ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ದಾಟುತ್ತಿದ್ದ ಮರಿ ಚಿರತೆ ಅಪಘಾತಕ್ಕೆ ಬಲಿ

Last Updated 12 ಅಕ್ಟೋಬರ್ 2020, 8:58 IST
ಅಕ್ಷರ ಗಾತ್ರ

ಚಿತ್ರದುರ್ಗ: ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿ ಸಮೀಪದ ಮಂಗಳೂರು–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

ಸುಮಾರು 8 ತಿಂಗಳ ಪ್ರಾಯದ ಹೆಣ್ಣು ಚಿರತೆ ಅಪಘಾತಕ್ಕೆ ಬಲಿಯಾಗಿದೆ. ಭಾನುವಾರ ನಸುಕಿನಲ್ಲಿ ಅಪಘಾತ ಸಂಭವಿಸಿದೆ. ಮರಿಯೊಂದಿಗೆ ಇದ್ದ ತಾಯಿ ಚಿರತೆ ಅಪಾಯದಿಂದ ಪಾರಾಗಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ವಾಚರ್‌ಗೆ ಚಿರತೆ ಅಪಘಾತಕ್ಕೆ ಬಲಿಯಾಗಿದ್ದು ಗೊತ್ತಾಗಿದೆ. ನಸುಕಿನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತ ಚಿರತೆ ಮರಿಯನ್ನು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ತಂದಿದ್ದಾರೆ. ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವನ್ಯಜೀವಿ ನಿಯಮದ ಪ್ರಕಾರ ಚಿರತೆಯನ್ನು ಸುಟ್ಟುಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT