ಆನಿವಾಳ ಗ್ರಾಮದಲ್ಲಿ ಮಂಗಳವಾರ ಚಿರತೆಯೊಂದು ಬೋನಿಗೆ ಬಿದ್ದಿತ್ತು. ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಿಳಿರಂಗಯ್ಯನ ಬೆಟ್ಟದ ಅರಣ್ಯಧಾಮಕ್ಕೆ ಬಿಟ್ಟು ಬಂದಿದ್ದರು. ಇನ್ನೆರಡು ಚಿರತೆಗಳಿವೆ ಎಂಬ ಖಚಿತ ಮಾಹಿತಿ ಮೇರೆಗೆ ಚೌಡಮ್ಮ ದೇವಸ್ಥಾನದ ಆಸುಪಾಸಿನಲ್ಲಿ ಬೋನ್ ಇರಿಸಲಾಗಿತ್ತು. ಬೋನಿನೊಳಗೆ ಮೇಕೆ ಮರಿ ಇರಿಸಿ ಚಿರತೆ ಸೆರೆ ಹಿಡಿಯಲು ಯೋಜನೆ ರೂಪಿಸಲಾಗಿತ್ತು. ಇಲಾಖೆ ಯೋಜನೆ ಪ್ರಕಾರವೇ ಮೇಕೆ ತಿನ್ನಲು ಬಂದ ಚಿರತೆ ಬೋನಿನೊಳಗೆ ಕಾಲಿಟ್ಟು ಬಂಧಿಯಾಗಿದೆ.