಅಭಿರಕ್ಷಕ ಟಿ.ಮಧು, ವಕೀಲ ಪಿ.ಎಲ್.ಮೂಲೆಮನೆ, ನಿಲಯ ಪಾಲಕರು, ಹಾಸ್ಟೆಲ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: ‘ವಾರ್ಷಿಕ ₹ 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಮತ್ತು ಜೀತಕ್ಕೆ ಒಳಗಾದವರಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲಾಗುವುದು’ ಎಂದು ತಹಶೀಲ್ದಾರ್ ವಿಜಯ ಕುಮಾರ್ ತಿಳಿಸಿದರು.</p>.<p>ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ನಡೆದ ಲೋಕ ಅದಾಲತ್ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕಾನೂನಿನ ಅರಿವು ಇರುವುದರಿಂದ ಅನ್ಯಾಯಕ್ಕೆ ಒಳಗಾಗುವುದು ಕಡಿಮೆಯಾಗುತ್ತದೆ. ದೌರ್ಜನ್ಯಕ್ಕೆ ಒಳಗಾದಾಗ ಕಾನೂನಿನ ಮೊರೆ ಹೋಗುವುದರಿಂದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಲೋಕ ಅದಾಲತ್ನಲ್ಲಿ ಕಾನೂನು ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದು’ ಎಂದರು.</p>.<p>ಪ್ಯಾನಲ್ ವಕೀಲ ಆರ್.ಹನುಮಂತಪ್ಪ, ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಮತ್ತು ಲೋಕ ಅದಾಲತ್ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರದೀಪ್, ಸಹಾಯಕ ಕಾನೂನು ನೆರವು ಅಭಿರಕ್ಷಕ ಟಿ.ಮಧು, ವಕೀಲ ಪಿ.ಎಲ್.ಮೂಲೆಮನೆ, ನಿಲಯ ಪಾಲಕರು, ಹಾಸ್ಟೆಲ್ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>