<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಅಮಕುಂದಿ ಸಮೀಪದ ಮಾವಿನ ತೋಪಿನಲ್ಲಿ ಅಡಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಯಶಸ್ವಿ ಕಾರ್ಯಾಚರಣೆ ನಡೆಸಿದರು.</p>.<p>ನಾಗೇಶ್ ಅವರಿಗೆ ಸೇರಿದ ಮಾವಿನ ತೋಪಿನಲ್ಲಿ ಚಿರತೆ ಕಾಣಸಿಕ್ಕಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಆಗಮಿಸಿದ ಸಿಬ್ಬಂದಿ ಬಲೆ ಬೀಸಿ ಸತತ 2 ಗಂಟೆ ಕಾರ್ಯಾಚರಣೆ ನಡೆಸಿ ಬಲೆಗೆ ಬೀಳಿಸಿದರು.</p>.<p>ಸೆರೆ ಸಿಕ್ಕ ಚಿರತೆಯನ್ನು ಪಟ್ಟಣದ ಎಂ.ಡಿ. ಮಹಾದೇವಪ್ಪ ಸಸ್ಯಕ್ಷೇತ್ರಕ್ಕೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬೋನಿಗೆ ಹಾಕಲಾಯಿತು. ನಂತರ ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯಕ್ಕೆ ಕಳಿಸಿಕೊಡಲಾಯಿತು ಎಂದು ತಾಲ್ಲೂಕು ವಲಯ ಅರಣ್ಯಾಧಿಕಾರಿ ಶ್ರೀಹರ್ಷ ಮಾಹಿತಿ ನೀಡಿದರು.</p>.<p>ಡಿವೈಆರ್ಎಫ್ಒ ತಿಪ್ಪೇಸ್ವಾಮಿ, ಪಶು ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಡಾ. ರಂಗಪ್ಪ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಸಂತೋಷ್ ಕುಮಾರ್, ಶಿವರಾಜ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ಅಮಕುಂದಿ ಸಮೀಪದ ಮಾವಿನ ತೋಪಿನಲ್ಲಿ ಅಡಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಯಶಸ್ವಿ ಕಾರ್ಯಾಚರಣೆ ನಡೆಸಿದರು.</p>.<p>ನಾಗೇಶ್ ಅವರಿಗೆ ಸೇರಿದ ಮಾವಿನ ತೋಪಿನಲ್ಲಿ ಚಿರತೆ ಕಾಣಸಿಕ್ಕಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಆಗಮಿಸಿದ ಸಿಬ್ಬಂದಿ ಬಲೆ ಬೀಸಿ ಸತತ 2 ಗಂಟೆ ಕಾರ್ಯಾಚರಣೆ ನಡೆಸಿ ಬಲೆಗೆ ಬೀಳಿಸಿದರು.</p>.<p>ಸೆರೆ ಸಿಕ್ಕ ಚಿರತೆಯನ್ನು ಪಟ್ಟಣದ ಎಂ.ಡಿ. ಮಹಾದೇವಪ್ಪ ಸಸ್ಯಕ್ಷೇತ್ರಕ್ಕೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಬೋನಿಗೆ ಹಾಕಲಾಯಿತು. ನಂತರ ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯಕ್ಕೆ ಕಳಿಸಿಕೊಡಲಾಯಿತು ಎಂದು ತಾಲ್ಲೂಕು ವಲಯ ಅರಣ್ಯಾಧಿಕಾರಿ ಶ್ರೀಹರ್ಷ ಮಾಹಿತಿ ನೀಡಿದರು.</p>.<p>ಡಿವೈಆರ್ಎಫ್ಒ ತಿಪ್ಪೇಸ್ವಾಮಿ, ಪಶು ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ಡಾ. ರಂಗಪ್ಪ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಸಂತೋಷ್ ಕುಮಾರ್, ಶಿವರಾಜ್, ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>