ಹೊಸದುರ್ಗ (ಚಿತ್ರದುರ್ಗ): ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಬುರುಡೇಕಟ್ಟೆ ಗ್ರಾಮದ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೋಮವಾರ ನಸುಕಿನಲ್ಲಿ ಚಿರತೆ ಸೆರೆಯಾಗಿದೆ.
ಸುಮಾರು ಮೂರು ವರ್ಷದ ಚಿರತೆ, ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಇದರಿಂದಾಗಿ ಜನರು ಆತಂಕದಲ್ಲಿದ್ದರು. ರೈತರು ಜಮೀನಿಗೆ ಹೋಗಲು ಭಯಪಡುತ್ತಿದ್ದರು.
ಜನರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಅದರೊಳಗೆ ಹಸು ಕಟ್ಟಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆಯಾದ ಚಿರತೆಯನ್ನು ಜನರು ತಂಡೋಪತಂಡವಾಗಿ ಬಂದು ವೀಕ್ಷಿಸಿದರು. ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಚಿರತೆ ಸಾಗಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.