ನಾಲ್ಕೈದು ದಿನಗಳ ಹಿಂದೆ ಸಮೀಪದ ಹೊನ್ನಕಾಲುವೆ ಗ್ರ್ರಾಮದಲ್ಲಿ ಚಿರತೆಯೊಂದು ಹಸುವಿನ ಕರುವೊಂದನ್ನು ಹಿಡಿದುಕೊಂಡು ಹೋಗಿತ್ತು. ಚಿಕ್ಕಎಮ್ಮಿಗನೂರು, ಕಡೂರು, ಹೊನ್ನಕಾಲುವೆ ಸುತ್ತಲಿನ ಪ್ರದೇಶಗಳಲ್ಲಿ ಚಿರತೆ ಇರುವ ಮಾಹಿತಿ ಇದ್ದು, ಚಿಕ್ಕಎಮ್ಮಿಗನೂರು ಕಾವಲಿನಲ್ಲಿ ಬೋನು ಇಡಲಾಗಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ಇದಾಯತ್ ಮಾಹಿತಿ ನೀಡಿದರು.