ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆಯ ವಾಚರ್ಗೆ ಚಿರತೆ ಅಪಘಾತಕ್ಕೆ ಬಲಿಯಾಗಿದ್ದು ಗೊತ್ತಾಗಿದೆ. ನಸುಕಿನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೃತ ಚಿರತೆ ಮರಿಯನ್ನು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ತಂದಿದ್ದಾರೆ. ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವನ್ಯಜೀವಿ ನಿಯಮದ ಪ್ರಕಾರ ಚಿರತೆಯನ್ನು ಸುಟ್ಟುಹಾಕಲಾಗಿದೆ.